2047ಕ್ಕೆ 32 ಟ್ರಿಲಿಯನ್‌ ಡಾಲರ್‌ ಮೌಲ್ಯದ ಆರ್ಥಿಕತೆ ಗುರಿ: ಪ್ರಲ್ಹಾದ್ ಜೋಶಿ

Published : Oct 04, 2022, 01:39 PM IST
2047ಕ್ಕೆ 32 ಟ್ರಿಲಿಯನ್‌ ಡಾಲರ್‌ ಮೌಲ್ಯದ ಆರ್ಥಿಕತೆ ಗುರಿ: ಪ್ರಲ್ಹಾದ್ ಜೋಶಿ

ಸಾರಾಂಶ

32 ಟ್ರಿಲಿಯನ್‌ ಡಾಲರ್‌ ಮೌಲ್ಯದ ಆರ್ಥಿಕತೆ ಗುರಿ 2047ರ ವೇಳೆ 32 ಟ್ರಿಲಿಯನ್‌ ಮೌಲ್ಯದ ಆರ್ಥಿಕ ಶಕ್ತಿಯಾಗುವ ಕನಸಿದೆ ಈಗಿನಿಂದಲೇ ಕಾರ್ಯಪ್ರವೃತ್ತರಾದರೆ ಇದು ಸಾಧ್ಯ: ಪ್ರಹ್ಲಾದ ಜೋಶಿ

ಹುಬ್ಬಳ್ಳಿ (ಅ.4) : 2047ರ ಹೊತ್ತಿಗೆ ದೇಶವೂ 32 ಟ್ರಿಲಿಯನ್‌ ಡಾಲರ್‌ ಮೌಲ್ಯದ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಬೇಕೆನ್ನುವ ಗುರಿ ಪ್ರಧಾನಿ ನರೇಂದ್ರ ಮೋದಿ ಹೊಂದಿದ್ದಾರೆ. ಈ ನಿಟ್ಟಿನಲ್ಲಿ ಈಗಿನಿಂದಲೇ ಕಾರ್ಯಪ್ರವೃತ್ತರಾಗಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಬೆಂಗಳೂರು ತಂತ್ರಜ್ಞಾನ ಶೃಂಗಸಭೆಗೆ ಪೂರ್ವಭಾವಿಯಾಗಿ ಕರ್ನಾಟಕ ಡಿಜಿಟಲ್‌ ಮಿಷನ್‌ ಸೋಮವಾರ ಇಲ್ಲಿನ ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಿದ್ದ ‘ಬಿಯಾಂಡ್‌ ಬೆಂಗಳೂರು- 2022 ‘ಟೆಕ್ಸಿಲರೇಷನ್‌’ ಔದ್ಯಮಿಕ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ರಾಹುಲ್ ಗಾಂಧಿಯನ್ನು ಯಾರು ಸೀರಿಯಸ್ ಆಗಿ ತೆಗೆದುಕೊಳ್ಳಲ್ಲ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಭಾರತ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ದೇಶ. ಆರ್ಥಿಕತೆಯಲ್ಲಿ 5ನೇ ಸ್ಥಾನದಲ್ಲಿದ್ದೇವೆ. 2047ರ ಭಾರತದ ಸ್ವಾತಂತ್ರ್ಯೋತ್ಸವದ ಶತಮಾನೋತ್ಸವ. ಆಗ ನಮ್ಮ ದೇಶದ್ದು 32 ಟ್ರಿಲಿಯನ್‌ ಡಾಲರ್‌ ಮೌಲ್ಯದ ಆರ್ಥಿಕತೆ ಶಕ್ತಿಯಾಗಿ ಹೊರಹೊಮ್ಮಬೇಕೆನ್ನುವ ಗುರಿ ಇದೆ. ಆ ನಿಟ್ಟಿನಲ್ಲಿ ಕರ್ನಾಟಕದ ಪಾತ್ರ ಏನಿರಬೇಕು? ಪ್ರತಿಯೊಂದು ರಿಜನ್‌ನ ಪಾತ್ರ ಏನಿರಬೇಕು ಎಂಬುದನ್ನು ಈಗಲೇ ನಿರ್ಧರಿಸಿ ಅದನ್ನು ಸಾಧಿಸುವತ್ತ ಹೆಜ್ಜೆ ಇಡಬೇಕು ಎಂದರು.

