ಮಂಡ್ಯ ಲೋಕಸಭಾ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ವಿರುದ್ಧ ದೂರು ದಾಖಲು

Published : May 13, 2019, 07:01 PM IST
ಮಂಡ್ಯ ಲೋಕಸಭಾ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ವಿರುದ್ಧ ದೂರು ದಾಖಲು

ಸಾರಾಂಶ

ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆ ಮುಗಿದಿದ್ದು, ಈಗ ಫಲಿತಾಂಶವನ್ನು ಇಡೀ ರಾಜ್ಯವೇ ಎದುರು ನೋಡುತ್ತಿದೆ. ಇದರ ಮಧ್ಯೆ ಜೆಡಿಎಸ್ ಗೆ ಭರ್ಜರಿ ಪೈಪೋಟಿ ನೀಡಿರುವ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ವಿರುದ್ಧ ದೂರು ದಾಖಲಾಗಿದೆ.

ಬೆಂಗಳೂರು, [ಮೇ.13]: ಮಂಡ್ಯ ಲೋಕಸಭಾ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ವಿರುದ್ಧ ಚುನಾವಣಾ ಆಯೋಗಕ್ಕೆ ವಕೀಲರ ತಂಡ ದೂರು ನೀಡಿದೆ. 

ಸಿಆರ್ ಪಿಎಸ್ ಯೋಧ ಮತದಾನ‌ ಮಾಡಿದನ್ನ ಫೇಸ್ ಬುಕ್ ಗೆ ಹಾಕಿ ಮತಯಾಚನೆ ಮಾಡಿರುವ ಹಿನ್ನೆಲೆಯಲ್ಲಿ ಕಿರಣ್ ಸೇರಿದಂತೆ ಐವರು ವಕೀಲರ ತಂಡ ರಾಜ್ಯ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ.

ಸಿಆರ್ ಪಿ ಎಫ್ ಯೋಧ ಸುಮಲತಾ ಅವರಿಗೆ ಮತದಾನ‌ ಮಾಡಿರುವ  ಪೊಟೋಗಳನ್ನ ಫೇಸ್ ಬುಕ್ ನಲ್ಲಿ ಹಂಚಿಕೊಂಡಿದ್ದರು. ಇದನ್ನ ಶೇರ್ ಮಾಡುವ ಮೂಲಕ ಸುಮಲತಾ ಅಂಬರೀಶ್ ಅವರು ಮತಯಾಚನೆ ಮಾಡಿದ್ದಾರೆಂದು ಆರೋಪಿಸಲಾಗಿದೆ.

ಸುಮಲತಾಗೆ ಹಾಕಿದ ಮೊದಲ ಮತವೇ ಅಸಿಂಧು

ಯಾವುದೇ ಯೋಧನನ್ನ ಬಳಸಿಕೊಂಡು ಮತದಾನ ಮಾಡುವ ಹಾಗಿಲ್ಲ. ಇದು ಕಾನೂನಿಗೆ ಬಾಹಿರ ಅಂತ ಗೊತ್ತಿದ್ರು ಸುಮಲತಾ ಅವರು ಕಾನೂನು ಉಲ್ಲಂಘನೆ ಮಾಡಿದ್ದಾರೆ. 

ಯೋಧ ಹಂಚಿಕೊಂಡಿರುವ ಪೋಟೊಗಳು ಉಳಿದ ಮಂಡ್ಯ ಮತದಾರರನ್ನ ಪ್ರೇರೆಪಿಸಿವೆ. ಹೀಗಾಗಿ ಸುಮಲತಾ ಅಂಬರೀಶ್ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

ಮಂಡ್ಯ ಮೂಲದ ಸಿಆರ್‌ಪಿಎಫ್ ಯೋಧ ಆರ್​ ನಾಯಕ್, ಸುಮಲತಾ ಅಂಬರೀಶ್ ಅವರಿಗೆ ಮತ ಚಲಾಯಿಸುತ್ತಿರುವ ಫೋಟೋವನ್ನು ಫೇಸ್‌ಬುಕ್‌ಗೆ ಅಪ್‌ಲೋಡ್  ಮಾಡಿದ್ದರು. ಆದ್ರೆ, ಯೋಧನ ಮತವನ್ನು ಅಸಿಂಧುಗೊಳಿಸಿ ಚುನಾವಣಾ ಆಯೋಗ ಇತ್ತೀಚೆಗೆ ಆದೇಶ ಹೊರಡಿಸಿತ್ತು.

PREV
click me!

Recommended Stories

ಒಬ್ಬ ನಟ, ಒಂದೇ ಹೆಸರಿನ ಚಿತ್ರಗಳಲ್ಲಿ ಮೂರು ಬಾರಿ ನಟಿಸಿದ್ದಾರೆ ಯಾರು ಈ ನಟ?
ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!