ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್

Published : Jul 13, 2021, 02:50 PM IST
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್

ಸಾರಾಂಶ

* ಎಸ್ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ * ಪರೀಕ್ಷೆ ಬರೆಯುವ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ * ಈ ಬಗ್ಗೆ ಸುತ್ತೋಲೆ ಹೊರಡಿಸಿದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ

ಬೆಂಗಳೂರು, (ಜುಲೈ.13): ಕೊರೋನಾ ಕಾರಣದಿಂದ ಕರ್ನಾಟಕದಲ್ಲಿ ವಿಳಂಬವಾಗಿರುವ ಎಸ್​ಎಸ್​ಎಲ್​ಸಿ ಪರೀಕ್ಷೆ ಜುಲೈ 19 ಹಾಗೂ 22ರಂದು ನಡೆಯಲಿದೆ. 

ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಉಚಿತವಾಗಿ ಬಸ್‌ನಲ್ಲಿ ಸಂಚರಿಸಲು ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಅವಕಾಶ ನೀಡಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬಗ್ಗೆ ಮಹತ್ವದ ಸೂಚನೆ ಕೊಟ್ಟ ಹೈಕೋರ್ಟ್

ಪರೀಕ್ಷೆಯ ದಿನಗಳಂದು ಅಂದರೆ ಜುಲೈ 19 ಹಾಗೂ ಜುಲೈ 22ರಂದು ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಡುವುದಾಗಿ ತಿಳಿಸಿದೆ.

ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳು ತಮ್ಮ ವಾಸ ಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಉಚಿತ ಪ್ರಯಾಣ ಮಾಡಬಹುದಾಗಿದ್ದು, ಪರೀಕ್ಷಾ ಪ್ರಮಾಣ ಪತ್ರ ತೋರಿಸುವ ಮೂಲಕ ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. 

ರಾಜ್ಯಾದ್ಯಂತ ಎಲ್ಲಾ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೂ ಇದು ಅನ್ವಯವಾಗಲಿದ್ದು, ಪರೀಕ್ಷಾ ಕೇಂದ್ರದ ತನಕ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ.

ಸಾಮಾನ್ಯ ಹಾಗೂ ವೇಗಧೂತ ಬಸ್​ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಪರೀಕ್ಷೆ ಮುಗಿಸಿ ವಾಪಾಸು ಮನೆಗೆ ಬರುವಾಗಲೂ ಇದು ಅನ್ವಯವಾಗಲಿದೆ. ಮನೆಯಿಂದ ಪರೀಕ್ಷಾ ಕೇಂದ್ರಕ್ಕೆ ಹಾಗೂ ಪರೀಕ್ಷಾ ಕೇಂದ್ರದಿಂದ ಮರಳಿ ಮನೆಗೆ ಬರುವಾಗ ಪರೀಕ್ಷಾ ಪ್ರಮಾಣ ಪತ್ರ ತೋರಿಸಿ ಉಚಿತ ಪ್ರಯಾಣ ಸೌಲಭ್ಯವನ್ನು ಪಡೆಯಬಹುದಾಗಿದೆ. ಈ ಸಂದರ್ಭದಲ್ಲಿ ಎಲ್ಲಾ ರೀತಿಯಲ್ಲೂ ಕೊರೋನಾ ನಿಯಮಾವಳಿಗಳನ್ನು ಪಾಲಿಸುವುದು ಅಗತ್ಯವಾಗಿದೆ ಎಂದು ಕೆಎಸ್‌ಆರ್‌ಟಿಸಿ ಸುತ್ತೋಲೆಯಲ್ಲಿ ತಿಳಿಸಿದೆ.

PREV
click me!

Recommended Stories

ನಿರುದ್ಯೋಗದ ಭೀತಿ,ಇಂಜಿನಿಯರಿಂಗ್‌ ಕೋರ್ಸ್‌ಗಳಲ್ಲಿ ಕಂಪ್ಯೂಟರ್‌ ಸೈನ್ಸ್‌ ಸೀಟ್‌ಗಳಿಗೆ ಇನ್ನು ಮಿತಿ!
ತೆರೆಮರೆಯ ಗುರು: ವಾರ್ಷಿಕೋತ್ಸವದ ವೇಳೆ ಮಕ್ಕಳು ಡಾನ್ಸ್ ಸ್ಟೆಪ್ ತಪ್ಪಿಸಬಾರದು ಎಂದು ಟೀಚರ್‌ ಏನ್ ಮಾಡಿದ್ರು ನೋಡಿ