ಶಾಮನೂರು ಕುಟುಂಬಕ್ಕೆ ಟಿಕೆಟ್ ಬೇಕಿಲ್ಲ, ದಾವಣಗೆರೆಯಿಂದ ಅಚ್ಚರಿ ‘ ಕೈ’ ಅಭ್ಯರ್ಥಿ!

Published : Mar 11, 2019, 05:57 PM ISTUpdated : Mar 11, 2019, 06:08 PM IST
ಶಾಮನೂರು ಕುಟುಂಬಕ್ಕೆ ಟಿಕೆಟ್ ಬೇಕಿಲ್ಲ, ದಾವಣಗೆರೆಯಿಂದ ಅಚ್ಚರಿ ‘ ಕೈ’ ಅಭ್ಯರ್ಥಿ!

ಸಾರಾಂಶ

ಒಂದು ಕಡೆ ಮಂಡ್ಯ ಮತ್ತು ಮೈಸೂರು ಲೋಕ ಕ್ಷೇತ್ರಗಳು ಕಾಂಗ್ರೆಸ್ಸಿಗೆ ತಲೆನೋವಾಗಿದ್ದರೆ ಅದಕ್ಕೆ ಇದೀಗ ಹೊಸ ಸೇರ್ಪಡೆ ದಾವಣಗೆರೆ. 

ದಾವಣಗೆರೆ[ಮಾ. 11]  ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಗೆ  ಹೈಕಮಾಂಡ್ ಕಸರತ್ತು ನಡೆಸಿದೆ. ಶಾಮನೂರು ಶಿವಶಂಕರಪ್ಪ ಅವರ ಮಗ ಎಸ್. ಎಸ್.ಮಲ್ಲಿಕಾರ್ಜುನ್ ನಡೆ ಕಾಂಗ್ರೆಸ್ ಹೈಕಮಾಂಡಿಗೆ ತಲೆನೋವಾಗಿ ಪರಿಣಮಿಸಿದೆ.

ಹೈಕಮಾಂಡ್ ಟಿಕೆಟ್ ನೀಡಿದ್ರು  ಮಲ್ಲಿಕಾರ್ಜುನ್ ಸ್ಪರ್ಧೆ ಮಾಡಲು ಒಪ್ಪಿಲ್ಲ. ಹಾಗಾಗಿ ಮತ್ತೊಬ್ಬ ಸೂಕ್ತ ಅಭ್ಯರ್ಥಿ ಹುಡುಕಾಟ ಕಾಂಗ್ರೆಸ್ ಗೆ ಸವಾಲಾಗಿದೆ. ಹಿರಿಯ ನಾಯಕ ಶಾಮನೂರು ತಮ್ಮ ನಿಗೂಢ ನಡೆಯನ್ನು ಬಿಟ್ಟುಕೊಟ್ಟಿಲ್ಲ.

ಊಟಕ್ಕೆ ಕರೆದು ಎಂಬಿಪಾ ಜಾಡಿಸಿದ ಶಾಮನೂರು ಪುತ್ರ!

ಒಮ್ಮೆ ನಾನೇ ಅಭ್ಯರ್ಥಿ ಎಂದು ಹೇಳುವ ಶಾಮನೂರು ಇನ್ನೊಮ್ಮೆ ವಯಸ್ಸಿನ ಕಾರಣಕ್ಕೆ ಹೈ ಕಮಾಂಡ್ ಒಪ್ಪುವುದಿಲ್ಲ ಎಂಬ ಹೇಳಿಕೆ ನೀಡುತ್ತಿದ್ದಾರೆ. ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ದಾವಣಗೆರೆ ಅಭ್ಯರ್ಥಿ ಫೈನಲ್ ಆಗಲಿದ್ದು  ಶಾಮನೂರು ಕುಟುಂಬ ನಿರಾಕರಿಸಿದ್ರೆ ಹೆಚ್.ಎಂ.ರೇವಣ್ಣ ಅವರನ್ನು ಕಣಕ್ಕಿಳಿಸಲು ಚಿಂತನೆ ನಡೆಸಲಾಗಿದೆ ಎನ್ನಲಾಗಿದೆ.

PREV
click me!

Recommended Stories

ಒಬ್ಬ ನಟ, ಒಂದೇ ಹೆಸರಿನ ಚಿತ್ರಗಳಲ್ಲಿ ಮೂರು ಬಾರಿ ನಟಿಸಿದ್ದಾರೆ ಯಾರು ಈ ನಟ?
ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!