ಬಿಜೆಪಿ ಶಾಸಕ‌ CT ರವಿ ವಿರುದ್ಧ ದೂರು ದಾಖಲು

By Web DeskFirst Published Apr 13, 2019, 6:06 PM IST
Highlights

ಚಿಕ್ಕಮಗಳೂರು-ಉಡುಪಿ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಪರ ಪ್ರಚಾರದ ಭಾಷಣದ ವೇಳೆ‌ ಯಡವಟ್ಟು ಮಾಡಿಕೊಂಡಿಕೊಂಡಿದ್ದ
 ಶಾಸಕ ಸಿ.ಟಿ ರವಿ ವಿರುದ್ಧ ದೂರು ದಾಖಲಾಗಿದೆ.

ಚಿಕ್ಕಮಗಳೂರು, [ಏ.13]: ಮತದಾರರ ಬಗ್ಗೆ ಅವಹೇಳನಕಾರಿ ಭಾಷಣ ಹಿನ್ನೆಲೆ ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಶಾಸಕ ಸಿ.ಟಿ. ರವಿ ವಿರುದ್ಧ ದೂರು ದಾಖಲಾಗಿದೆ.

ಚಿಕ್ಕಮಗಳೂರು-ಉಡುಪಿ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಪರ ಪ್ರಚಾರದ ಭಾಷಣದ ವೇಳೆ ಬಿಜೆಪಿಗೆ ಮತ ಹಾಕದವರು ತಾಯಿಗಂಡರು ಎಂದು ಸಿ.ಟಿ ರವಿ ಹೇಳಿದ್ದಾರೆ. 

ಈ ಹೇಳಿಕೆ ವಿರುದ್ಧ ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ರಾಜ್ಯ ಕಾರ್ಯದರ್ಶಿ ಶಿರಾಜ್ ಹುಸೈನ್ ಎನ್ನುವರು ಸ್ಥಳೀಯ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.

click me!