
CBSE ಮತ್ತು ICSE ಮಾನ್ಯತೆ ಪಡೆದ ಕೆಲ ಖಾಸಗಿ ಶಾಲೆಗಳ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಪೋಷಕರು ಈ ಅರ್ಜಿಯನ್ನು ಸಲ್ಲಿಸಿದ್ದಾರೆ. "ಕನ್ನಡವನ್ನು ಕಡ್ಡಾಯವಾಗಿ ಕಲಿಸಬೇಕೆಂಬ ಸರ್ಕಾರದ ನಿರ್ಧಾರವು ಸಂಸ್ಥೆಗಳ ಸ್ವಾಯತ್ತತೆಗೆ ಧಕ್ಕೆಯಾಗಿದೆ ಮತ್ತು ಇದರಿಂದ ವಿದ್ಯಾರ್ಥಿಗಳ ಮೇಲೆ ಅನಗತ್ಯ ಒತ್ತಡ ಉಂಟಾಗುತ್ತದೆ ಎಂಬುದು ಇವರ ವಾದವಾಗಿದೆ.
ಆಕ್ಷೇಪಣೆ ಸಲ್ಲಿಸುವಲ್ಲಿ ವಿಳಂಬ:
ಹೈಕೋರ್ಟ್ನಲ್ಲಿ ಈ ಪ್ರಕರಣ ವಿಚಾರಣೆಗೆ ಬಂದಾಗ ಅರ್ಜಿದಾರರ ಪರ ವಕೀಲರು, “ಸರ್ಕಾರ ಎರಡು ವರ್ಷಗಳಾಗಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ, ಆದ್ದರಿಂದ ಮಧ್ಯಂತರ ಆದೇಶ ನೀಡಬೇಕೆಂದು” ಮನವಿ ಮಾಡಿದರು.
ಈ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಕಾಮೇಶ್ವರ ರಾವ್ ಹಾಗೂ ನ್ಯಾಯಮೂರ್ತಿ ಸಿಎಂ ಜೋಶಿ ಅವರ ದ್ವಿಸದಸ್ಯ ಪೀಠ, “ಸರ್ಕಾರ ಮುಂದಿನ ಮೂರು ವಾರಗಳಲ್ಲಿ ಅರ್ಜಿಗೆ ಸಂಬಂಧಿಸಿದಂತೆ ಸ್ಪಷ್ಟ ಆಕ್ಷೇಪಣೆ ಸಲ್ಲಿಸಬೇಕು. ಇಲ್ಲದಿದ್ದರೆ ಅರ್ಜಿದಾರರ ಮನವಿಯನ್ನು ಪರಿಗಣಿಸಿ ಮಧ್ಯಂತರ ಆದೇಶ ನೀಡಲಾಗುತ್ತದೆ” ಎಂದು ಮೌಖಿಕ ಎಚ್ಚರಿಕೆ ನೀಡಿತು.
ಸರ್ಕಾರ ಇದೀಗ ಎಚ್ಚೆತ್ತುಕೊಂಡು ತ್ವರಿತವಾಗಿ ನ್ಯಾಯಾಲಯದ ಮುಂದಿಲ್ಲಿ ಸ್ಪಷ್ಟ ನಿಲುವು ಇಡುವ ಅಗತ್ಯವಿದೆ. ಇಲ್ಲವಾದರೆ, ಸರ್ಕಾರದ ಪ್ರತಿಸ್ಪಂದನೆಯಿಲ್ಲದ ಕಾರಣದಿಂದ ಅರ್ಜಿದಾರರ ಪರವಾಗಿ ತಾತ್ಕಾಲಿಕ ಪರಿಹಾರ ನೀಡುವ ಸಾಧ್ಯತೆ ಹೆಚ್ಚಾಗಲಿದೆ ಎಂದು ನ್ಯಾಯಪೀಠ ಸೂಚಿಸಿದೆ.