ಬಿಜೆಪಿಯಿಂದ ಖರೀದಿ ಪ್ರಯತ್ನ: ಪತ್ರಕರ್ತರ ಸಂಘ ಆರೋಪ!

Published : May 05, 2019, 11:16 AM ISTUpdated : May 05, 2019, 11:19 AM IST
ಬಿಜೆಪಿಯಿಂದ ಖರೀದಿ ಪ್ರಯತ್ನ: ಪತ್ರಕರ್ತರ ಸಂಘ ಆರೋಪ!

ಸಾರಾಂಶ

ಬಿಜೆಪಿ ನಮ್ಮನ್ನು ಖರೀದಿಸಲು ಪ್ರಯತ್ನಿಸುತ್ತಿದೆ ಎಂದ ಪತ್ರಕರ್ತರ ಸಂಘ| ಪಕ್ಷದ ಪರ ವರದಿ ಮಾಡಲು ಹಣದ ಆಮೀಷ| ಲೆಹ್ ಪತ್ರಕರ್ತರ ಸಂಘದಿಂದ ಚುನಾವಣಾ ಆಯೋಗಕ್ಕೆ ದೂರು| ಬಿಜೆಪಿ ರಾಜ್ಯಾಧ್ಯಕ್ಷ ರವೀಂದ್ರ ರಾಣಾ ವಿರುದ್ಧ ನೇರ ಆರೋಪ| ತನಿಖೆಗೆ ಆದೇಶಿಸಿದ ಚುನಾವಣಾ ಆಯೋಗ|

ಲೆಹ್(ಮೇ.05): ಲೋಕಸಭೆ ಚುನವಣೆಯಲ್ಲಿ ಪಕ್ಷದ ಪರ ವರದಿ ಮಾಡುವಂತೆ ಬಿಜೆಪಿ ನಮಗೆ ಆಮೀಷವೊಡ್ಡುತ್ತಿದೆ ಎಂದು ಲೆಹ್ ಪತ್ರಕರ್ತರ ಸಂಘ ಆರೋಪಿಸಿದೆ.

ಈ ಕುರಿತು ಚುನವಣಾ ಆಯೋಗಕ್ಕೆ ಲಿಖಿತ ದೂರು ನೀಡಿರುವ ಪತ್ರಕರ್ತರ ಸಂಘ, ನೇರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ರವೀಂದ್ರ ರಾಣಾ ಅವರ ಮೇಲೆ ಆರೋಪ ಹೊರಿಸಿದೆ.

ಇಲ್ಲಿನ ಹೊಟೇಲ್ ಸಿಂಗೆ ಪ್ಯಾಲೆಸ್ ನಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿ ವೇಳೆ ರವೀಂದ್ರ ರಾಣಾ ನಮ್ಮನ್ನು ಖರೀದಿಸಲು ಯತ್ನಿಸಿದರು ಎಂದು ಪತ್ರಕರ್ತರ ಸಂಘ ದೂರಿನಲ್ಲಿ ಉಲ್ಲೇಖಿಸಿದೆ.

ಇನ್ನು ಲೆಹ್ ಪತ್ರಕರ್ತರ ಸಂಘದ ದೂರು ಸ್ವೀಕರಿಸಿರುವ ಚುನವಣಾ ಆಯೋಗ, ತನಿಖೆಗೆ ಆದೇಶ ನೀಡಿದೆ.

ಲೋಕಸಭೆ ಚುನಾವಣೆಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

PREV
click me!

Recommended Stories

ಒಬ್ಬ ನಟ, ಒಂದೇ ಹೆಸರಿನ ಚಿತ್ರಗಳಲ್ಲಿ ಮೂರು ಬಾರಿ ನಟಿಸಿದ್ದಾರೆ ಯಾರು ಈ ನಟ?
ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!