Dharwad: ₹50 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ತಹಶೀಲ್ದಾರ್ ಲೋಕಾ ಬಲೆಗೆ: ₹1 ಕೋಟಿ ಲಂಚದ ಡೀಲ್ ಬಯಲು!

Published : Sep 16, 2026, 11:14 PM IST
Dharwad Tahashildar

ಸಾರಾಂಶ

ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ಅವರು ಜಮೀನಿನ 'ಅ' ಖರಾಬ್ ತೆಗೆಯಲು ₹1 ಕೋಟಿ ಹಾಗೂ 1 ಎಕರೆ ಜಮೀನಿಗೆ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ ₹50 ಲಕ್ಷ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅವರನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.

ಧಾರವಾಡ ಜಿಲ್ಲೆಯಲ್ಲಿ ಲಂಚಾವತಾರಕ್ಕೊಂದು ದೊಡ್ಡ ಸಾಕ್ಷಿ ಸಿಕ್ಕಿದ್ದು, ಭೂಮಿಯ 'ಅ' ಖರಾಬ್ ತೆಗೆದು ಕೊಡುವುದಕ್ಕಾಗಿ ಬೃಹತ್ ಮೊತ್ತದ ಲಂಚದ ಹಣ ಪಡೆಯುತ್ತಿದ್ದ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ಲೋಕಾಯುಕ್ತ ಅಧಿಕಾರಿಗಳ ಕಾರ್ಯಾಚರಣೆಯಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಮುಂಗಡವಾಗಿ ₹50 ಲಕ್ಷ ನಗದು ಸ್ವೀಕರಿಸುವಾಗಲೇ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಅವರನ್ನು ವಶಕ್ಕೆ ಪಡೆದಿದ್ದಾರೆ.

ಪ್ರಕರಣದ ವಿವರ ಹಾಗೂ ಹಿನ್ನೆಲೆ!

ಬಾಗಲಕೋಟೆ ಜಿಲ್ಲೆ ಮೂಲದ ಮಂಜುನಾಥ್ ಎಂಬ ರಿಯಲ್ ಎಸ್ಟೇಟ್ ಡೆವಲಪರ್, ಧಾರವಾಡ ತಾಲೂಕಿನ ಯರಿಕೊಪ್ಪ ಗ್ರಾಮದ ಬಳಿ ಭೂಮಿ ಖರೀದಿಸಿದ್ದರು. ಈ ಜಮೀನನ್ನು ಡೆವಲಪ್‌ಮೆಂಟ್ ಮಾಡಲು ಉದ್ದೇಶಿಸಿದ್ದ ಮಂಜುನಾಥ್, ಜಮೀನಿನಲ್ಲಿದ್ದ 'ಅ' ಖರಾಬ್ ಭಾಗವನ್ನು ಅಧಿಕೃತವಾಗಿ ತೆಗೆದುಹಾಕಲು ತಾಲೂಕು ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಆದರೆ, ನಿಯಮಾನುಸಾರ ಕೆಲಸ ಮಾಡಿಕೊಡಬೇಕಿದ್ದ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್, ಈ ಕೆಲಸಕ್ಕಾಗಿ ಕಮಿಷನ್ ಬೇಡಿಕೆ ಇಟ್ಟಿದ್ದರು.

₹1 ಕೋಟಿ ನಗದು ಮತ್ತು 1 ಎಕರೆ ಜಮೀನಿನ ಬೇಡಿಕೆ!

ಜಮೀನಿನ ಖರಾಬ್ ತೆಗೆದು ಸರಿಪಡಿಸಿಕೊಡಲು ತಹಶೀಲ್ದಾರ್ ಸಚ್ಚಿದಾನಂದ ಅವರು ಬೃಹತ್ ಮೊತ್ತದ ಆಸೆಗೆ ಬಿದ್ದಿದ್ದರು. ಡೆವಲಪರ್ ಮಂಜುನಾಥ್ ಬಳಿ ಬರೋಬ್ಬರಿ ₹1 ಕೋಟಿ ನಗದು ಹಣ ಹಾಗೂ 1 ಎಕರೆ ಜಮೀನನ್ನು ತಮ್ಮ ಹೆಸರಿಗೆ ನೀಡುವಂತೆ ಕಟ್ಟುನಿಟ್ಟಿನ ಲಂಚದ ಬೇಡಿಕೆ ಇಟ್ಟಿದ್ದರು. ಲಂಚ ನೀಡಲು ಇಷ್ಟವಿಲ್ಲದ ಡೆವಲಪರ್ ಮಂಜುನಾಥ್ ಈ ಕುರಿತು ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು.

