ಎಸ್‌ಎಸ್‌ಎಲ್‌ಸಿ ರಿಸಲ್ಟ್: ಸ್ಕ್ಯಾನ್ ಕಾಪಿ , ಮರು ಮೌಲ್ಯ ಮಾಪನಕ್ಕೆ ಅವಕಾಶ

Published : Aug 10, 2020, 05:09 PM ISTUpdated : Aug 10, 2020, 07:21 PM IST
ಎಸ್‌ಎಸ್‌ಎಲ್‌ಸಿ ರಿಸಲ್ಟ್: ಸ್ಕ್ಯಾನ್ ಕಾಪಿ , ಮರು ಮೌಲ್ಯ ಮಾಪನಕ್ಕೆ ಅವಕಾಶ

ಸಾರಾಂಶ

ಕೊರೋನಾ ಭೀತಿ ಮಧ್ಯೆ ಎಸ್ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಿದೆ. ಇನ್ನು ಮರು ಎಣಿಕೆಗೆ ಸಂಬಂಧಿಸಿದಂತೆ ಕೆಲ ಮಾಹಿತಿ ಈ ಕೆಳಗಿನಂತಿದೆ.

ಬೆಂಗಳೂರು, (ಆ.10): ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದ್ದು ರಾಜ್ಯದಲ್ಲಿ ಈ ಬಾರಿ ಶೇ.71.80 ರಷ್ಟು ಫಲಿತಾಂಶ ಕಂಡುಬಂದಿದೆ. 

ಈ ಬಾರಿಯ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮರುಮೌಲ್ಯಮಾಪನ ಮತ್ತು ಮರು ಎಣಿಕೆಗೆ ಅವಕಾಶ ಕಲ್ಪಿಸಿದ್ದು, ಆಸಕ್ತ ವಿದ್ಯಾರ್ಥಿಗಳು ಆಗಸ್ಟ್ 14 ರಿಂದ ಆಗಸ್ಟ್ 24 ರ ಒಳಗೆ ಅರ್ಜಿ ಸಲ್ಲಿಸಬಹುದು. ಉತ್ತರ ಪತ್ರಿಕೆಯ ಸ್ಕ್ಯಾನ್ ಕಾಪಿ ನಾಳೆಯಿಂದಲೇ (ಮಂಗಳವಾರ) ಪಡೆಯಬಹುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

"

ಎಸ್​ಎಸ್​ಎಲ್​ಸಿ ರಿಸಲ್ಟ್ ಪ್ರಕಟ: ಶೇ.71.80 ಫಲಿತಾಂಶ, 6 ವಿದ್ಯಾರ್ಥಿಗಳು ರಾಜ್ಯಕ್ಕೆ ಟಾಪರ್

ಛಾಯಾಪ್ರತಿಗಾಗಿ/ ಮರುಎಣಿಕೆಗಾಗಿ ಛಾಯಾಪ್ರತಿಗಾಗಿ/ ಮರುಎಣಿಕೆಗಾಗಿ ಉತ್ತರ ಪತ್ರಿಕೆಯ ಛಾಯಾಪ್ರತಿಗಾಗಿ ಅಥವಾ ಮರು ಎಣಿಕೆಗಾಗಿ ಅರ್ಜಿ ಸಲ್ಲಿಸಲು ಆಗಸ್ಟ್ 24 ಕೊನೆಯ ದಿನ. ಪೂರಕ ಪರೀಕ್ಷೆಯ ದಿನಾಂಕವನ್ನು ಇನ್ನೆರಡು ದಿನಗಳ ಒಳಗಾಗಿ ಪ್ರೌಢ ಶಿಕ್ಷಣ ಮಂಡಳಿ ಪ್ರಕಟಿಸಲಿದೆ ಎಂದು ಸುರೇಶ್ ಕುಮಾರ್ ಸ್ಪಷ್ಟಪಡಿಸಿದರು.

"

ಶುಲ್ಕದ ವಿವರ
ಮರುಎಣಿಕೆ ಒಂದು ವಿಷಯಕ್ಕೆ:  150ರೂ.
ಛಾಯಾಪ್ರತಿ ಒಂದು ವಿಷಯಕ್ಕೆ: 300 ರೂ.

ಉತ್ತರ ಪತ್ರಿಕೆಯ ಮರುಮೌಲ್ಯಮಾಪನಉತ್ತರ ಪತ್ರಿಕೆಯ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಛಾಯಾಪ್ರತಿ ಸ್ವೀಕರಿಸಿದ 7ದಿನದೊಳಗಾಗಿ ಮಂಡಳಿಗೆ ಸಲ್ಲಿಸುವುದು.

