ಜನವರಿಯಲ್ಲಿ ಶಾಲಾ, ಕಾಲೇಜು ಆರಂಭ ಬೇಡ: ಸುಬುಧೇಂದ್ರ ತೀರ್ಥರು

Kannadaprabha News   | Asianet News
Published : Dec 21, 2020, 09:13 AM IST
ಜನವರಿಯಲ್ಲಿ ಶಾಲಾ, ಕಾಲೇಜು ಆರಂಭ ಬೇಡ: ಸುಬುಧೇಂದ್ರ ತೀರ್ಥರು

ಸಾರಾಂಶ

ಕೊರೋನಾ ಮಹಾಮಾರಿ ಇಡೀ ಮನುಕುಲವನ್ನು ಹಿಂಡಿಹಿಪ್ಪೆ ಮಾಡುತ್ತಿದೆ| ಎರಡನೇ ಹಂತದ ಕೊರೋನಾ ಅಲೆ ಹರಡುವ ಭೀತಿ ಇನ್ನೂ ಇದೆ| ಇಂಥ ಪರಿಸ್ಥಿತಿಯಲ್ಲಿ ಜನವರಿಯಿಂದ ಶಾಲಾ-ಕಾಲೇಜುಗಳನ್ನು ಆರಂಭಿಸುವ ಬದಲು ಒಂದಷ್ಟು ದಿನ ಕಾದು ನೋಡುವುದು ಸೂಕ್ತ ಎಂದು ಸರ್ಕಾರಕ್ಕೆ ಸಲಹೆ ನೀಡಿದ ಸುಬುಧೇಂದ್ರ ಶ್ರೀಗಳು|   

ರಾಯಚೂರು(ಡಿ.21): ಚಳಿಗಾಲದಲ್ಲಿ ಕೊರೋನಾ ವ್ಯಾಪಿಸುವ ಆತಂಕ ಹೆಚ್ಚಿರುವ ಹಿನ್ನೆಲೆಯಲ್ಲಿ ಜನವರಿಯಿಂದ ಶಾಲಾ-ಕಾಲೇಜುಗಳನ್ನು ಆರಂಭಿಸುವ ನಿರ್ಧಾರವನ್ನು ರಾಜ್ಯ ಸರ್ಕಾರ ಪುನರ್‌ ಪರಿಶೀಲಿಸಬೇಕು ಎಂದು ಮಂತ್ರಾಲಯದ ಡಾ.ಸುಬುಧೇಂದ್ರ ತೀರ್ಥರು ಸಲಹೆ ನೀಡಿದ್ದಾರೆ.

ಈ ಕುರಿತು ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕೊರೋನಾ ಮಹಾಮಾರಿ ಇಡೀ ಮನುಕುಲವನ್ನು ಹಿಂಡಿಹಿಪ್ಪೆ ಮಾಡುತ್ತಿದೆ. ಎರಡನೇ ಹಂತದ ಕೊರೋನಾ ಅಲೆ ಹರಡುವ ಭೀತಿ ಇನ್ನೂ ಇದೆ. ಇಂಥ ಪರಿಸ್ಥಿತಿಯಲ್ಲಿ ಜನವರಿಯಿಂದ ಶಾಲಾ-ಕಾಲೇಜುಗಳನ್ನು ಆರಂಭಿಸುವ ಬದಲು ಒಂದಷ್ಟು ದಿನ ಕಾದು ನೋಡುವುದು ಸೂಕ್ತ ಎಂದು ಶ್ರೀಗಳು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಖಾಸಗಿ ಶಾಲೆಗಳ ಸುಲಿಗೆಯಲ್ಲಿ ಸರ್ಕಾರ ಶಾಮೀಲು: ಬಿಎಸ್‌ವೈ ವಿರುದ್ಧ ಹರಿಹಾಯ್ದ ಸಿದ್ದು

ಸಾಮಾನ್ಯವಾಗಿ ಡಿಸೆಂಬರ್‌, ಜನವರಿಯಲ್ಲಿ ಚಳಿ ಜಾಸ್ತಿ ಇರುತ್ತದೆ. ಇದರಿಂದ ಕೊರೋನಾ ಹರಡುವ ಆತಂಕ ಹೆಚ್ಚಿರುತ್ತದೆ. ಅಲ್ಲದೆ, ಸಣ್ಣ ಮಕ್ಕಳಿಗೆ ಸಾಮಾಜಿಕ ಅಂತರ, ಸ್ವಚ್ಛತೆ ಹಾಗೂ ಇತರೆ ಸುರಕ್ಷತಾ ಕ್ರಮಗಳನ್ನು ಪಾಲಿಸುವುದು ಕಷ್ಟವಾಗುತ್ತದೆ. ಪರಿಸ್ಥಿತಿ ಹೀಗಿರುವಾಗ ಶಾಲಾ-ಕಾಲೇಜುಗಳನ್ನು ಆರಂಭಿಸಿದರೆ ರಾಜ್ಯದಲ್ಲಿ ಕೊರೋನಾ ವ್ಯಾಪಕವಾಗಿ ಹರಡಬಹುದಾಗಿದೆ. ಈ ಹಿಂದೆ ಶಾಲಾ-ಕಾಲೇಜುಗಳನ್ನು ಆರಂಭಿಸಲು ಸರ್ಕಾರ ಮುಂದಾದಾಗ ವಿಶ್ವಸಂಸ್ಥೆ, ಕೇಂದ್ರ ಹಾಗೂ ಆರೋಗ್ಯ ತಜ್ಞರು ಕೂಡ ಆ ನಿರ್ಧಾರವನ್ನು ಪುನರ್‌ ಪರಿಶೀಲಿಸುವಂತೆ ಸಲಹೆ ನೀಡಿದ್ದರು ಎಂದು ಶ್ರೀಗಳು ಸ್ಮರಿಸಿದರು.
 

PREV
click me!

Recommended Stories

ಮನೆಯಲ್ಲೇ ಯಾರು ಕೇಳಲ್ಲ, ನೀವು ಯಾರು ಕೇಳೋಕೆ? ತಡವಾಗಿ ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ ಶಿಕ್ಷಕಿ ಕೆನ್ನೆಗೆ ಬಾರಿಸಿದ ವಿದ್ಯಾರ್ಥಿ
ಸ್ಲಮ್ ಮಕ್ಕಳ ಬಾಳಲ್ಲಿ ಬಣ್ಣ ತುಂಬಿದ ಟೀಚರ್: 1 ಮಿಲಿಯನ್ ಡಾಲರ್ ಮೊತ್ತದ ಜಾಗತಿಕ ಶಿಕ್ಷಕಿ ಪ್ರಶಸ್ತಿ ಗೆದ್ದ ರೂಬೆಲ್ ನಾಗಿ