ಶಾಲೆಗಳಿಗೆ ಸಚಿವ ಸುರೇಶ್ ಕುಮಾರ್ ಭೇಟಿ: ಪರೀಕ್ಷೆ ಬಗ್ಗೆ ಕಷ್ಟ ಹೇಳಿಕೊಂಡ ವಿದ್ಯಾರ್ಥಿ...!

Published : Jan 09, 2021, 08:04 PM IST
ಶಾಲೆಗಳಿಗೆ ಸಚಿವ ಸುರೇಶ್ ಕುಮಾರ್ ಭೇಟಿ: ಪರೀಕ್ಷೆ ಬಗ್ಗೆ ಕಷ್ಟ ಹೇಳಿಕೊಂಡ ವಿದ್ಯಾರ್ಥಿ...!

ಸಾರಾಂಶ

ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ತುಮಕೂರು ಜಿಲ್ಲೆಯ ವಿವಿಧ ಶಾಲೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳ ಜೊತೆ ಮಾತುಕತೆ ನಡೆಸಿದ್ದಾರೆ.

ತುಮಕೂರು, (ಜ.09): ಕೊರೋನಾ ಭೀತಿಯ ನುಡುವೆಯೂ ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಆರಂಭವಾಗಿವೆ. ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಅದರಂತೆ ಇಂದು (ಶನಿವಾರ)ತುಮಕೂರಿನ ಮಧುಗಿರಿ, ಪಾವಗಡ ತಾಲ್ಲೂಕಿನ ಸರ್ಕಾರಿ ಶಾಲೆಗಳಿಗೆ ಸಚಿವರ ಭೇಟಿ ಕೊರೋನಾ ಮುಂಜಾಗೃತ ಕ್ರಮಗಳನ್ನ ಪರಿಶೀಲನೆ ಮಾಡಿದರು.

ವಿದ್ಯಾರ್ಥಿಗಳಿಗೆ ಆಫ್‌ಲೈನ್‌ ತರಗತಿ ಆರಂಭ: ಯಾವಾಗಿನಿಂದ..?

 ಮಧುಗಿರಿ ತಾಲ್ಲೂಕಿನ ಸರ್ಕಾರಿ ಶಾಲೆಗಳಿಗೆ ಸಚಿವ ಸುರೇಶ್ ಕುಮಾರ್ ಭೇಟಿ ವಿದ್ಯಾರ್ಥಿಗಳ ಜೊತೆ ಸಮಾಲೋಚನೆ ನಡೆಸಿದರು. ಈ ವೇಳೆ ಶಿಕ್ಷಣ ಸಚಿವರ ಎದುರು ಗುಂಡಲಹಳ್ಳಿ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ಸಮಸ್ಯೆ ಹೇಳಿಕೊಂಡಿದ್ದಾಳೆ.

ಮಾರ್ಚ್ ನಲ್ಲಿ ಪರೀಕ್ಷೆ ನಡೆಸಿದರೆ ಕಷ್ಟವಾಗುತ್ತದೆ. ಜೂನ್ ನಲ್ಲಿ ಎಕ್ಸಾಂ ನಡೆಸಿ ಎಂದು ವಿದ್ಯಾರ್ಥಿ, ಸಚಿವರಲ್ಲಿ ಮನವಿ ಮಾಡಿಕೊಂಡರು. ಇದಕ್ಕೆ ಪ್ರತಿಕ್ರಿಯಿಸಿದ ಸುರೇಶ್ ಕುಮಾರ್, ಜೂನ್‌ಗೆ ಎಕ್ಸಾಂ ಮಾಡಿದರೆ ರಿಸಲ್ಟ್  ಯಾವಾಗ ಕೊಡೊದು? ಸಪ್ಲಿಮೆಂಟರಿ ಎಕ್ಸಾಂ ಮಾಡಾದು ಯಾವಾಗ? ಎಂದು ವಿದ್ಯಾರ್ಥಿಗೆ ಸದ್ಯದ ಪರಿಸ್ಥಿತಿ ಬಗ್ಗೆ ವಿವರಿಸಿದರು.

PREV
click me!

Recommended Stories

SSLC ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ! ತೃತೀಯ ಭಾಷೆ, ಎನ್‌ಎಸ್‌ಕ್ಯೂಎಫ್ ವಿಷಯಗಳಿಗೆ ಪಾಸ್-ಫೇಲ್ ಬದಲು ಗ್ರೇಡ್ ಪದ್ಧತಿ ಜಾರಿ
ಬಡತನ ಮೆಟ್ಟಿ ನಿಂತ ಪ್ರತಿಭೆಗಳು: ಒಬ್ಬಳು ಅನಾಥೆ, ಮತ್ತೊಬ್ಬ ಸೆಕ್ಯೂರಿಟಿ ಗಾರ್ಡ್ ಮಗ, ಪಿಯುಸಿ ಫಲಿತಾಂಶದಲ್ಲಿ ಟಾಪ್!