'ಕೋವಿಡ್‌ನಿಂದ ಮೃತ ಶಿಕ್ಷಕರ ಕುಟುಂಬಕ್ಕೆ 1 ಕೋಟಿ ಪರಿಹಾರ ನೀಡಿ'

Kannadaprabha News   | Asianet News
Published : May 21, 2021, 10:31 AM ISTUpdated : May 21, 2021, 12:09 PM IST
'ಕೋವಿಡ್‌ನಿಂದ ಮೃತ ಶಿಕ್ಷಕರ ಕುಟುಂಬಕ್ಕೆ 1 ಕೋಟಿ ಪರಿಹಾರ ನೀಡಿ'

ಸಾರಾಂಶ

* ಭಾರತೀಯ ಪ್ರಾಥಮಿಕ ಶಾಲಾ ಶಿಕ್ಷಕರ ಒಕ್ಕೂಟ ರಾಜ್ಯ ಸರ್ಕಾರಕ್ಕೆ ಆಗ್ರಹ * ಸರ್ಕಾರದ ಖಜಾನೆಯಿಂದ ಪ್ರತ್ಯೇಕವಾಗಿ ತಲಾ ಒಂದು ಕೋಟಿ ರು. ಪರಿಹಾರ ಒದಗಿಸಬೇಕು * ಮೃತ ಶಿಕ್ಷಕರ ಅವಲಂಬಿತರಿಗೆ ಸರ್ಕಾರಿ ಉದ್ಯೋಗ ನೀಡಬೇಕು 

ಬೆಂಗಳೂರು(ಮೇ.21): ಕೋವಿಡ್‌ ಸೋಂಕಿನಿಂದ ಮೃತಪಟ್ಟ ಪ್ರತಿ ಶಿಕ್ಷಕರ ಕುಟುಂಬಕ್ಕೆ ಒಂದು ಕೋಟಿ ರು. ಪರಿಹಾರ ನೀಡಬೇಕೆಂದು ಅಖಿಲ ಭಾರತೀಯ ಪ್ರಾಥಮಿಕ ಶಾಲಾ ಶಿಕ್ಷಕರ ಒಕ್ಕೂಟ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದೆ.

ಶಿಕ್ಷಕರ ಕಲ್ಯಾಣ ನಿ​ಧಿಯಿಂದ ಈಗಾಗಲೇ ಶಿಕ್ಷಕರಿಗೆ ಹಲವು ರೀತಿಯ ಸೌಲಭ್ಯ ದೊರೆಯುತ್ತಿದೆ. ಮೃತರ ಕುಟುಂಬಕ್ಕೆ 10 ಸಾವಿರದಿಂದ ಒಂದು ಲಕ್ಷ ರು.ವರೆಗೂ ಪರಿಹಾರ ನೀಡಲಾಗುತ್ತಿದೆ. ಕೊರೋನಾದಿಂದ ಮೃತಪಟ್ಟ ಶಿಕ್ಷಕರ ಕುಟುಂಬಕ್ಕೆ ಶಿಕ್ಷಕರ ಕಲ್ಯಾಣ ನಿ​ಧಿಯಿಂದ ಸಿಗಬೇಕಾದ ಸೌಲಭ್ಯ ಸಿಕ್ಕೇ ಸಿಗುತ್ತದೆ. ಜತೆಗೆ ಸರ್ಕಾರದ ಖಜಾನೆಯಿಂದ ಪ್ರತ್ಯೇಕವಾಗಿ ತಲಾ ಒಂದು ಕೋಟಿ ರು. ಪರಿಹಾರ ಒದಗಿಸಬೇಕು. ಜತೆಗೆ ಮೃತ ಶಿಕ್ಷಕರ ಅವಲಂಬಿತರಿಗೆ ಸರ್ಕಾರಿ ಉದ್ಯೋಗ ನೀಡಬೇಕು ಎಂದು ಒಕ್ಕೂಟದ ಉಪಾಧ್ಯಕ್ಷ ಬಸವರಾಜ ಗುರಿಕಾರ ಆಗ್ರಹಿಸಿದ್ದಾರೆ.

"

ಕೊರೋನಾ ಸಂಕಷ್ಟ: ಶಾಲಾ ಶುಲ್ಕ ಏರಿಕೆಗೆ ಬ್ರೇಕ್

ಮೃತರು ಹೊಸ ಪಿಂಚಣಿ ವ್ಯವಸ್ಥೆಗೆ ಒಳಪಟ್ಟಿದ್ದರೆ, ಅಂತಹ ಪ್ರಕರಣವನ್ನು ಹಳೇ ಪಿಂಚಣಿ ವ್ಯವಸ್ಥೆಗೆ ಪರಿವರ್ತಿಸಿ, ಕುಟುಂಬಕ್ಕೆ ಪಿಂಚಣಿ ಸೌಲಭ್ಯ ಸಿಗುವಂತೆ ಮಾಡಬೇಕು.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
 

PREV
click me!

Recommended Stories

ಪ್ರತಿಷ್ಠಿತ ಶಾಲೆಯ ಮೇಲೆ ಐಟಿ ರೈಡ್: ಕೋಟಿ ಕೋಟಿ ಹಣ ಪತ್ತೆ: ಹಣ ಎಣಿಸುವ ಯಂತ್ರ ತರಿಸಿದ ಅಧಿಕಾರಿಗಳು
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ, ಇಂಗ್ಲೀಷ್ ಶಾಲೆಗಳ ಪೋಷಕರಿಂದ ಸಡಿಲಿಕೆಗೆ ಮನವಿ