ಕಾಂಗ್ರೆಸ್ ಪ್ರಣಾಳಿಕೆ ಅಪಾಯಕಾರಿ, ಜಾರಿ ಸಾಧ್ಯವಿಲ್ಲ: ಬಿಜೆಪಿ!

By Web DeskFirst Published Apr 2, 2019, 6:38 PM IST
Highlights

2019ರ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಬಿಡುಗಡೆ| ಕಾಂಗ್ರೆಸ್ ಪ್ರಣಾಳಿಕೆ ಅಪಾಯಕಾರಿ ಎಂದ ಬಿಜೆಪಿ| ಕಾಂಗ್ರೆಸ್ ಪ್ರಣಾಳಿಕೆಯನ್ನು ಟುಕ್ಡೆ ಗ್ಯಾಂಗ್ ಸಿದ್ಧಪಡಿಸಿದೆ ಎಂದ ಅರುಣ್ ಜೇಟ್ಲಿ| ರಾಷ್ಟ್ರದ್ರೋಹದ ಕಾನೂನು ರದ್ದುಗೊಳಿಸುವ ಪ್ರಸ್ತಾವನೆಗೆ ವಿರೋಧ| 

ನವದೆಹಲಿ(ಏ.02): 2019ರ ಸಾರ್ವತ್ರಿಕ ಚುನಾವಣೆಗೆ ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆಯನ್ನು ಅಪಾಯಕಾರಿ ಪ್ರಣಾಳಿಕೆ ಎಂದು ಬಿಜೆಪಿ ಪ್ರತಿಕ್ರಿಯೆ ನೀಡಿದೆ. 

ಈ ಕುರಿತು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ, ಕಾಂಗ್ರೆಸ್ ಪ್ರಣಾಳಿಕೆ ಅಪಾಯಕಾರಿಯಾಗಿದ್ದು ಜಾರಿಗೆ ತರುವುದಕ್ಕೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

Union Finance Minister & BJP leader Arun Jaitley on Congress manifesto: Even though there was a drafting committee, but it appears that some of the important points have been drafted by the Congress President's friends in 'Tukde Tukde gang' when it deals with Jammu & Kashmir pic.twitter.com/2rE39uBOaC

— ANI (@ANI)

ಕಾಂಗ್ರೆಸ್‌ನ ಪ್ರಣಾಳಿಕೆ ಭಾರತವನ್ನು ಒಡೆಯುವ ಅಜೆಂಡಾ ಹೊಂದಿದೆ. ಕಾಂಗ್ರೆಸ್ ಪ್ರಣಾಳಿಕೆ ಸಿದ್ಧಪಡಿಸಲು ನೆಪ ಮಾತ್ರಕ್ಕೆ ಸಮಿತಿ ನೇಮಿಸಿ, ರಾಹುಲ್ ಗಾಂಧಿ ಆಪ್ತ ಟುಕ್ಡೆ ಗ್ಯಾಂಗ್ ನಿಂದ ಪ್ರಣಾಳಿಕೆ ಸಿದ್ಧಪಡಿಸಲಾಗಿದೆ ಎಂದು ಜೇಟ್ಲಿ ಆರೋಪಿಸಿದ್ದಾರೆ. 

ಜಮ್ಮು-ಕಾಶ್ಮೀರದ ವಿಷಯದಲ್ಲಿ ಕಾಂಗ್ರೆಸ್ ಪ್ರಣಾಳಿಕೆಯನ್ನು ನೋಡಿದರೆ ಆತಂಕಕವಾಗುತ್ತದೆ ಎಂದು ಅರುಣ್ ಜೇಟ್ಲಿ ಕಾಂಗ್ರೆಸ್ ಪ್ರಣಾಳಿಕೆ ಕುರಿತು ಕಿಡಿ ಕಾರಿದ್ದಾರೆ.

Union Finance Minister & BJP leader Arun Jaitley on Congress manifesto: Some of the ideas are positively dangerous, they are an agenda for the balkanisation of India. pic.twitter.com/XPp8LDXM4c

— ANI (@ANI)

ರಾಷ್ಟ್ರದ್ರೋಹದ ಕಾನೂನನ್ನೇ ರದ್ದುಗೊಳಿಸುವ ಪ್ರಣಾಳಿಕೆಗೆ ಒಂದೇ ಒಂದು ಮತವೂ ಅರ್ಹವಲ್ಲ ಎಂದು ಜೇಟ್ಲಿ ಹರಿಹಾಯ್ದಿದ್ದಾರೆ.

click me!