ತೆರಿಗೆ ಪಾವತಿಸದ ಮೊಬೈಲ್‌ ಟವರ್‌ಗಳಿಗೆ ನೋಟಿಸ್‌

By Kannadaprabha NewsFirst Published Oct 18, 2019, 9:56 AM IST
Highlights

ಮೊಬೈಲ್ ಟವರ್‌ಗಳು ತೆರಿಗೆ ಪಾವತಿಸುತ್ತಿಲ್ಲ ಎಂಬ ದೂರು ಮಂಗಳೂರಿನಲ್ಲಿ ಕೇಳಿ ಬಂದಿದ್ದು, ಇಂತಹ ಮೊಬೈಲ್ ಟವರ್‌ಗಳಿಗೆ ನೋಟಿಸ್ ನೀಡಲು ಸಚಿವ ಕೋಟ ಆದೇಶಿದ್ದಾರೆ.

ಮಂಗಳೂರು(ಅ.18): ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಮೊಬೈಲ್‌ ಫೋನ್‌ ಟವರ್‌ ಕಂಪೆನಿಗಳು ಗ್ರಾಮ ಪಂಚಾಯಿತಿಗೆ ತೆರಿಗೆ ಪಾವತಿ ಮಾಡುತ್ತಿಲ್ಲ ಎಂಬ ದೂರುಗಳು ಹೆಚ್ಚು ಬಂದಿವೆ. ಹಾಗಾಗಿ ಅಂತಹ ಕಂಪೆನಿಗಳ ವಿರುದ್ಧ ನೋಟಿಸ್‌ ನೀಡಿ ತೆರಿಗೆ ಕಟ್ಟುವಂತೆ ಆದೇಶ ನೀಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್‌ ಸಭಾಂಗಣದಲ್ಲಿ ಗುರುವಾರ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ್ದಾರೆ.  ಪೆರ್ಮುದೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ನಿವೇಶನ ರಹಿತರಿಗೆ ಜಮೀನು ಕಾದಿರಿಸುವ ಬಗ್ಗೆ ಮಾತನಾಡಿದ ಕೋಟ, ಕೆಲವು ಜಮೀನುಗಳ ವಿಚಾರಗಳು ಕೋರ್ಟ್‌ನಲ್ಲಿ ವಿಚಾರಣೆಯ ಹಂತದಲ್ಲಿವೆ ಎಂದಿದ್ದಾರೆ.

ಆದಷ್ಟು ಬೇಗನೆ ಈ ಕಾರ್ಯ ಪೂರ್ಣಗೊಳ್ಳುವ ಭರವಸೆ ಇದೆ ಹಾಗೂ ರಾಜೀವ್‌ ಗಾಂಧಿ ನಿವೇಶನ ಯೋಜನೆಯಡಿ ಖಾಲಿ ಇರುವ ಸರ್ಕಾರಿ ಜಮೀನುಗಳನ್ನು ಸರ್ವೇ ಮಾಡಿ ನಿವೇಶನ ಇಲ್ಲದವರಿಗೆ ನ್ಯಾಯಬದ್ಧವಾಗಿ ವಿತರಿಸಿ ಎಂದು ಹೇಳಿದ್ದಾರೆ.

ಮಕ್ಕಳು ನೀರು ಕುಡಿಯದೇ ಬಾಟಲ್ ವಾಪಸ್ ತರ್ತಾರ..? ಈ ಶಾಲೆಯಲ್ಲಿದೆ ಹೊಸ ಐಡಿಯಾ..!

25 ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ: ಕನ್ನಡ ರಾಜೋತ್ಸವ ಪ್ರಶಸ್ತಿ ಆಯ್ಕೆ ಮಾಡುವ ಸಂದರ್ಭದಲ್ಲಿ ನಿಯಾಮಾನುಸಾರವಾಗಿ ಸರ್ಕಾರದ ಮಾನದಂಡದ ಮೂಲಕ ಆಯ್ಕೆ ಮಾಡಬೇಕು. ರಾಜ್ಯ ಮಟ್ಟದಲ್ಲಿ ಪ್ರಶಸ್ತಿ ನೀರಿಕ್ಷೆ ಇದ್ದವರಿಗೆ ಅಲ್ಲಿ ಪ್ರಶಸ್ತಿ ಸಿಗದೆ ಇದ್ದಾಗ ಜಿಲ್ಲಾ ಮಟ್ಟದಲ್ಲಿ ನೀಡುವುದು ಸಮಾಧಾನಕರವಾಗಿರುತ್ತದೆ ಎಂದ ಸಚಿವರು, ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಬಂದಿರುವಂತಹ ಅರ್ಜಿಗಳ ಮಾಹಿತಿ ಪಡೆದರು. ಎಲ್ಲ ಕ್ಷೇತ್ರಗಳಿಗೆ ಹಂಚಿಕೆಯಾಗುವಂತೆ ಕನಿಷ್ಠ 25 ಪ್ರಶಸ್ತಿಗಳನ್ನು ನೀಡಬೇಕು ಎಂದು ತಿಳಿಸಿದ್ದಾರೆ.