ಶುಲ್ಕದ ವಿವರ
*ಮರುಮೌಲ್ಯಮಾಪನ ಒಂದು ವಿಷಯಕ್ಕೆ ರೂ.700/

ಸೂಚನೆಗಳು
* 2019 - 20ನೇ ಸಾಲಿನಲ್ಲಿ ವಿದ್ಯಾರ್ಥಿಗಳು ಮರು ಎಣಿಕೆ, ಛಾಯಾಪ್ರತಿ ಹಾಗೂ ಮರು ಮೌಲ್ಯಮಾಪನಕ್ಕೆ ಅರ್ಜಿಗಳನ್ನು ಬೆಂಗಳೂರು ಒನ್ ಅಥವಾ ಕರ್ನಾಟಕ ಒನ್ ಮುಖಾಂತರ ಸಲ್ಲಿಸಬಹುದು.

* ಉತ್ತೀರ್ಣರಾದ ಅಭ್ಯರ್ಥಿಗಳು ಮುಂದಿನ ವ್ಯಾಸಂಗಕ್ಕೆ ಹಾಗೂ ಅನುತ್ತೀರ್ಣರಾದ ವಿದ್ಯಾರ್ಥಿಗಳು ಮುಂದಿನ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮರುಮೌಲ್ಯಮಾಪನದ ಫಲಿತಾಂಶಕ್ಕಾಗಿ ಕಾಯಬಾರದು.

* ಮರು ಮೌಲ್ಯಮಾಪನದ ಬಗ್ಗೆ ಮರುಮೌಲ್ಯಮಾಪಕರು ತೆಗೆದುಕೊಂಡ ನಿರ್ಧಾರವೇ ಅಂತಿಮ ಇದರ ಬಗ್ಗೆ ಮರುಪರಿಶೀಲನೆ ಅಥವಾ ಮೇಲ್ಮನವಿ ಸಲ್ಲಿಸಲು ಅವಕಾಶವಿರುವುದಿಲ್ಲ.

* ಫಲಿತಾಂಶವನ್ನು ಉತ್ತಮ ಪಡಿಸಿಕೊಳ್ಳುವ ವಿದ್ಯಾರ್ಥಿಗಳು ಮೊದಲು ಉತ್ತೀರ್ಣರಾದ ಎರಡು ವರ್ಷದೊಳಗೆ ಅದೇ ವಿಷಯ/ವಿಷಯಗಳಿಗೆ ಪರೀಕ್ಷೆ ತೆಗೆದುಕೊಳ್ಳಬಹುದು.

* ಯಾವುದೇ ವಿದ್ಯಾರ್ಥಿ ಶಾಲಾ ಅಭ್ಯರ್ಥಿಯಾಗಿ ಪುನಃ ಪರೀಕ್ಷೆಯನ್ನು ತೆಗೆದುಕೊಳ್ಳಲು ಇಚ್ಛಿಸಿದಲ್ಲಿ ಶಾಲೆಗೆ ಮರು ಪ್ರವೇಶ ಪಡೆಯಲು ಅವಕಾಶವಿದೆ.

* ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳ ಉತ್ತೀರ್ಣ ಪ್ರಮಾಣ ಪತ್ರಗಳನ್ನು ಆಯಾ ಶಾಲೆಗಳಿಗೆ ಮರುಎಣಿಕೆ ಮತ್ತು ಮರು ಮೌಲ್ಯಮಾಪನ ಕಾರ್ಯ ಪೂರ್ಣಗೊಂಡ ನಂತರ ಕಳುಹಿಸಲಾಗುವುದು.

PREV
click me!

Recommended Stories

ಸಿಎಂ ಯೋಗಿ ಆದಿತ್ಯನಾಥ್ ರೀತಿ ಮಾತನಾಡಿ ಸರ್ಕಾರಿ ಶಾಲಾ ಶಿಕ್ಷಕಿ ಅಳುವಂತೆ ಮಾಡಿದ ಯುವಕ: ವೀಡಿಯೋ
20 ಮಕ್ಕಳಿಗೆ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಧಾನ, ಇಬ್ಬರು ಮಕ್ಕಳಿಗೆ ಮರಣೋತ್ತರ ಪ್ರಶಸ್ತಿ ಕೊಟ್ಟಿದ್ಯಾಕೆ?