ಸಿಎಂ ಭೇಟಿ ಮಾಡಲು ಬಂದ ದಿವ್ಯಾಂಗ ವ್ಯಕ್ತಿ ಮೇಲೆ ಪೊಲೀಸರ ದರ್ಪ

Published : Jan 06, 2018, 10:46 AM ISTUpdated : Apr 11, 2018, 12:45 PM IST
ಸಿಎಂ ಭೇಟಿ ಮಾಡಲು ಬಂದ ದಿವ್ಯಾಂಗ ವ್ಯಕ್ತಿ ಮೇಲೆ ಪೊಲೀಸರ ದರ್ಪ

ಸಾರಾಂಶ

ತೆವಳುತ್ತಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಲು ಮುಂದಾದ ವ್ಯಕ್ತಿಯನ್ನು ತಡೆದಿದ್ದಲ್ಲದೇ, ದರ್ಪ ತೋರಿ, ಅಮಾನವೀಯತೆ ಮೆರೆದ ಪೊಲೀಸರು.

ಕಡೂರು: ಸಾಧನಾ ಸಮಾವೇಶದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲು ಬಂದ ವಿಕಲಚೇತನ ವ್ಯಕ್ತಿ ಮೇಲೆ ಪೊಲೀಸರು ದರ್ಪ ತೋರಿ, ಅಮಾನವೀಯತೆ ಮೆರೆದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ನಡೆದಿದೆ.

ತೆವಳುತ್ತಲೇ ಆಗಮಿಸಿದ್ದ ವಿಕಲಚೇತನ ವ್ಯಕ್ತಿ, ಮುಖ್ಯಮಂತ್ರಿಯನ್ನು ಭೇಟಿಯಾಗಲು ಗಂಟೆಗಟ್ಟಲೆ ಕಾದು ಕುಳಿತಿದ್ದರು. ಆದರೆ, ಸಿಎಂ ಅವರನ್ನು ಸಮೀಪಿಸಲು ತೆರಳಿದಾಗ ಪೊಲೀಸರು ತಡೆದು, ದರ್ಪ ತೋರಿದ್ದಾರೆ.

ಇಲ್ಲಿನ ಎಪಿಎಂಸಿ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಪಾಲ್ಗೊಂಡಿದ್ದರು. ಬಿಗಿ ಪೊಲೀಸ್ ಬಂದೋಬಸ್ತು ನಿಯೋಜಿಸಲಾಗಿತ್ತು. ಆಗ ಸಿಎಂ ಅವರನ್ನು ಭೇಟಿಯಾಗಲು ಯತ್ನಿಸಿದ ವ್ಯಕ್ತಿಯನ್ನು ತಡೆದಿದ್ದಲ್ಲದೇ, ದರ್ಪ ತೋರಿದ್ದಾರೆ.
 

PREV
click me!

Recommended Stories

ಕಾಫಿನಾಡಲ್ಲಿ 3ಗಂಟೆ ಬಾಗಿನ ಕೊಡಲು ಕಾದ ಬಿಜೆಪಿಗರು, ಅರಿಶಿನ-ಕುಂಕುಮ ತಿರಸ್ಕರಿಸಿದ ಸಚಿವೆ ಹೆಬ್ಬಾಳ್ಕರ್!
ಮದುವೆ ಸಂಭ್ರಮದಲ್ಲಿ ಮನೆಯಲ್ಲಿ ಸಾವು, ಡಾನ್ಸ್ ಮಾಡುತ್ತಲೇ ಹೃದಯಾಘಾತ ಉಸಿರು ಚೆಲ್ಲಿದ ಯುವಕ