ಅಬ್ಬಕ್ಕ ಉತ್ಸವ:

ಜಿಲ್ಲಾಡಳಿತದ ಮೂಲಕ ನಡೆಯುವಂತಹ ಪ್ರತಿ ಉತ್ಸವಗಳಿಗೆ ಸಂಬಧಪಟ್ಟಸಮಿತಿಗಳು ತಮ್ಮ ಸಲಹೆಗಳನ್ನು ನೀಡಬಹುದು. ಅಬ್ಬಕ್ಕ ಉತ್ಸವಕ್ಕೆ ಸಂಬಂಧಿಸಿದ ಎರಡು ಸಮಿತಿಗಳನ್ನು ಸೇರಿಸಿ ಸಭೆ ನಡೆಸುವ ಹಾಗೂ ಅವರ ಅಭಿಪ್ರಾಯಗಳನ್ನು ಪಡೆದು ಸರ್ಕಾರದ ನಿಯಮದ ಪ್ರಕಾರ ಉತ್ಸವ ನಡೆಸುವುದು ಸೂಕ್ತ. ಕರಾವಳಿ ಉತ್ಸವದ ಹಿಂದಿನ ವರ್ಷದ ಮಾದರಿಯನ್ನು ಸರ್ಕಾರಕ್ಕೆ ನೀಡಿ ಅದರಂತೆ ಪ್ರಸ್ತುತ ಕರಾವಳಿ ಉತ್ಸವ ನಡೆಸಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಕಂಬಳ:

ಪಿಲಿಕುಳದಲ್ಲಿ ಜಿಲ್ಲೆಯ ಜಾನಪದ ಕಲೆಯಾದ ಕಂಬಳವನ್ನು ಜನವರಿ ಅಂತ್ಯದಲ್ಲಿ ಅಥವಾ ಫೆಬ್ರವರಿಯಲ್ಲಿ ನಡೆಸಬಹುದಾಗಿದೆ. ಇದಕ್ಕೆ ಎಲ್ಲ ರೀತಿಯ ಪೂರ್ವ ಸಿದ್ಧತೆಗಳನ್ನು ನಡೆಸುವಂತೆ ಸೂಚಿಸಿದರು. ಕಂಬಳಕ್ಕೆ ಬೇಕಾಗುವ ಅನುದಾನದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು ಅನುದಾನದ ಬಗ್ಗೆ ಪ್ರಸ್ತಾವನೆಯನ್ನು ಸರ್ಕಾರಕ್ಕೆ ನೀಡಿ, ಆದಷ್ಟುಬೇಗ ಮಂಜೂರು ಮಾಡಿಸುವಂತೆ ಭರವಸೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಸಿಂಧು ಬಿ. ರೂಪೇಶ್‌, ಅಪರ ಜಿಲ್ಲಾಧಿಕಾರಿ ಎಂ.ಜೆ ರೂಪ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಆರ್‌. ಸೆಲ್ವಮಣಿ, ಉಳ್ಳಾಲ ಶಾಸಕ ಯು.ಟಿ. ಖಾದರ್‌, ಮೂಡುಬಿದಿರೆ ಶಾಸಕ ಊಮಾನಾಥ ಕೋಟ್ಯಾನ್‌ ಹಾಗೂ ಸಂಬಂಧಪಟ್ಟಅಧಿಕಾರಿಗಳು ಇದ್ದರು.

ಸಿಕ್ಕಾಪಟ್ಟೆ ಜಾಮ್, ಕಾರಿನಿಂದಿಳಿದು ಆ್ಯಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಖಾದರ್

click me!