ಇದು ಸಾಧ್ಯವಾಗಬೇಕೆಂದರೆ ಉದ್ಯಮಿಗಳ ಮನೋಭಾವ ಬದಲಿಸಬೇಕಿದೆ. ಬೆಂಗಳೂರಿನ ವ್ಯಾಮೋಹದಿಂದ ಉದ್ಯಮಿಗಳು ಹೊರ ಬರಬೇಕು. ಈ ಕೆಲಸವನ್ನು ಅಧಿಕಾರಿಗಳು ಮಾಡಬೇಕು. ಬೆಂಗಳೂರಿನ ಮೋಹದಿಂದ ಹೊರಬಂದು 2ನೇ ಮತ್ತು 3ನೇ ಸ್ತರದ ನಗರಗಳಲ್ಲಿ ಉದ್ದಿಮೆಗಳು ಸ್ಥಾಪಿಸುವಂತಾಗಬೇಕು. ಕೇಂದ್ರ ಸರ್ಕಾರವೂ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ. ಕೈಗಾರಿಕೆ ಸ್ಥಾಪನೆ ವಿಷಯ ಸೇರಿದಂತೆ ಅಭಿವೃದ್ಧಿ ವಿಷಯದಲ್ಲಿ ಕೇಂದ್ರ ಸರ್ಕಾರ ಸದಾ ಬದ್ಧ. ಈ ವಿಷಯವಾಗಿ ರಾಜ್ಯಕ್ಕೆ ಅಗತ್ಯ ಸಹಕಾರ ನೀಡಲು ಸಿದ್ಧ ಎಂದು ಜೋಶಿ ತಿಳಿಸಿದರು.

ಬಿಯಾಂಡ್‌ ಬೆಂಗಳೂರು ತರಹದ ಉಪಕ್ರಮಗಳು ಸ್ವಾಗತಾರ್ಹ. ಇವು ತ್ವರಿತಗತಿಯಲ್ಲಿ ನಡೆಯಬೇಕಾಗಿವೆ ಎಂದ ಅವರು, ಈ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದರು.

ಧಾರವಾಡ: ಶೀಘ್ರದಲ್ಲೇ  IIT Campus ಉದ್ಘಾಟನೆ - ಪ್ರಲ್ಹಾದ್ ಜೋಶಿ

ಕೋವಿಡ್‌ ನಂತರ ಭಾರತವು ಜಾಗತಿಕ ನಾಯಕನಾಗಿ ಹೊರಹೊಮ್ಮಿದೆ. ಬೇರೆ ದೇಶಗಳಿಗೆ ಹೋಲಿಸಿದರೆ ಹಣದುಬ್ಬರ ನಿಯಂತ್ರಣದಲ್ಲಿದೆ. ಪಿಎಂ ಗತಿಶಕ್ತಿ ಯೋಜನೆಯಡಿ ತುಮಕೂರು-ದಾವಣಗೆರೆ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಒತ್ತು ಕೊಡಲಾಗಿದ್ದು, ಹುಬ್ಬಳ್ಳಿ-ಬೆಂಗಳೂರು ನಡುವೆ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿಗೆ ಒಪ್ಪಿಗೆ ನೀಡಲಾಗಿದೆ. ಈ ವರ್ಷದ ಡಿಸೆಂಬರ್‌ ಹೊತ್ತಿಗೆ ಹುಬ್ಬಳ್ಳಿ-ಬೆಂಗಳೂರು ರೈಲು ಮಾರ್ಗದ ವಿದ್ಯುದೀಕರಣ ಸಂಪೂರ್ಣವಾಗಲಿದೆ ಎಂದು ವಿವರಿಸಿದರು. ಹುಬ್ಬಳ್ಳಿ-ಧಾರವಾಡ ಸೇರಿದಂತೆ ಉತ್ತರ ಕರ್ನಾಟಕದ ಹಲವು ನಗರಗಳು ಉದ್ಯಮಗಳ ಸ್ಥಾಪನೆಗೆ ಹೇಳಿ ಮಾಡಿಸಿದ ಜಾಗೆ. ಇಲ್ಲಿ ಪ್ರವಾಹ ಬರಲ್ಲ. ಸಂಪರ್ಕ ಅತ್ಯಂತ ಸುಸಜ್ಜಿತವಾಗಿದೆ ಎಂದರು.

PREV
Read more Articles on
click me!

Recommended Stories

'ನಮ್ಮ ವಯಸ್ಸು ಮೀರುತ್ತಿದೆ, ಬೇಗ ಜಾಬ್ ಕರೆಯಲು ಹೇಳಿ ಸರ್' ಪೊಲೀಸ್ ಕಮಿಷನರ್ ಎದುರು ಗಳಗಳನೇ ಅತ್ತ ಕೊಪ್ಪಳ ಯುವತಿ
ಜಾಸ್ತಿ ಬೇಡ ಎರಡೇ ಮಕ್ಕಳನ್ನಷ್ಟೇ ಮಾಡಿಕೊಳ್ಳಿ: ನವದಂಪತಿಗಳಿಗೆ ಸಿಎಂ ಸಲಹೆ