ಮಂಡ್ಯ ಜಿಲ್ಲಾಧಿಕಾರಿ ಕಚೇರಿಗೆ ಬೀಗ

By Web DeskFirst Published Mar 31, 2019, 1:38 PM IST
Highlights

ಸುಮಲತಾ ಅಂಬರೀಶ್ ಚುನಾವಣಾ ಏಜೆಂಟ್ ಮದನ್ ವಿಚಾರಣೆ ನಡೆಯುತ್ತಿದ್ದು, ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಬೀಗ ಜಡಿಯಲಾಗಿದೆ.

ಮಂಡ್ಯ : ಮಂಡ್ಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುಮಲತಾ ಅಂಬರೀಶ್ ಅವರ ಚುನಾವಣೆ ಏಜೆಂಟ್ ಮದನ್ ಅವರ ವಿಚಾರಣೆ ನಡೆಯುತ್ತಿದ್ದು, ಈ ನಿಟ್ಟಿನಲ್ಲಿ ಕಚೇರಿಗೆ ಬೀಗ ಹಾಕಲಾಗಿದೆ 

ಕಚೇರಿ ಸಿಬ್ಬಂದಿ ಹಾಗೂ ಕೆಲ ವ್ಯಕ್ತಿಗಳಿಗಷ್ಟೇ ಒಳಕ್ಕೆ ಪ್ರವೇಶ ನೀಡಿದ್ದು, ಮಾಧ್ಯಮಗಳಿಗೂ ನಿರ್ಬಂಧ ಹೇರಲಾಗಿದೆ.  ಗೇಟ್ ಗೆ ಬೀಗ ಜಡಿದು ವಿಚಾರಣೆ ನಡೆಸುತ್ತಿದ್ದು,  ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಜೊತೆ ಮಾತುಕತೆ ನಡೆಯುತ್ತಿದೆ.  

ನಿಖಿಲ್ ನಾಮಪತ್ರದ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ ಮದನ್ ಪ್ರಾದೇಶಿಕ ಆಯುಕ್ತರಿಗೆ ವಿವರಣೆ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಚೇರಿಗೆ ಬೀಗ ಹಾಕಲಾಗಿದೆ. 

ಈ ಹಿಂದೆ ನಿಖಿಲ್ ನಾಮಪತ್ರದಲ್ಲಿ ಗೊಂದಲವಿರುವ ಬಗ್ಗೆ ಚರ್ಚೆಯಾಗಿದ್ದು, ಬಳಿಕ ಈ ಪರಿಶೀಲಿಸಿದ್ದು, ನಾಮಪತ್ರ ಸಿಂಧುವಾಗಿತ್ತು.

ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 543 ಲೋಕಸಭಾ ಕ್ಷೇತ್ರಗಳಿಗೆ ನಡೆ

click me!