ಕರ್ನಾಟಕದ ಐಎಎಸ್‌ ಅಧಿಕಾರಿ ಸಸ್ಪೆಂಡ್

Published : Apr 18, 2019, 08:13 AM IST
ಕರ್ನಾಟಕದ ಐಎಎಸ್‌ ಅಧಿಕಾರಿ ಸಸ್ಪೆಂಡ್

ಸಾರಾಂಶ

ಲೋಕಸಭಾ ಚುನಾವಣೆಯ ಈ ಸಂದರ್ಭದಲ್ಲಿ ಐಎಎಸ್ ಅಧಿಕಾರಿಯೋರ್ವರನ್ನು ಸಸ್ಪೆಂಡ್ ಮಾಡಲಾಗಿದೆ. 

ಭುವನೇಶ್ವರ: ಒಡಿಶಾದಲ್ಲಿ ಲೋಕಸಭಾ ಚುನಾವಣಾ ವೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಕರ್ನಾಟಕ ಮೂಲದ ಐಎಎಸ್‌ ಅಧಿಕಾರಿ ಮೊಹಮ್ಮದ್‌ ಮೊಹ್ಸೀನ್‌ ಅವರನ್ನು ಕರ್ತವ್ಯ ಲೋಪದ ಆಧಾರದಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.

ಸಂಬಾಲ್‌ಪುರ ಜಿಲ್ಲೆಯಲ್ಲಿ ವೀಕ್ಷಕರಾಗಿ ನೇಮಕಗೊಂಡಿದ್ದ ಮೊಹ್ಸೀನ್‌ ಅವರ ನೇತೃತ್ವದ ತಂಡವು, ಏ.16ರಂದು ಎಸ್‌ಪಿಜಿ ಭದ್ರತೆ ಹೊಂದಿದ್ದ ರಾಜಕೀಯ ನಾಯಕರೊಬ್ಬರ ಹೆಲಿಕಾಪ್ಟರ್‌ ಅನ್ನು ತಪಾಸಣೆಗೆ ಗುರಿಪಡಿಸಿದ್ದರು. ಇದು ಎಸ್‌ಪಿಜಿ ಭದ್ರತೆ ಹೊಂದಿದ್ದ ನಾಯಕರಿಗೆ ನೀಡಿದ ಭದ್ರತಾ ಮಾರ್ಗಸೂಚಿಗಳಿಗೆ ವಿರುದ್ಧವಾಗಿತ್ತು. 

ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ಅಧಿಕಾರಿಗಳು, ಜಿಲ್ಲಾಧಿಕಾರಿಗಳು ಘಟನೆ ಕುರಿತು ಚುನಾವಣಾ ಆಯೋಗಕ್ಕೆ ವರದಿ ನೀಡಿದ್ದರು. ಈ ವರದಿ ಆಧರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಮೊಹ್ಸೀನ್‌ ಅವರನ್ನು ಅಮಾನತು ಮಾಡಲಾಗಿದೆ ಎಂದು ಆಯೋಗ ಪ್ರಕಟಣೆ ಹೊರಡಿಸಿದೆ.

PREV
click me!

Recommended Stories

ಒಬ್ಬ ನಟ, ಒಂದೇ ಹೆಸರಿನ ಚಿತ್ರಗಳಲ್ಲಿ ಮೂರು ಬಾರಿ ನಟಿಸಿದ್ದಾರೆ ಯಾರು ಈ ನಟ?
ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!