ಪುತ್ರನ ರಾಜಕೀಯ ಭವಿಷ್ಯಕ್ಕೆ ರಾತ್ರೋರಾತ್ರಿ ಜ್ಯೋತಿಷಿ ಮನೆಗೆ ಸಿಎಂ

By Web DeskFirst Published Mar 13, 2019, 4:26 PM IST
Highlights

ಪುತ್ರನ ರಾಜಕೀಯ ಭವಿಷ್ಯ ಹೇಗಿದೆ ಎಂದು ತಿಳಿಯಲು ಸಿಎಂ ಕುಮಾರಸ್ವಾಮಿ ರಾತ್ರೋರಾತ್ರಿ ಖ್ಯಾತ ಜ್ಯೋತಿಷಿ ಮನೆ ಬಾಗಿಲು ಬಡಿದಿದ್ದಾರೆ. ಮಗನ ರಾಜಕೀಯ ಭವಿಷ್ಯದ ಬಗ್ಗೆ ಜ್ಯೋತಿಷಿ ಹೇಳಿದ್ದೇನು..?

ಬೆಂಗಳೂರು (ಮಾ.13): ಈ ಬಾರಿಯ ಲೋಕಸಭಾ ಚುನಾವಣೆಗೆ ದೇವೇಗೌಡ ಮೊಮ್ಮಕ್ಕಳು ಅಖಾಡಕ್ಕಿಳಿದಿದ್ದಾರೆ.ಹಾಸನದಿಂದ ಪ್ರಜ್ವಲ್ ರೇವಣ್ಣ ಮಂಡ್ಯದಿಂದ ನಿಖಿಲ್ ಕುಮಾರಸ್ವಾಮಿಗೆ ಟಿಕೆಟ್​ ನೀಡುವ ಮೂಲಕ ಇವರಿಬ್ಬ ರಾಜಕೀಯ ಪ್ರವೇಶಕ್ಕೆ ವೇದಿಕೆ ಸಜ್ಜುಗೊಳಿಸಿದ್ದಾರೆ. 

"

ಪರಸ್ಥಳದಿಂದ ಬಂದು ಎಲೆಕ್ಷನ್ ಗೆ ನಿಲ್ತಾರೆ ಅನ್ನೋರಿಗೆ HDK ಖಡಕ್ ಉತ್ತರ

ಆದ್ರೆ, ಸಿಎಂ ಕುಮಾರಸ್ವಾಮಿ ಅವರು ಮಗನ ರಾಜಕೀಯ ಭವಿಷ್ಯ ತಿಳಿದುಕೊಳ್ಳು ರಾತ್ರೋರಾತ್ರಿ ಜ್ಯೋತಿಷಿ ಮನೆ ಬಾಗಿಲು ಬಡಿದಿದ್ದಾರೆ.

ಮಂಡ್ಯ ಕ್ಷೇತ್ರದಿಂದ ಸುಮಲತಾ ಅಂಬರೀಷ್​ ಸ್ಪರ್ಧೆ ಮಾಡುತ್ತಿರುವುದರಿಂದ ಮಗನ ರಾಜಕೀಯ ಭವಿಷ್ಯದ ಬಗ್ಗೆ ಕುಮಾರಸ್ವಾಮಿ ಆತಂಕಗೊಂಡಿದ್ದಾರೆ. 

ಈ ಹಿನ್ನೆಲೆಯಲ್ಲಿ  ನೆನ್ನೆ (ಮಂಗಳವಾರ) ಕುಮಾರಸ್ವಾಮಿ ಅವರು ಮಗನೊಂದಿಗೆ ಖ್ಯಾತ ಜ್ಯೋತಿಷಿ ರಾಜಗುರು ದ್ವಾರಕಾನಾಥ್​​ ಗುರೂಜಿ ಅವರನ್ನು ಭೇಟಿಯಾಗಿ, ಮಗನ ರಾಜಕೀಯ ಭವಿಷ್ಯ ಕೇಳಿದ್ದಾರೆ.

ಭೇಟಿ ವೇಳೆ ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ರಾಜಕೀಯ ಭವಿಷ್ಯ ಕಷ್ಟ ಎಂದು ದ್ವಾರಕಾನಾಥ್ ಗುರೂಜಿ ಹೇಳಿರುವುದಾಗಿ ಮೂಲಗಳು ತಿಳಿಸಿವೆ. 

ನಿಖಿಲ್ ಚುನಾವಣೆಗೆ ಸ್ಪರ್ಧೆ ಮಾಡಿಬಿಟ್ಟಿದ್ದಾರೆ. ಈಗ ನಾನು ನಿಖಿಲ್​ಗೆ ಆಶೀರ್ವಾದ ಮಾಡಲೇಬೇಕು. ಅಂತೆಯೇ ನನ್ನ ಕರ್ತವ್ಯವನ್ನು ನಾನು ಮಾಡಿದ್ದೇನೆ, ಎಂದು ದ್ವಾರಕಾನಾಥ್ ಹೇಳಿದ್ದಾರೆ.ಈ ಮಾತಿನಿಂದ ಸಿಎಂ ಕುಮಾರಸ್ವಾಮಿ ಇನ್ನಷ್ಟು ಆತಂಕಕ್ಕೆ ಒಳಗಾಗಿದ್ದಾರೆ.

ನಿಖಿಲ್​ ಸಿನಿಮಾ ಕ್ಷೇತ್ರಕ್ಕೆ ಕಾಲಿಡುವ ಬಗ್ಗೆ ಕುಮಾರಸ್ವಾಮಿ ತುಂಬಾನೇ ತಲೆಕೆಡಿಸಿಕೊಂಡಿದ್ದರು. ಮೊದಲ ಚಿತ್ರ ‘ಜಾಗ್ವಾರ್​’ಗೋಸ್ಕರ ಸಾಕಷ್ಟು ಹಣವನ್ನು ವೆಚ್ಚ ಮಾಡಿದ್ದರು. ಇದೀಗ ರಾಜಕೀಯದಲ್ಲಿ ನಿಖಿಲ್ ಭವಿಷ್ಯ ಏನಾಗಲಿದೆ ಎನ್ನುವ ಬಗ್ಗೆ ಕುಮಾರಸ್ವಾಮಿ ಹೊಸ ಚಿಂತೆ ಶುರುವಾಗಿದೆ.

click me!