ನನ್ನ ಹೆಸರು ಹೇಳಿ ಸುಮಲತಾಗೆ ಮತ ಕೇಳಿದರೆ ಮಂಗಳಾರತಿ ಎತ್ತಿ

Published : Apr 13, 2019, 10:57 AM ISTUpdated : Apr 13, 2019, 11:34 AM IST
ನನ್ನ ಹೆಸರು ಹೇಳಿ ಸುಮಲತಾಗೆ ಮತ ಕೇಳಿದರೆ ಮಂಗಳಾರತಿ ಎತ್ತಿ

ಸಾರಾಂಶ

ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಇದರಿಂದ ಪ್ರಚಾರ ಕಾರ್ಯ ಜೋರಾಗಿ ನಡೆಯುತ್ತಿದೆ. ಇತ್ತ ಸಿದ್ದರಾಮಯ್ಯ ಸುಮಲತಾಗೆ ನನ್ನ ಬೆಂಬಲ  ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. 

ನಾಗಮಂಗಲ:  ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸುಮಲತಾ ಅಂಬರೀಷ್‌ ಪರವಾಗಿ ಮತ ಹಾಕುವಂತೆ ಸೂಚಿಸಿಲ್ಲ. ನಾನು ಸೂಚಿಸಿದ್ದೇನೆ ಎಂದು ಯಾರಾದರೂ ನನ್ನ ಹೆಸರು ಹೇಳಿಕೊಂಡು ಬಂದರೆ ಮುಖಕ್ಕೆ ಮಂಗಳಾರತಿ ಮಾಡಿ ಕಳುಹಿಸಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿದರು.

ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಪರವಾಗಿ ನಡೆದ ಬೃಹತ್‌ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ನಾನೇಕೆ ಪಕ್ಷೇತರ ಅಭ್ಯರ್ಥಿ ಪರ ಮತ ಹಾಕಿ ಅಂತ ಕೇಳುತ್ತೇನೆ ಎಂದು ಪ್ರಶ್ನೆ ಮಾಡಿದ ಸಿದ್ದರಾಮಯ್ಯ, ಯಾವುದೇ ಅಪಪ್ರಚಾರ, ಸುಳ್ಳುಗಳಿಗೆ ಬೆಲೆ ಕೊಡಬೇಡಿ. ನನ್ನ ಬೆಂಬಲ ಯಾವತ್ತಿಗೂ ಮೈತ್ರಿ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿಗೆ. ಅವರನ್ನು ಗೆಲ್ಲಿಸುವುದೊಂದೇ ಗುರಿ ಎಂದು ಸಾರಿ ಹೇಳಿದರು.

ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್‌ಗೆ ಕೋಮುವಾದಿ ಬಿಜೆಪಿ ಬೆಂಬಲ ಘೋಷಿಸಿದೆ. ದೇಶದ ಹಿತದೃಷ್ಟಿ, ಪ್ರಜಾಪ್ರಭುತ್ವ ಉಳಿವು ಹಾಗೂ ಸಂವಿಧಾನದ ರಕ್ಷಣೆಗಾಗಿ ಕೋಮುವಾದಿ ಬಿಜೆಪಿ ಪಕ್ಷವನ್ನು ಅಧಿಕಾರದಿಂದ ದೂರವಿಡಬೇಕು. ಮೈತ್ರಿ ಅಭ್ಯರ್ಥಿ ನಿಖಿಲ್‌ ಅವರನ್ನು ಬೆಂಬಲಿಸಬೇಕು ಎಂದು ಎಐಸಿಸಿ ವರಿಷ್ಠರಾದಿಯಾಗಿ ಎಲ್ಲ ನಾಯಕರೂ ತೀರ್ಮಾನಿಸಿದ್ದಾರೆ. ಹೀಗಾಗಿ ನನ್ನ ನಿಷ್ಠೆ ಯಾವತ್ತಿದ್ದರೂ ಮೈತ್ರಿ ಅಭ್ಯರ್ಥಿ ನಿಖಿಲ್‌ ಗೆಲುವಿನ ಕಡೆಗೆ ಎಂದರು.

ಸುಮ ಪರೋಕ್ಷ ಬಿಜೆಪಿ ಅಭ್ಯರ್ಥಿಯೇ?

ಮಂಡ್ಯ ಕ್ಷೇತ್ರದಲ್ಲಿ ಉದ್ದೇಶಪೂರ್ವಕವಾಗಿಯೇ ಬಿಜೆಪಿ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಪಕ್ಷೇತರ ಅಭ್ಯರ್ಥಿ ಸುಮಲತಾಗೆ ಬೆಂಬಲ ಸೂಚಿಸಿದೆ. ಮೈಸೂರಿಗೆ ಮೋದಿ ಭೇಟಿ ನೀಡಿದ್ದ ವೇಳೆ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಗೆ ಎಲ್ಲರೂ ಬೆಂಬಲ ಕೊಡಿ ಎಂದು ಹೇಳಿಕೆ ನೀಡಿದ್ದಾರೆ. ಇದರ ಅರ್ಥ ಸುಮಲತಾ ಪಕ್ಷೇತರ ಅಭ್ಯರ್ಥಿಯಾಗಿದ್ದರೂ ಸಹ ಒಂದು ರೀತಿಯಲ್ಲಿ ಬಿಜೆಪಿ ಅಭ್ಯರ್ಥಿ ಎಂದು ತಾವೆಲ್ಲರೂ ತಿಳಿಯಬೇಕು ಎಂದು ಹೇಳಿದರು.

ಕಾವೇರಿಗಾಗಿ ಹೋರಾಟಕ್ಕೆ ಬಂದಿದ್ರಾ?

ದೇವೇಗೌಡರು ಕಾವೇರಿ ನೀರಿಗಾಗಿ ಆಮರಣಾಂತ ಉಪವಾಸ ನಡೆಸಿದರು. ಕೇಂದ್ರ ಸರ್ಕಾರದಿಂದ ಭರವಸೆ ಬಂದ ಮೇಲೆ ನಾನೇ ಎಳನೀರು ಕುಡಿಸಿ ಉಪವಾಸವನ್ನು ಕೈಬಿಡಿಸಿದ್ದೆ. ಆ ಸಂದರ್ಭದಲ್ಲಿ ಈ ಪಕ್ಷೇತರ ಅಭ್ಯರ್ಥಿ ಹೋರಾಟಕ್ಕೆ ಬಂದಿದ್ದಾರಾ ಎಂದು ಸುಮಲತಾ ಅವರಿಗೆ ಟಾಂಗ್‌ ನೀಡಿದರು.

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಮತದಾನ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ, ಕರ್ನಾಟಕದಲ್ಲಿ 28.

PREV
click me!

Recommended Stories

ಒಬ್ಬ ನಟ, ಒಂದೇ ಹೆಸರಿನ ಚಿತ್ರಗಳಲ್ಲಿ ಮೂರು ಬಾರಿ ನಟಿಸಿದ್ದಾರೆ ಯಾರು ಈ ನಟ?
ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!