‘ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿ ಗೆಲುವು ಖಚಿತ : ಈ ಬಗ್ಗೆ ಸಂಶಯವಿಲ್ಲ’

By Web DeskFirst Published Apr 7, 2019, 11:25 AM IST
Highlights

ಲೋಕಭಾ ಚುನಾವಣೆ ಸಮೀಪಿಸುತ್ತಿದ್ದು, ಇದೇ ವೇಳೆ ಅಭ್ಯರ್ಥಿಗಳ ಪ್ರಚಾರ ಕಾರ್ಯ ಜೋರಾಗಿದೆ. ಇದೇ ಸಂದರ್ಭದಲ್ಲಿ ಸಿಎಂ ಕೂಡ ಬಿರುಸಿನ  ಪ್ರಚಾರದಲ್ಲಿ ತೊಡಗಿದ್ದಾರೆ. ಇದೀಗ ಮಂಗಳೂರಿನಲ್ಲಿ ಮೈತ್ರಿ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಇಳಿದಿದ್ದಾರೆ.

ಮಂಗಳೂರು : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಿಎಂ ಕುಮಾರ ಸ್ವಾಮಿ ಮೈತ್ರಿ ಅಭ್ಯರ್ಥಿಗಳ ಪರ ಮಂಗಳೂರಿನಲ್ಲಿ ಪ್ರಚಾರ ಮಾಡಲಿದ್ದಾರೆ. 

ದಕ್ಷಿಣ ಕನ್ನಡ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಮಿಥುನ್ ರೈ ಹಾಗೂ ಉಡುಪಿ-ಚಿಕ್ಕಮಗಳೂರು ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಪರ ಪ್ರಚಾರಕ್ಕೆ ತೆರಳಿದ್ದು, ಈ ವೇಳೆ ಮಂಡ್ಯ ಕ್ಷೇತ್ರದ ಚುನಾವಣಾ ಕಾವಿನ ಬಗ್ಗೆ ಮಾತನಾಡಿದರು. 

ಮಂಡ್ಯ ಚುನಾವಣೆಯ ಬಗ್ಗೆ ಈಗಲೇ ನಾನೇನು ಮಾತನಾಡುವುದಲ್ಲ.  ಮೇ 23 ಕ್ಕೆ ಮಾತನಾಡುತ್ತೇನೆ. ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿ ಗೆಲುವಿನ ಬಗ್ಗೆ ತಮಗೆ ಯಾವುದೇ ರೀತಿಯ ಸಂಶಯವಿಲ್ಲ ಎಂದು ಹೇಳಿದ್ದಾರೆ. 

ಅಲ್ಲದೇ ಮಾಧ್ಯಮಗಳೇ ಈ ಬಗ್ಗೆ ಸಂಶಯಿಸುತ್ತಿದ್ದು, ಮಂಡ್ಯ ಜನರ ಮುಂದೆ ಇದ್ಯಾವುದು ನಡೆಯುದಿಲ್ಲ ಎಂದು ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಪುತ್ರನ ಗೆಲುವಿನ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

click me!