ಸರಕಾರಿ ಅಧೀನಕ್ಕೆ ಮಠಗಳು: ಸಿದ್ಧಗಂಗಾ ಶ್ರೀಗಳ ವಿರೋಧ

Published : Feb 07, 2018, 07:43 PM ISTUpdated : Apr 11, 2018, 01:13 PM IST
ಸರಕಾರಿ ಅಧೀನಕ್ಕೆ ಮಠಗಳು: ಸಿದ್ಧಗಂಗಾ ಶ್ರೀಗಳ ವಿರೋಧ

ಸಾರಾಂಶ

ಮಠ ಮಾನ್ಯಗಳನ್ನು ಧಾರ್ಮಿಕ ದತ್ತಿ ಕಾಯಿದೆಗೆ ಒಳಪಡಿಸುವ ಸರಕಾರದ ಚಿಂತನೆಗೆ ಸಿದ್ದಗಂಗಾ ಕಿರಿಯ ಶ್ರೀಗಳು ವಿರೋಧ ವ್ಯಕ್ತಪಡಿಸಿದ್ದಾರೆ.

ತುಮಕೂರು: ಮಠ ಮಾನ್ಯಗಳನ್ನು ಧಾರ್ಮಿಕ ದತ್ತಿ ಕಾಯಿದೆಗೆ ಒಳಪಡಿಸುವ ಸರಕಾರದ ಚಿಂತನೆಗೆ ಸಿದ್ದಗಂಗಾ ಕಿರಿಯ ಶ್ರೀಗಳು ವಿರೋಧ ವ್ಯಕ್ತಪಡಿಸಿದ್ದಾರೆ.

ಮಾಧ್ಯಮ ಹೇಳಿಕೆ ನೀಡಿರುವ ಕಿರಿಯ ಶ್ರೀಗಳಾದ ಸಿದ್ದಲಿಂಗ ಸ್ವಾಮಿಜಿ, 'ಮಠಗಳಿಗೆ ತನ್ನದೇ ಆದ ಅಸ್ತಿತ್ವವಿದೆ ಹಾಗೂ ಆಚಾರ-ವಿಚಾರಗಳಿರುವುದರಿಂದ ಮಠ ಮಾನ್ಯಗಳನ್ನು ಧಾರ್ಮಿಕ ದತ್ತಿ ಕಾಯಿದೆಗೆ ಒಳ ಪಡಿಸಲು ಸಾಧ್ಯವಿಲ್ಲ,' ಎಂದು ಹೇಳಿದ್ದಾರೆ.

'ಮಠಗಳಿಗೆ ತನ್ನದೆ ಆದ ಸ್ವಾತಂತ್ರ್ಯ ಇದೆ. ರಾಜ್ಯದ ಎಲ್ಲ ಮಠದ ಸ್ವಾಮಿಗಳು ಈ ಕುರಿತು ಚರ್ಚಿಸುತ್ತೇವೆ. ಈ ಹಿಂದೆಯೂ ಈ ಕಾಯಿದೆಗೆ ವಿರೋಧ ವ್ಯಕ್ತವಾಗಿತ್ತು. ಮತ್ತೆ ಮಠಗಳನ್ನು ಧಾರ್ಮಿಕ ದತ್ತಿ ಕಾಯಿದೆಗೆ ತರುವುದು ಉಚಿತವಲ್ಲ. ಈ ಕುರಿತು ಸರ್ಕಾರಕ್ಕೆ ಸಲಹೆ ನೀಡುತ್ತೇವೆ,' ಎಂದಿದ್ದಾರೆ.

PREV
click me!

Recommended Stories

ಕಾಫಿನಾಡಲ್ಲಿ 3ಗಂಟೆ ಬಾಗಿನ ಕೊಡಲು ಕಾದ ಬಿಜೆಪಿಗರು, ಅರಿಶಿನ-ಕುಂಕುಮ ತಿರಸ್ಕರಿಸಿದ ಸಚಿವೆ ಹೆಬ್ಬಾಳ್ಕರ್!
ಮದುವೆ ಸಂಭ್ರಮದಲ್ಲಿ ಮನೆಯಲ್ಲಿ ಸಾವು, ಡಾನ್ಸ್ ಮಾಡುತ್ತಲೇ ಹೃದಯಾಘಾತ ಉಸಿರು ಚೆಲ್ಲಿದ ಯುವಕ