ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್....!

Published : Sep 02, 2020, 07:35 PM ISTUpdated : Sep 02, 2020, 07:39 PM IST
ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್....!

ಸಾರಾಂಶ

ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ಸಿಹಿ ಸುದ್ದಿ ನೀಡಿದೆ. ಇದರೊಂದಿಗೆ ಹಬ್ಬಿದ್ದ ಎಲ್ಲಾ ವದಂತಿಗಳಿಗೆ ಗೊಂದಲಗಳಿಗೆ ತೆರೆ.

ಬೆಂಗಳೂರು, (ಸೆ.02): ವಿದ್ಯಾರ್ಥಿಗಳ ಬಸ್​ಪಾಸ್​ ದರದಲ್ಲಿ ಹೆಚ್ಚಳ ಮಾಡುವುದಿಲ್ಲ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಸ್ಪಷ್ಟನೆ ಕೊಟ್ಟಿದ್ದಾರೆ.

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಅವರು, ವಿದ್ಯಾರ್ಥಿಗಳಿಗೆ ಇಷ್ಟುಕಾಲ ರಿಯಾಯಿತಿ ದರದಲ್ಲಿ ನೀಡುತ್ತಿದ್ದ ಬಸ್​ಪಾಸ್​ ದರದಲ್ಲಿ ಹೆಚ್ಚಳ ಮಾಡುವುದಿಲ್ಲ. ಹಿಂದಿನ ಮಾನದಂಡಗಳನ್ನು ಬದಲಿಸುವ ಉದ್ದೇಶವಿಲ್ಲ. ಹಾಗಾಗಿ ವಿದ್ಯಾರ್ಥಿಗಳು, ಪಾಲಕರು ಆತಂಕಪಡುವುದು ಬೇಡ ಎಂದು ಸ್ಪಷ್ಟಪಡಿಸಿದರು.

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: ಬಸ್​ನಲ್ಲಿ ಉಚಿತ ಪ್ರಯಾಣ, ಕಂಡಿಷನ್ ಅಪ್ಲೈ

ವಿದ್ಯಾರ್ಥಿಗಳ ಬಸ್​ಪಾಸ್​ ದರ ಹೆಚ್ಚು ಮಾಡಲಾಗುತ್ತದೆ ಎಂಬುದು ವದಂತಿಯಷ್ಟೇ. ಕಳೆದ ಶೈಕ್ಷಣಿಕ ವರ್ಷದಲ್ಲಿ ಯಾವ ನಿಯಮಗಳ ಅನುಸಾರ ಬಸ್​ಪಾಸ್​ ವಿತರಣೆ ಮಾಡಲಾಗುತ್ತಿತ್ತೋ, ಅದೇ ದರದಲ್ಲಿಯೇ ಈ ಬಾರಿಯೂ ವಿತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

 ಕೊರೋನಾ ವೈರಸ್​, ಲಾಕ್​ಡೌನ್​ ಶುರುವಾದಾಗಿನಿಂದ ರಾಜ್ಯ ಸಾರಿಗೆ ಸಂಸ್ಥೆ ನಷ್ಟದಲ್ಲಿಯೇ ಇದೆ. ಒಂದಷ್ಟು ಕಾಲ ಬಸ್​​ಗಳು ಸಂಚರಿಸಲಿಲ್ಲ. ಇದರಿಂದ  ಕೆಎಸ್‌ಆರ್‌ಟಿಸಿ ಸಂಸ್ಥೆ ಕೋಟಿಗಟ್ಟಲೇ ನಷ್ಟವಾಗಿದೆ. ಇದರಿಂದ ಈ ಬಾರಿ ವಿದ್ಯಾರ್ಥಿಗಳ ಬಸ್​ ಪಾಸ್​ ದರ ಹೆಚ್ಚಿಸಲಾಗುತ್ತದೆ ಎಂಬ ಸುದ್ದಿಯೊಂದು ಹರಿದಾಡುತ್ತಿತ್ತು.

ಈ ವದಂತಿ ಹಬ್ಬುತ್ತಿರುವುದು ಸಚಿವ ಲಕ್ಷ್ಮಣ ಸವದಿ ಅವರ ಗಮನಕ್ಕೆ ಬಂದಿದ್ದು, ಈ ಬಗ್ಗೆ ಮಾಧ್ಯಮ ಪ್ರಕಟಣೆ ಮೂಲಕ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. 

ಕಳೆದ ಶೈಕ್ಷಣಿಕ ವರ್ಷದಲ್ಲಿ ಬಸ್ ಪಾಸ್‍ಗಳನ್ನು ಯಾವ ಪ್ರಮಾಣದ ದರದಲ್ಲಿ ವಿತರಿಸಲಾಗಿತ್ತೋ  ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿಯೂ ಸಹ ಅದೇ ರೀತಿಯಲ್ಲಿ ಅಳವಡಿಸಿಕೊಳ್ಳಲಾಗುವುದು ಎಂದರು.

PREV
click me!

Recommended Stories

SSLCಗೆ ಶೇ.33 ಪಾಸಿಂಗ್ ಮಾರ್ಕ್ಸ್ ಸಮರ್ಥಿಸಿ ಕೊಳ್ಳುತ್ತಲೇ ರಾಜ್ಯ ಪೊಲಿಟಿಕ್ಸ್ ಅಪ್ಟೇಡ್ ಕೊಟ್ಟ ಮಧು ಬಂಗಾರಪ್ಪ
ಖಾಸಗಿ ಶಾಲೆಗಳಿಗೆ ಸೆಡ್ಡು, ಮುಂದಿನ ವರ್ಷದಿಂದ ರಾಜ್ಯಾದ್ಯಂತ 700 ಕೆಪಿಎಸ್ ಶಾಲೆ ಕಾರ್ಯಾರಂಭ