ಕಾಲೇಜು ಆರಂಭವಾದ ತಕ್ಷಣ ಉಪನ್ಯಾಸಕರಿಗೆ ನೇಮಕಾತಿ ಆದೇಶ

Kannadaprabha News   | Asianet News
Published : Oct 13, 2020, 10:43 AM ISTUpdated : Oct 13, 2020, 10:48 AM IST
ಕಾಲೇಜು ಆರಂಭವಾದ ತಕ್ಷಣ ಉಪನ್ಯಾಸಕರಿಗೆ ನೇಮಕಾತಿ ಆದೇಶ

ಸಾರಾಂಶ

ಶೀಘ್ರದಲ್ಲೇ ಕಾಲೇಜು ಉಪನ್ಯಾಸಕರ ನೇಮಕಾತಿಗೆ  ಆದೇಶ ಕೊಡಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. 

ಬೆಂಗಳೂರು (ಅ.13):  ಪಿಯು ಉಪನ್ಯಾಸಕರ ನೇಮಕ‌ ವಿಚಾರಕ್ಕೆ ಸಂಬಂಧಿಸಿದಂತೆ ಅಹೋರಾತ್ರಿ ಧರಣಿ ಎರಡನೇ ದಿನಕ್ಕೆ ಕಾಲಿಟ್ಟಿದ್ದು ಈ ಸಂಬಂಧ ಸಚಿವ ಸುರೇಶ್ ಕುಮಾರ್ ಫೇಸ್‌ಬುಕ್‌ನಲ್ಲಿ ಸ್ಪಷ್ಟನೆ ನೀಡಿದ್ದಾರೆ. 
  
2015ರಿಂದ ವಿಳಂಬವಾಗುತ್ತಿದ್ದ ಪರೀಕ್ಷೆ ಫಲಿತಾಂಶವನ್ನು ಪ್ರಕಟ ಮಾಡಿದ್ದೆ.  ಕಾಲೇಜುಗಳು ಪ್ರಾರಂಭವಾದ ತಕ್ಷಣ ನೇಮಕಾತಿ ಆದೇಶ ಕೊಡಲಾಗುವುದು.  ಆಯ್ಕೆ ಪಟ್ಟಿ ರದ್ದಾಗುತ್ತದೆ ಎಂಬ ಆತಂಕ ಉಪನ್ಯಾಸಕರಿಗಿದೆ. ಆದರೆ ಈ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಈ ಬಗ್ಗೆ ಅಗತ್ಯ ತಿಡದ್ದು ಪಡಿ ಬೇಕಾದರೆ ಮಾಡಿಕೊಡಲಾಗುತ್ತದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. 

ಆರ್ಡರ್ ಕಾಪಿ ಕೊಡುವವರೆಗೆ ನಾವು ತೆರಳುವುದಿಲ್ಲ; ಪಿಯು ಉಪನ್ಯಾಸಕರಿಂದ ಅಹೋರಾತ್ರಿ ಪ್ರತಿಭಟನೆ

ನನ್ನ ಪ್ರತಿ ಪ್ರಯತ್ನ ಈ ಎಲ್ಲಾ ನೂತನ ಉಪನ್ಯಾಸಕರಿಗೆ ತಿಳಿದಿದೆ. ಆರ್ಥಿಕ ಇಲಾಖೆಯ ನಿರ್ಬಂಧ ಇದ್ದರೂ ಸಹ‌ ಇವರೆಲ್ಲರಿಗೂ ಕೌನ್ಸೆಲಿಂಗ್ ಪ್ರಕ್ರಿಯೆ ಸಹ ಪೂರ್ಣಗೊಳಿಸಲಾಗಿದೆ.  ಈಗ ಕಾಲೇಜುಗಳು ಪ್ರಾರಂಭವಾದ ತಕ್ಷಣ ನೇಮಕಾತಿ ಆದೇಶ ಕೊಡಲಾಗುವುದು ಎಂದು ಈ ಎಲ್ಲಾ ನೂತನ ಉಪನ್ಯಾಸಕರುಗಳಿಗೆ  ಮುಂಚೆಯೇ ತಿಳಿಸಲಾಗಿತ್ತು ಎಂದು ಸುರೇಶ್ ಕುಮಾರ್ ಹೇಳಿದ್ದಾರೆ. 

 

ಪಿಯುಸಿ ಉಪನ್ಯಾಸಕರಾಗಿ ಆಯ್ಕೆಗೊಂಡಿರುವ ಮತ್ತು ಕೌನ್ಸೆಲಿಂಗ್ ಸಹ ಪೂರ್ಣವಾಗಿರುವ ಉಪನ್ಯಾಸಕರು ನೇಮಕಾತಿ ಆದೇಶಕ್ಕಾಗಿ ಧರಣಿ ಕೂತಿರುವ ವಿಚಾರ...

Posted by Suresh Kumar S on Monday, October 12, 2020

ಉಪನ್ಯಾಸಕರಾಗಿ ಆಯ್ಕೆಯಾಗಿ ಒಂದು ವರ್ಷದ ಒಳಗೆ ನೇಮಕಾತಿ ಆದೇಶ ದೊರೆಯದಿದ್ದರೆ ಆ ಆಯ್ಕೆ ಪಟ್ಟಿ ರದ್ದಾಗುತ್ತದೆ ಎಂಬ  ಆತಂಕ ಈ ನೂತನ ಉಪನ್ಯಾಸಕರಿಗಿದೆಎಂದು ಹೇಳಿದ್ದಾರೆ. 

PREV
click me!

Recommended Stories

ತಲೆಮೇಲೆ ಸೌದೆ ಹೊರೆ ಹೊತ್ತರೂ, ಬ್ರಿಟೀಷರು ನಾಚುವಂತಹ ಇಂಗ್ಲೀಷ್ ಮಾತು! ಮಹಿಳೆ ಆತ್ಮವಿಶ್ವಾಸಕ್ಕೆ ನೆಟ್ಟಿಗರು ಫಿದಾ!
ಪ್ರಧಾನ ಮಂತ್ರಿ ಕೌಶಲ ವಿಕಾಸ ಯೋಜನೆಯಡಿ ತರಬೇತಿಯಾದ ಮಂಗಳೂರಿನ 15200 ಅಭ್ಯರ್ಥಿಗಳಲ್ಲಿ ಕೇವಲ 8.45%ಗೆ ಮಾತ್ರ ಜಾಬ್!