
ಹಾಸನ[ಮಾ.25]: ಜೆಡಿಎಸ್ ಹಾಗೂ ಕಾಂಗ್ರೆಸ್ ನಡುವೆ ಮೈತ್ರಿ ಏರ್ಪಟ್ಟಿರುವುದರಿಂದ ಮೊದಲ ಬಾರಿ ಕಣ ಜೆಡಿಎಸ್ ಹಾಗೂ ಬಿಜೆಪಿ ನಡುವೆ ಸ್ಪರ್ಧೆಗೆ ಸಜ್ಜಾಗಿದೆ.
ಜೆಡಿಎಸ್ ತನ್ನ ಅಭ್ಯರ್ಥಿಯಾಗಿ ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಅವರನ್ನು ಕಣಕ್ಕಿಳಿಸಿದ್ದರೆ, ಕಾಂಗ್ರೆಸ್ನಿಂದ ಆಮದಾಗಿರುವ ಎ.ಮಂಜು ಬಿಜೆಪಿಯಿಂದ ಸತ್ವ ಪರೀಕ್ಷೆಗೆ ಮುಂದಾಗಿದ್ದಾರೆ. ಮಂಜು ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿನ ಬಲ ಮತ್ತು ಪಕ್ಷದ ಸಾಂಪ್ರದಾಯಿಕ ಮತಗಳು ಶ್ರೀ ರಕ್ಷೆಯಾಗಲಿವೆ.
ಪ್ರಜ್ವಲ್ಗೆ ಅವರ ತಾತ ದೇವೇಗೌಡರ ವರ್ಚಸ್ಸು ಮತ್ತು ತಂದೆ ರೇವಣ್ಣನವರ ಅಭಿವೃದ್ಧಿ ಕೆಲಸಗಳು ಮತ ತರಬಹುದು.
ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...