ಗಾಯಾಳು ವಿದ್ಯಾರ್ಥಿನಿಗೆ 1 ಲಕ್ಷ ಪರಿಹಾರದ ಚೆಕ್‌ ನೀಡಿದ ಸಚಿವ ಸುರೇಶ್‌ ಕುಮಾರ್‌

Kannadaprabha News   | Asianet News
Published : Feb 03, 2021, 09:49 AM IST
ಗಾಯಾಳು ವಿದ್ಯಾರ್ಥಿನಿಗೆ 1 ಲಕ್ಷ ಪರಿಹಾರದ ಚೆಕ್‌ ನೀಡಿದ ಸಚಿವ ಸುರೇಶ್‌ ಕುಮಾರ್‌

ಸಾರಾಂಶ

ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿನಿಗೆ 1 ಲಕ್ಷ ಪರಿಹಾರ| ವಿದ್ಯಾರ್ಥಿನಿ ದಾಖಲಾಗಿರುವ ನಿಮ್ಹಾನ್ಸ್‌ಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಸಚಿವರು| ಬಾಲಕಿಗೆ ನೆರವಾಗುವಂತೆ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ|   

ಬೆಂಗಳೂರು(ಫೆ.03): ರಾಷ್ಟ್ರೀಯ ಪ್ರತಿಭಾನ್ವೇಷಣಾ ಪರೀಕ್ಷೆಗೆ ತೆರಳುವಾಗ ಅಪಘಾತಕ್ಕೊಳಗಾಗಿ ತೀವ್ರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿನಿ ಯಶಸ್ವಿನಿ ಅವರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖಾ ಸಚಿವ ಎಸ್‌.ಸುರೇಶ್‌ ಕುಮಾರ್‌ 1 ಲಕ್ಷ ಸಹಾಯಧನದ ಚೆಕ್‌ ವಿತರಿಸಿದ್ದಾರೆ. 

ವಿದ್ಯಾರ್ಥಿನಿ ದಾಖಲಾಗಿರುವ ನಿಮ್ಹಾನ್ಸ್‌ಗೆ ಮಂಗಳವಾರ ಕೂಡ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಸಚಿವರು, ಸಹಾಯಧನದ ಚೆಕ್‌ ವಿತರಿಸಿ ಬಾಲಕಿಯ ಪೋಷಕರಿಗೆ ಸಮಾಧಾನ ಹೇಳಿದ್ದಾರೆ. 

ರಾಜ್ಯದಲ್ಲಿ ಈ ನಾಲ್ಕು ತರಗತಿಗಳು ಆರಂಭ?

ಬಾಲಕಿಯ ತಂದೆ ಸೆಕ್ಯೂರಿಟಿ ಕೆಲಸ ಮಾಡುತ್ತಿದಾರೆ. ಹೀಗಾಗಿ ಬಾಲಕಿಗೆ ನೆರವಾಗುವಂತೆ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರಿಗೆ ಈ ವೇಳೆ ಸಚಿವರು ಸೂಚಿಸಿದರು. ಸಚಿವರಿಂದ ಮಾಹಿತಿ ಪಡೆದುಕೊಂಡಿದ್ದ ನಗರ ಸಂಚಾರ ಜಂಟಿ ಪೊಲೀಸ್‌ ಆಯುಕ್ತರು ಕೂಡ ಬಾಲಕಿಯ ಚಿಕಿತ್ಸೆಗೆ ಧನ ಸಹಾಯ ಮಾಡಿದ್ದಾರೆಂದು ಬಾಲಕಿಯ ತಂದೆ ತಿಳಿಸಿದರು.
 

PREV
click me!

Recommended Stories

ಹಾಸನದ 7ನೇ ತರಗತಿ ಬಾಲಕ ಏಷ್ಯನ್ ಬುಕ್‌ ಆಫ್ ರೆಕಾರ್ಡ್, ಕಣ್ಣು ಮುಚ್ಚಿಕೊಂಡೇ 1 ನಿಮಿಷದಲ್ಲಿ 8 ಕ್ಯೂಬ್ ಕಮಾಲ್!
ಯುಜಿಸಿಇಟಿ 2026: ಕೆಇಎಯಿಂದ ಅರ್ಜಿ ಸಲ್ಲಿಕೆಗೆ 1 ತಿಂಗಳು ಅವಕಾಶ, ಆದರೆ ಹಲವು ಮಹತ್ವದ ಬದಲಾವಣೆ