ಲೋಕಸಭಾ ಚುನಾವಣೆ : ಬಿಜೆಪಿ ಬೆಂಬಲಿಸಲು ಕರೆ ನೀಡಿದ ಕೈ ಮುಖಂಡ

By Web DeskFirst Published Apr 20, 2019, 4:22 PM IST
Highlights

ಲೋಕಸಭಾ ಚುನಾವಣೆ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ಹಲವು ರೀತಿಯ ಸಂಚಲನಗಳು ಉಂಟಾಗುತ್ತಿವೆ. ಕೈ ಅತೃಪ್ತ ಮುಖಂಡರೋರ್ವರು  ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಸುವಂತೆ ಬೆಂಬಲಿಗರಿಗೆ ಸೂಚಿಸಿದ್ದಾರೆ.

ಬೆಳಗಾವಿ : ಲೋಕಸಭಾ ಚುನಾವಣೆ ಕಾವು ರಾಜ್ಯದಲ್ಲಿ ಜೋರಾಗಿದ್ದು, ಇದೇ ವೇಳೆ ಕಾಂಗ್ರೆಸ್ ಅತೃಪ್ತ ಮುಖಂಡ ರಮೇಶ್ ಜಾರಕಿಹೊಳಿ  ತಮ್ಮ ಬೆಂಬಲಿಗರೊಂದಿಗೆ ನಿವಾಸದಲ್ಲಿ ಸಭೆ ನಡೆಸಿದ್ದಾರೆ. ಕಾರ್ಯಕರ್ತರರನ್ನು ಒಬ್ಬೊಬ್ಬರಾಗಿ ಭೇಟಿ ಮಾಡಿದ ಮಾಜಿ ಸಚಿವ ಜಾರಕಿಹೊಳಿ ಬಿಜೆಪಿ ಬೆಂಬಲಿಸುವಂತೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ. 

"

ಅತೃಪ್ತ ಮುಖಂಡ ರಮೇಶ್ ಜಾರಕಿಹೊಳಿ ಅಳಿಯ ಅಂಬಿರಾಯ ಪಾಟೀಲ್ ಈ ಬಗ್ಗೆ  ಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.ಈಗಾಗಲೇ ಕಾಂಗ್ರೆಸ್ ನಿಂದ ದೂರವೇ ಉಳಿದಿರುವ ಜಾರಕಿಹೊಳಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎನ್ನುವ ಚರ್ಚೆ ಜೋರಾಗಿದ್ದು,  ಇದೇ ವೇಳೆ ಬಿಜೆಪಿ ಬೆಂಬಲದ ವಿಚಾರದಿಂದ ಇನ್ನಷ್ಟು ಸ್ಪಷ್ಟವಾದಂತಾಗಿದೆ. 

click me!