ರಾಜ್ಯದಲ್ಲಿ ದ್ವಿತೀಯ ಪಿಯು ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಮೇ 22ರ ಬದಲಾಗಿ ಮೇ 23ರಿಂದ ಪೂರಕ ಪರೀಕ್ಷೆಯನ್ನು ನಡೆಸಲು ಪರಿಷ್ಕೃತ ದಿನಾಂಕವನ್ನು ಬಿಡುಗಡೆ ಮಾಡಲಾಗಿದೆ.
ಬೆಂಗಳೂರು (ಮೇ 09): ರಾಜ್ಯದಲ್ಲಿ ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯನ್ನು ಮೇ 22ರಿಂದ ಆಯೋಜನೆ ಮಾಡಲಾಗಿತ್ತು. ಆದರೆ, ಅಂದು ಸಿಇಟಿ ಪರೀಕ್ಷೆ ಇರುವುದರಿಂದ ಮೇ 23 ರಿಂದ ಪೂರಕ ಪರೀಕ್ಷೆಯನ್ನು ನಡೆಸಲು ಕರ್ನಾಟಕ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಈಗಾಗಲೇ ಹೊರಡಿಸಿದ್ದ ಪೂರ ಪರೀಕ್ಷಾ ವೇಳಾಪಟ್ಟಿಯಲ್ಲಿ ಮೇ 22 ರಿಂದ ಜೂ.2ರವರೆಗೆ ಪೂರಕ ಪರೀಕ್ಷೆ ನಡೆಸಲು ತೀರ್ಮಾನಿಸಿತ್ತು. ಆದರೆ, ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯ ಕನ್ನಡ ಭಾಷಾ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ದ್ವಿತೀಯ ಪಿಯು ಪೂರಕ ಪರೀಕ್ಷೆಯನ್ನು ಮೇ 22ರ ಬದಲಿಗೆ ಮೇ 23ರಿಂದ ಜೂ.3ರವರೆಗೆ ನಡೆಸಲು ತೀರ್ಮಾನಿಸಿದೆ.
ಕರ್ನಾಟಕ ಎಸ್ಎಸ್ಎಲ್ಸಿ 2023ರ ಫಲಿತಾಂಶ ಪ್ರಕಟ: ಚಿತ್ರದುರ್ಗ ಪ್ರಥಮ, ಮಂಡ್ಯ 2ನೇ ಸ್ಥಾನ
ಈ ವರ್ಷದಿಂದ ದ್ವಿತೀಯ ಪಿಯು ಪರೀಕ್ಷೆ ನಡೆಸುತ್ತಿರುವ ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿಯಿಂದ ದ್ವಿತೀಯ ಪಿಯು ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆ ಮಂಗಳವಾರ ಬಿಡುಗಡೆ ಮಾಡಿದೆ. ಮೇ 23 ರಿಂದ ಪೂರಕ ಪರೀಕ್ಷೆ ಆರಂಭವಾಗಲಿದ್ದು, ಹದಿನೈದು ದಿನಗಳ ಮುಂಚೆಯೇ ಪರೀಕ್ಷಾರ್ಥಿಗಳಿಗೆ ದಿನಾಂಕವನ್ನು ಘೋಷಣೆ ಮಾಡಿದೆ. ಇನ್ನು ಪರೀಕ್ಷಾ ದಿನಾಂಕ ಮತ್ತು ವೇಳಾಪಟ್ಟಿಯ ಕುರಿತ ಹೆಚ್ಚಿನ ಮಾಹಿತೊಗಾಗಿ, ಪರೀಕ್ಷಾರ್ಥಿಗಳು https://kseab.karnataka.gov.in/ ವೆಬ್ಸೈಟ್ಗೆ ಭೇಟಿ ನೀಡಿ ವೇಳಾಪಟ್ಟಿ ಮಾಹಿತಿ ಪಡೆಯಬಹುದು. ಕೆಲವು ಪರೀಕ್ಷೆಗಳು ಬೆಳಗ್ಗೆ 10.15ರಿಂದ 1.30 ಹಾಗೂ ಮತ್ತೆ ಕೆಲವು ಪರೀಕ್ಷೆ ಮಧ್ಯಾಹ್ನ 2.15ರಿಂದ 5.30ರ ವರೆಗೆ ನಡೆಯಲಿದೆ.
SSLC Toppers 2023 ಇವರೇ ನೋಡಿ: ಪೂರಕ ಪರೀಕ್ಷೆಗೆ ಮೇ 15ರೊಳಗೆ ಅರ್ಜಿ ಸಲ್ಲಿಸಿ