ಮತಗಟ್ಟೆಯಲ್ಲಿಯೇ ಚುನಾವಣಾ ಅಧಿಕಾರಿ ಸಾವು

By Web DeskFirst Published Apr 18, 2019, 11:04 AM IST
Highlights

ಲೋಕಸಭಾ ಚುನಾವಣೆ ಸಮರ ರಾಜ್ಯದಲ್ಲಿ ಆರಂಭವಾಗಿದೆ. ಇತ್ತ ಚುನಾವಣಾ ಬೂತ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಧಿಕಾರಿಯೋರ್ವರು ಅಲ್ಲಿಯೇ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. 

ಚಾಮರಾಜನಗರ : ಲೋಕಸಭಾ ಮಹಾ ಸಮರ ಆರಂಭವಾಗಿದೆ. ರಾಜ್ಯದಲ್ಲಿ 14 ಕ್ಷೇತ್ರಗಳಲ್ಲಿ ಚುನಾವಣೆ ಬಿರುಸಿನಿಂದ ನಡೆಯುತ್ತಿದೆ. ಚಾಮರಾಜನಗರದಲ್ಲಿ ಚುನಾವಣಾ ಕಾರ್ಯಕ್ಕೆ ಆಗಮಿಸಿದ್ದ ಅಧಿಕಾರಿಯೋರ್ವರು ಮತಗಟ್ಟೆಯಲ್ಲಿಯೇ ಮೃತಪಟ್ಟಿದ್ದಾರೆ. 

"

ಷರೀಫ್ ಸರ್ಕಲ್ ಮತಗಟ್ಟೆಯಲ್ಲಿ ಹನೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಶಾಂತಮೂರ್ತಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಚಾಮರಾಜನಗರದ ಷರೀಫ್ ಸರ್ಕಲ್ ಮತಗಟ್ಟೆ ಸಂಖ್ಯೆ 48ರಲ್ಲಿ ಈ ದುರ್ಘಟನೆ ಸಂಭವಿಸಿದೆ. ಕರ್ತವ್ಯ ನಿರ್ವಹಣೆ ವೇಳೆ ಹೃದಯಾಘಾತವಾಗಿ ಮೃತಪಟ್ಟಿದ್ದು, ಸ್ಥಳಕ್ಕೆ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಭೇಟಿ ನೀಡಿದ್ದಾರೆ. 

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

click me!