ಲೋಕಾಯುಕ್ತ ಹೈ-ಡ್ರಾಮಾ ಕಾರ್ಯಾಚರಣೆ!

ದೂರು ದಾಖಲಿಸಿಕೊಂಡ ಲೋಕಾಯುಕ್ತ ಅಧಿಕಾರಿಗಳು ತಹಶೀಲ್ದಾರ್ ಅವರನ್ನು ರೆಡ್ ಹ್ಯಾಂಡ್ ಆಗಿ ಹಿಡಿಯಲು ಪಕ್ಕಾ ಸ್ಕೆಚ್ ಹಾಕಿದ್ದರು. ಮೊದಲ ಕಂತಾಗಿ ₹50 ಲಕ್ಷ ಲಂಚದ ಹಣವನ್ನು ತಹಶೀಲ್ದಾರ್ ಸಚ್ಚಿದಾನಂದ ಅವರಿಗೆ ನೀಡಲು ಸಂಚು ರೂಪಿಸಲಾಗಿತ್ತು. ಅದರಂತೆ ಧಾರವಾಡದಲ್ಲಿ ಹಣ ಸ್ವೀಕರಿಸುತ್ತಿದ್ದ ಕ್ಷಣದಲ್ಲೇ, ಪೂರ್ವನಿಯೋಜಿತವಾಗಿ ನಿಗಾ ವಹಿಸಿದ್ದ ಲೋಕಾಯುಕ್ತ ತಂಡ ದಿಢೀರ್ ದಾಳಿ ನಡೆಸಿದೆ. ₹50 ಲಕ್ಷ ನಗದು ಹಣದೊಂದಿಗೆ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ಅವರನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಲಾಗಿದೆ.

ಸಿದ್ದಲಿಂಗಪ್ಪ ನೇತೃತ್ವದ ತಂಡದಿಂದ ದಾಳಿ!

ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ಅವರ ನೇರ ಮಾರ್ಗದರ್ಶನ ಹಾಗೂ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಲಂಚದ ಹಣವನ್ನು ವಶಪಡಿಸಿಕೊಂಡಿರುವ ಅಧಿಕಾರಿಗಳು, ತಹಶೀಲ್ದಾರ್ ಸಚ್ಚಿದಾನಂದ ಅವರ ಕಚೇರಿ ಹಾಗೂ ನಿವಾಸದ ಮೇಲೆಯೂ ಪರಿಶೀಲನೆ ನಡೆಸುತ್ತಿದ್ದಾರೆ. ಬಂಧಿತ ಅಧಿಕಾರಿಯ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ (Prevention of Corruption Act) ಪ್ರಕರಣ ದಾಖಲಿಸಲಾಗಿದ್ದು, ಲೋಕಾಯುಕ್ತ ಪೊಲೀಸರು ಮುಂದಿನ ಕಾನೂನು ಕ್ರಮ ಜರುಗಿಸುತ್ತಿದ್ದಾರೆ.

PREV
Read more Articles on
click me!

Recommended Stories

Amit Shah: ಅಂದು ಹೈ-ಅಲರ್ಟ್, ಹೈ-ಸೆಕ್ಯುರಿಟಿ! ಹುಬ್ಬಳ್ಳಿಯಿಂದ ಕೇಂದ್ರ ಸಚಿವ ಅಮಿತ್ ಶಾ ಸಂಚಾರ! ಇಲ್ಲಿದೆ ಟೈಮ್ ಟು ಟೈಮ್ ಕಂಪ್ಲೀಟ್ ಶೆಡ್ಯೂಲ್!
ಬಾಗಿಲಲ್ಲಿ ಯಾರೋ ತಂದಿಟ್ಟ ಗಣೇಶನನ್ನು ಮನೆಯಲ್ಲಿ ಪ್ರತಿಷ್ಠಾಪಿಸಿದ ಮುಸ್ಲಿಂ ಕುಟುಂಬ