ಶಾಲಾ ಆರಂಭದ ಕುರಿತಂತೆ ಸಚಿವ ಸುರೇಶ್ ಕುಮಾರ್ ಸ್ಪಷ್ಟೀಕರಣ

Published : Jun 08, 2020, 08:59 PM IST
ಶಾಲಾ ಆರಂಭದ ಕುರಿತಂತೆ ಸಚಿವ ಸುರೇಶ್ ಕುಮಾರ್ ಸ್ಪಷ್ಟೀಕರಣ

ಸಾರಾಂಶ

ಕೋವಿಡ್​-19 ಲಾಕ್​ಡೌನ್​ನಿಂದ ರಾಷ್ಟ್ರಾದ್ಯಂತ ಅನಿರ್ದಿಷ್ಟಾವಧಿವರೆಗೆ ಮುಚ್ಚಲ್ಪಟ್ಟಿರುವ ಶಾಲೆ-ಕಾಲೇಜುಗಳನ್ನು ಜುಲೈನಲ್ಲಿ ಪ್ರಾರಂಭಿಸಲು ಹೊರಟ್ಟಿದ್ದ ರಾಜ್ಯ ಸರ್ಕಾರ ಇದೀಗ ಹಿಂದೆ ಸರಿದಿದೆ.

ಬೆಂಗಳೂರು, (ಜೂನ್.08): ಶಾಲಾ ಆರಂಭದ ಕುರಿತಂತೆ ಇದ್ದ ಗೊಂದಲಗಳಿಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟೀಕರಣ ಕೊಟ್ಟಿದ್ದಾರೆ.

ಯಾವುದೇ ಸಂದರ್ಭದಲ್ಲಿಯೂ ಶಿಕ್ಷಣ ಇಲಾಖೆ ಜುಲೈ 1ರಿಂದ ಯಾವ ಶಾಲೆಯನ್ನೂ ಪ್ರಾರಂಭಿಸುವ ಉದ್ದೇಶವನ್ನು ಹೊಂದಿಲ್ಲ. ಈ ಬಗ್ಗೆ ಯಾವುದೇ ಪೋಷಕರು ಅನವಶ್ಯಕವಾಗಿ ಗೊಂದಲಕ್ಕೆ ಒಳಗಾಗುವುದು ಬೇಡ. ರಾಜ್ಯದಲ್ಲಿ ಶಾಲಾರಂಭ ಕುರಿತಂತೆ ಮುಂದಿನ ಸಚಿವ ಸಂಪುಟದ ಸಭೆಯಲ್ಲಿ ಸಹ ಚರ್ಚಿಸಿ ಸಹಮತ ಪಡೆಯಲು ತೀರ್ಮಾನ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು.

ಶಾಲಾ-ಕಾಲೇಜು ಪ್ರಾರಂಭ ಯಾವಾಗ? ದಿನಾಂಕ ಪ್ರಕಟಿಸಿದ ಕೇಂದ್ರ ಸಚಿವ

ಕೋವಿಡ್​-19 ಲಾಕ್​ಡೌನ್​ನಿಂದ ರಾಷ್ಟ್ರಾದ್ಯಂತ ಅನಿರ್ದಿಷ್ಟಾವಧಿವರೆಗೆ ಮುಚ್ಚಲ್ಪಟ್ಟಿರುವ ಶಾಲೆ-ಕಾಲೇಜುಗಳನ್ನು ಆಗಸ್ಟ್​ 15ರ ನಂತರದಲ್ಲಿ ಪುನರಾರಂಭಿಸುವ ಕೇಂದ್ರ ಸರ್ಕಾರದ ನಿರ್ಧಾರಿಸಿದೆ.

ಕೇಂದ್ರ ಸರ್ಕಾರದ ನಿರ್ದೇಶನದಂತೆ  ರಾಜ್ಯ ಶಿಕ್ಷಣ ಇಲಾಖೆ ಪೋಷಕರ ಅಭಿಪ್ರಾಯವನ್ನು ಸಂಗ್ರಹಿಸಲು ತಯಾರಿ ನಡೆಸಿದ್ದು, ಜೂನ್ 10, 12ರಂದು  ಪೋಷಕರ/ ಎಸ್ ಡಿಎಂಸಿ / ಎಸ್ ಎಂಸಿ ಸಭೆಗಳನ್ನು ನಡೆಸಿ ಕ್ರಮ ವಹಿಸಲು ನೀಡಲಾಗಿದ್ದ ಸೂಚನೆಯನ್ನು ಜೂನ್ 20ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

, ಜುಲೈ ಮೊದಲ ವಾರದಲ್ಲಿ ಶಾಲೆ ಪ್ರಾರಂಭ ಮಾಡಲು ಸರ್ಕಾರ ನಿರ್ಧರಿಸಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ದಿನಾಂಕ 05-06-2020ರಿಂದ ಶಾಲೆಗೆ ಹಾಜರಾಗಿ ಶಾಲೆ ಪುನರಾರಂಭದ ಕುರಿತು ಸೂಕ್ತ ಸಿದ್ಧತೆಗಳನ್ನು ಮಾಡಿಕೊಳ್ಳಲು ಸೂಚಿಸಲಾಗಿತ್ತು. ಇದಕ್ಕೆ ಪೋಷಕರು ಸೇರಿದಂತೆ ಶಿಕ್ಷಣ ತಜ್ಞರು ಜುಲೈನಲ್ಲಿ ಶಾಲೆ ಪ್ರಾರಂಭಿಸುವುದು ಬೇಡ ಎಂದು ವಿರೋಧ ವ್ಯಕ್ತಪಡಿಸಿದ್ದರು.

ಒಟ್ಟಿನಲ್ಲಿ  ಕೋವಿಡ್​-19 ಲಾಕ್​ಡೌನ್​ನಿಂದ ರಾಷ್ಟ್ರಾದ್ಯಂತ ಅನಿರ್ದಿಷ್ಟಾವಧಿವರೆಗೆ ಮುಚ್ಚಲ್ಪಟ್ಟಿರುವ ಶಾಲೆ-ಕಾಲೇಜುಗಳನ್ನು ಜುಲೈನಲ್ಲಿ ಪ್ರಾರಂಭಿಸಲು ಹೊರಟ್ಟಿದ್ದ ರಾಜ್ಯ ಸರ್ಕಾರ ಇದೀಗ ಹಿಂದೆ ಸರಿದಿದೆ.

PREV
click me!

Recommended Stories

ಸರ್ಕಾರಿ ಆಂಗ್ಲ ಶಾಲೇಲಿ ಕಲಿತ 30,000 ಮಕ್ಕಳು ಅತಂತ್ರ! ಬಿಇಒ, ಡಿಡಿಪಿಐ ಯಾರಿಂದಲೂ ಸ್ಪಷ್ಟ ಉತ್ತರವಿಲ್ಲ! ಯಾರನ್ನು ಕೇಳುವುದು?
ಕೇಂದ್ರ ಸರ್ಕಾರ ನೀಡುವ ವಿದ್ಯಾರ್ಥಿ ವೇತನಕ್ಕೆ ಮಂಡ್ಯದ ಮೂವರು ವಿದ್ಯಾರ್ಥಿಗಳು ಆಯ್ಕೆ