ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: ಬಸ್​ನಲ್ಲಿ ಉಚಿತ ಪ್ರಯಾಣ, ಕಂಡಿಷನ್ ಅಪ್ಲೈ

Published : Sep 01, 2020, 08:28 PM ISTUpdated : Sep 01, 2020, 08:38 PM IST
ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: ಬಸ್​ನಲ್ಲಿ ಉಚಿತ ಪ್ರಯಾಣ, ಕಂಡಿಷನ್ ಅಪ್ಲೈ

ಸಾರಾಂಶ

ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ  ಉಚಿತ ಪ್ರಯಾಣದ ಸಿಹಿ ಸುದ್ದಿ ನೀಡಿದೆ. ಆದ್ರೆ, ಇದು ಯಾರಿಗೆ ಅನ್ವಯ ಗೊತ್ತಾ?

ಬೆಂಗಳೂರು, (ಸೆ.01) : ವೃತ್ತಿಪರ, ಪದವಿ, ಸ್ನಾತಕೋತ್ತರ ಪರೀಕ್ಷೆ ಬರೆಯುವವರಿಗೆ ಕಳೆದ ಶೈಕ್ಷಣಿಕ ಸಾಲಿನ ಬಸ್​ ಪಾಸ್​ ತೋರಿಸಿ ಉಚಿತ ಪ್ರಯಾಣಕ್ಕೆ ಕೆಎಸ್​ಆರ್​ಟಿಸಿ ಅವಕಾಶ ಕಲ್ಪಿಸಿದೆ.

ಸೆಪ್ಟೆಂಬರ್​ನಲ್ಲಿ ರಾಜ್ಯದ ಕಾನೂನು ವಿಶ್ವವಿದ್ಯಾಲಯ, ತಾಂತ್ರಿಕ ವಿಶ್ವವಿದ್ಯಾಲಯ, ವೃತ್ತಿಪರ ಹಾಗೂ ಸ್ನಾತಕೋತ್ತರ ಪರೀಕ್ಷೆಗಳು ನಡೆಯಲಿವೆ. ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನ ವಿದ್ಯಾರ್ಥಿಗಳಿಗೆ ಸಾರಿಗೆ ನಿಗಮಗಳಿಂದ ಬಸ್​ ಪಾಸ್​ ವಿತರಿಸಿಲ್ಲ. ಹೀಗಾಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಸೆಪ್ಟೆಂಬರ್​ ತಿಂಗಳಲ್ಲಿ ರಾಜ್ಯದ ಎಲ್ಲ ಜಿಲ್ಲಾ ಹಾಗೂ ನಗರ ಸಾರಿಗೆಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡುವಂತೆ ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್​ ಮನವಿ ಮಾಡಿದ್ದರು.

ಈ ಮನವಿಗೆ ಸ್ಪಂದಿಸಿರುವ ಉಪಮುಖ್ಯಮಂತ್ರಿಯೂ ಆದ ಸಾರಿಗೆ ಸಚಿವ ಲಕ್ಷ್ಮಣ್​ ಸವದಿ ಪರೀಕ್ಷೆ ಸಮಯದಲ್ಲಿ ವಿದ್ಯಾರ್ಥಿಗಳು ಕಳೆದ ವರ್ಷದ ಬಸ್​ ಪಾಸ್​ ತೋರಿಸಿ, ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಎಲ್ಲಾ ಹಿರಿಯ, ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಸೂಚನೆ ಹೊರಡಿಸಲಾಗಿದೆ.

ಕೊರೋನಾ ಸಂಕಷ್ಟದ ಸಮಯದಲ್ಲೂ ಕೆಲ ಪರೀಕ್ಷೆಗಳು ನಡೆಯುತ್ತಿವೆ. ಕಳೆದ ಶೈಕ್ಷಣಿಕ ವರ್ಷ ಮುಗಿದಿದ್ದು, ವಿದ್ಯಾರ್ಥಿಗಳ ಬಸ್​ಪಾಸ್​ ಅವಧಿ ಮುಗಿದಿದೆ. ಇದೀಗ ಪರೀಕ್ಷೆ ಆರಂಭವಾದರೆ ಮತ್ತೆ ಬಸ್​ಪಾಸ್​ ಮಾಡಿಸಿಕೊಳ್ಳಬೇಕೆ? ಅಥವಾ ಹಣ ಕೊಟ್ಟು ನಿತ್ಯ ಟಿಕೆಟ್​ ಪಡೆದು ಕಾಲೇಜಿಗೆ ಹೋಗಬೇಕೇ? ಎಂಬ ಗೊಂದಲ ಬಹುತೇಕ ವಿದ್ಯಾರ್ಥಿಗಳಲ್ಲಿತ್ತು.

PREV
click me!

Recommended Stories

20 ಮಕ್ಕಳಿಗೆ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಧಾನ, ಇಬ್ಬರು ಮಕ್ಕಳಿಗೆ ಮರಣೋತ್ತರ ಪ್ರಶಸ್ತಿ ಕೊಟ್ಟಿದ್ಯಾಕೆ?
ಸೆರೆಬ್ರಲ್ ಪಾಲ್ಸಿ ನರದ ಸಮಸ್ಯೆ ಇದ್ದರೂ ಎಲ್ಲವನ್ನು ಮೆಟ್ಟಿನಿಂತು ಮೊದಲ ಪ್ರಯತ್ನದಲ್ಲೇ UPSC ಪಾಸಾದ ಮನ್ವೇಂದ್ರ!