ಬಳ್ಳಾರಿ: ಕಾಂಗ್ರೆಸ್, ಬಿಜೆಪಿ ನಾಯಕರು ತಂಗಿದ್ದ ಹೋಟೆಲ್ ಮೇಲೆ ಐಟಿ ದಾಳಿ

Published : Apr 09, 2019, 10:44 PM ISTUpdated : Apr 09, 2019, 10:48 PM IST
ಬಳ್ಳಾರಿ: ಕಾಂಗ್ರೆಸ್, ಬಿಜೆಪಿ ನಾಯಕರು ತಂಗಿದ್ದ ಹೋಟೆಲ್ ಮೇಲೆ ಐಟಿ ದಾಳಿ

ಸಾರಾಂಶ

ಬಳ್ಳಾರಿಯ ಹೋಟೆಲ್ ಮೇಲೆ ಐಟಿ ರೇಡ್ | ಬಳ್ಳಾರಿಯಲ್ಲಿರುವ ನಕ್ಷತ್ರ ಹೋಟೆಲ್ ಮೇಲೆ ಐಟಿ ಅಧಿಕಾರಿಗಳ ದಾಳಿ | ಕಾಂಗ್ರೆಸ್, ಬಿಜೆಪಿ ಬೆಂಬಲಿಗರ ಕೊಠಡಿಗಳಲ್ಲಿ ಪರಿಶೀಲನೆ ನಕ್ಷತ್ರ ಹೋಟೆಲ್ ನಲ್ಲಿ ಪರಿಶೀಲನೆ ನಡೆಸುತ್ತಿರುವ ಐಟಿ ಅಧಿಕಾರಿಗಳು| ಹಣದ ವಹಿವಾಟಿನ ಮೇಲೆ ನಿಗಾ ಇಟ್ಟಿರುವ ಐಟಿ ಅಧಿಕಾರಿಗಳು  

ಬಳ್ಳಾರಿ, [ಏ.09]: ಲೋಕಸಭಾ ಚುನಾವಣೆಯಲ್ಲಿ ಹಣದ ವಹಿವಾಟಿನ ಹಿನ್ನಲೆಯಲ್ಲಿ ರಾಜ್ಯದಲ್ಲಿ ಐಟಿ ದಾಳಿ ಮುಂದುವರಿದಿದೆ. ಇತ್ತೀಚೆಗೆ ಹಾಸನ, ಮಂಡ್ಯ, ಶಿವಮೊಗ್ಗ ಸೇರಿಂದತೆ ಹಲವೆಡೆ ಐಟಿ ದಾಳಿ ನಡೆದಿತ್ತು.

ಇಂದು [ಮಂಗಳವಾರ] ಗಣಿನಾಡು ಬಳ್ಳಾರಿಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.  ನಗರದ ಮೋಕಾ ರಸ್ತೆಯಲ್ಲಿರುವ ನಕ್ಷತ್ರ  ಪಂಚತಾರಾ ಹೊಟೇಲ್ ಮೇಲೆ ಆದಾಯ ತೆರಿಗೆ (ಐಟಿ) ಅಧಿಕಾರಿಗಳು ದಾಳಿ ನಡೆಸಿ ಪರಿಶೀಲಿಸಿದ್ದಾರೆ.

ಕರ್ನಾಟಕದ ಐಟಿ ದಾಳಿಯಲ್ಲಿ ಒಟ್ಟು ಸಿಕ್ಕ ಹಣ ಎಷ್ಟು?

ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೈ.ದೇವೇಂದ್ರಪ್ಪ ಹಾಗೂ ಅವರ ಬೆಂಬಲಿಗರು ಇದೇ ಹೊಟೇಲ್ ನಲ್ಲಿ ತಂಗಿದ್ದರು. ಈ ವೇಳೆ
 ಲಗ್ಗೆ ಇಟ್ಟ ಐಟಿ ಅಧಿಕಾರಿಗಳು ತಪಾಸಣೆ ಕಾರ್ಯ ನಡೆಸಿದ್ದಾರೆ.

ದೇವೇಂದ್ರಪ್ಪ ಕೋಣೆ ಮಾತ್ರವಲ್ಲದೇ ಕಾಂಗ್ರೆಸ್ ಮುಖಂಡರ ಹೆಸರಿನಲ್ಲಿ ಇರುವ ಕೋಣೆಗಳನ್ನು ಸಹ ಪರಿಶೀಲನೆ ನಡೆಸಿದ್ದಾರೆ.

PREV
click me!

Recommended Stories

ಒಬ್ಬ ನಟ, ಒಂದೇ ಹೆಸರಿನ ಚಿತ್ರಗಳಲ್ಲಿ ಮೂರು ಬಾರಿ ನಟಿಸಿದ್ದಾರೆ ಯಾರು ಈ ನಟ?
ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!