ಸುಮಲತಾ ಪರ ಯಶ್, ದರ್ಶನ್ ಪ್ರಚಾರ:ಚುನಾವಣಾಧಿಕಾರಿ ಹೇಳಿದ್ದೇನು..?

By Web DeskFirst Published Mar 20, 2019, 8:12 PM IST
Highlights

ಮಂಡ್ಯ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್  ಅವರೊಂದಿಗೆ ಯಶ್, ದರ್ಶನ್  ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡಿದ್ದಾರೆ ಎನ್ನುವ ದೂರಿಗೆ ಸ್ವತಃ ಮುಖ್ಯ ಚುನಾವಣಾಧಿಕಾರಿ ಸ್ಪಷ್ಟನೆ ಪ್ರತಿಕ್ರಿಯಿಸಿದ್ದು ಹೀಗೆ...

ಬೆಂಗಳೂರು, [ಮಾ.20]:  ಸುಮಲತಾ ಅವರಿಗೆ ನಟ ದರ್ಶನ್ ಮತ್ತು ಯಶ್​ ಬೆಂಬಲ ಸೂಚಿಸಿ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡು ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎನ್ನುವ ಆರೋಪಕ್ಕೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಸ್ಪಷ್ಟನೆ ನಿಡಿದ್ದಾರೆ.

 ಸುಮಲತಾ ಅವರಿಗೆ ನಟ ದರ್ಶನ್ ಮತ್ತು ಯಶ್​ ಬೆಂಬಲ ಸೂಚಿಸಿ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡು ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆ ಕಾರ್ಯಕರ್ತರು ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದರು.  

ಸುಮಲತಾ ಬೆಂಬಲಿಸಿದ ನಟ ಯಶ್, ದರ್ಶನ್ ಗೆ ಹೊಸ ಟೆನ್ಶನ್!

ಈ ದೂರಿಗೆ ಪ್ರತಿಕ್ರಿಯಿಸಿದ ಮುಖ್ಯಚುನಾವಣಾಧಿಕಾರಿ ಸಂಜೀವ್ ಕುಮಾರ್, ಕಾಯ್ದೆ ಸ್ಪಷ್ಟವಾಗಿ ಹೇಳುತ್ತೆ ಯಾರು ಅಭ್ಯರ್ಥಿ ಇದ್ದಾರೆ ಅವರ ಚಿತ್ರಗಳು ಯಾವುದೇ ದೂರದರ್ಶನ ಹಾಗೂ ಆಲ್ ಇಂಡಿಯ ರೇಡಿಯೋದಲ್ಲಿ ಮಾತ್ರ ಪ್ರಸಾರವಾಗುವಂತಿಲ್ಲ.

ಬೇರೆ ಖಾಸಗಿ ಚಾನಲ್ ಹಾಗೂ ಚಿತ್ರಮಂದಿರಗಳಲ್ಲಿ ಪ್ರಸಾರ ಮಾಡ ಬಹುದು ಅಭ್ಯರ್ಥಿಯ ಆತ್ಮ ಚರಿತ್ರೆಯ ಬಗ್ಗೆ ಸಿನಿಮಾ ಮಾಡಿದ್ರೆ ಮಾತ್ರ ಅದನ್ನು ಪ್ರಸಾರ ಮಾಡುವಂತಿಲ್ಲ. ಅದನ್ನು ಹೊರತು ಪಡಿಸಿದ್ರೆ ಉಳಿದ ಚಿತ್ರಗಳನ್ನು ಕಲೆ ಎಂದು ಪರಿಗಣಿಸ್ಪಡುತ್ತದೆ ಎಂದು ಹೇಳಿದರು.. 

click me!