ಭೀಕರ ಬಸ್ ಅಪಘಾತ : 6 ಜನರ ಸ್ಥಿತಿ ಗಂಭೀರ

Published : Nov 03, 2019, 09:42 AM IST
ಭೀಕರ ಬಸ್ ಅಪಘಾತ : 6 ಜನರ ಸ್ಥಿತಿ ಗಂಭೀರ

ಸಾರಾಂಶ

ಲಾರಿ ಮತ್ತು ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ  6 ಜನರಿಗೆ ಗಂಭೀರ ಗಾಯವಾಗಿದೆ. ದಾವಣಗೆರೆ ಜಿಲ್ಲೆಯಲ್ಲಿ ಬೆಂಗಳೂರಿಗೆ ಬರುತ್ತಿದ್ದ ಬಸ್‌ಗೆ ಲಾರಿ ಡಿಕ್ಕಿಯಾಗಿದೆ. 

ದಾವಣಗೆರೆ [ನ.03]: ಲಾರಿ ಹಾಗೂ ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. 

ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಕಾನನಕಟ್ಟೆ ಬಳಿ ಹೊಸಪೇಟೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ - ಲಾರಿ ನಡುವೆ ಅಪಘಾತವಾಗಿದೆ. 

ಗಂಭೀರವಾಗಿ ಗಾಯಗೊಂಡ 6 ಮಂದಿಯನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಾನನನಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಿಂದ ರಸ್ತೆಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ಇದರಿಂದ ವಾಹನ ಸವಾರರು ಪರದಾಡುವಂತಾಗಿದೆ. 

ಸುಮ್ಮನಹಳ್ಳಿ ಮೇಲ್ಸೇತುವೆಯಲ್ಲಿ ಗುಂಡಿ: 10 ದಿನ ಸಂಚಾರ ನಿಷೇಧ..!...

ಸ್ಥಳದಕ್ಕೇ ಜಗಳೂರು ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಜಗಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

PREV
click me!

Recommended Stories

ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
ಆನ್ಲೈನ್ ಗೇಮ್ ಆಡುತ್ತಾ, ಒಂಟಿಯಾಗಿದ್ದ ಅಜ್ಜಿ ಮನೆಗೆ ಹೊಕ್ಕ ಎಂ.ಕಾಂ ಪದವೀಧರ; ಮುಂದಾಗಿದ್ದ ಪೈಶಾಚಿಕ ಕೃತ್ಯ!