ರಾಜ್ಯದಲ್ಲಿ ಶಾಲಾ-ಕಾಲೇಜು ಪ್ರಾರಂಭ ಬಗ್ಗೆ ಸ್ಪಷ್ಟನೆ ಕೊಟ್ಟ ಸಿಎಂ ಯಡಿಯೂರಪ್ಪ

Published : Dec 28, 2020, 02:48 PM ISTUpdated : Dec 28, 2020, 03:13 PM IST
ರಾಜ್ಯದಲ್ಲಿ ಶಾಲಾ-ಕಾಲೇಜು ಪ್ರಾರಂಭ ಬಗ್ಗೆ ಸ್ಪಷ್ಟನೆ ಕೊಟ್ಟ  ಸಿಎಂ ಯಡಿಯೂರಪ್ಪ

ಸಾರಾಂಶ

ಹೊಸ ಕೊರೋನಾ ತಳಿ ಭೀತಿ ನಡುವೆಯೂ ರಾಜ್ಯದಲ್ಲಿ ಶಾಲಾ-ಕಾಲೇಜು ತರಗತಿ ಪ್ರಾರಂಭದ ಬಗ್ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು,(ಡಿ.28): ಈಗಾಗಲೇ ನಿಗದಿಯಾಗಿರುವಂತೆ ಜನವರಿ 1ರಿಂದ ಶಾಲಾ-ಕಾಲೇಜುಗಳು ಪ್ರಾರಂಭವಾಗಲಿದ್ದು, ಇದರಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. 

"

ಸಚಿವ ಸಂಪುಟ ಸಭೆ ಆರಂಭಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲಾಕಾಲೇಜುಗಳನ್ನು ಜನವರಿ 1ರಿಂದ ಆರಂಭಿಸಲು ತೀರ್ಮಾನಿಸಲಾಗಿದೆ. ಈ ನಿರ್ಧಾರದಲ್ಲಿ ಹೆಚ್ಚಿನ ಬದಲಾವಣೆ ಇರುವುದಿಲ್ಲ ಎಂದರು.

ಕರ್ನಾಟಕದಲ್ಲಿ ತರಗತಿಗಳು ಪ್ರಾರಂಭ:; ಮಾರ್ಗಸೂಚಿ ಬಿಡುಗಡೆ ಮಾಡಿದ ಶಿಕ್ಷಣ ಇಲಾಖೆ

ಮೊದಲ ಹಂತದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಪ್ರಾರಂಭವಾಗಲಿವೆ.  ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಶೇ.95ರಷ್ಟು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲ್ಲುವುದು ನಿಶ್ಚಿತ. ಈ ಚುನಾವಣೆಗೆ ಕಾಂಗ್ರೆಸ್‌ನ ಯಾವುದೇ ನಾಯಕರು ಆಸಕ್ತಿ ವಹಿಸಿರಲಿಲ್ಲ ಎಂದು ಹೇಳಿದರು.

ಅಧಿಕಾರ ವಿಕೇಂದ್ರೀಕರಣ ಸಂದರ್ಭದಲ್ಲಿ ಹಲವು ವಿದ್ಯಾವಂತರು ಗ್ರಾಮ ಪಂಚಾಯತಿ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಮುಂದೆ ಗ್ರಾಮ ಪಂಚಾಯಿತಿಎ ಆಯ್ಕೆಯಾಗುವ ಸದಸ್ಯರಿಗೆ ಹೆಚ್ಚಿನ ಶಕ್ತಿ ತುಂಬುವ ಕೆಲಸ ಮಾಡುತ್ತೇವೆ . ಗ್ರಾಮಗಳ ಅಭಿವೃದ್ಧಿ ಮಾಡಲು ಸದಸ್ಯರಿಗೆ ಸಹಕಾರ ಕೊಡಲು ಪ್ರಮಾಣಿಕ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

PREV
click me!

Recommended Stories

ಗದ್ದೆ ಅಂಚಲ್ಲಿ uniform ಹಾಕ್ಕೊಂಡು ಎಣ್ಣೆ ಹೊಡೀತಾ ಇರೋ ಹೈಸ್ಕೂಲ್ ಹುಡ್ಗೀರು, parents shock! ವಿಡಿಯೋ ವೈರಲ್
15ನೇ ವಯಸ್ಸಿಗೆ ಹೈನುಗಾರಿಕೆ ಆರಂಭಿಸಿದ ಹುಡುಗ :18 ವರ್ಷದ ಯುವಕನ ತಿಂಗಳ ಆದಾಯ ಈಗ 6 ಲಕ್ಷ