ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಇದೇ ವೇಳೆ ಚುನಾವಣಾ ಕಣಗಳು ಸಾಕಷ್ಟು ರಂಗೇರುತ್ತಿವೆ. ಇತ್ತ ಮಂಡ್ಯದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ಎಂ. ಸುಮಲತಾ ನಾಪತ್ತೆಯಾಗಿದ್ದಾರೆ.
ಮಂಡ್ಯ: ಲೋಕಸಭಾ ಚುನಾವಣೆಗೆ ಮಂಡ್ಯ ಕ್ಷೇತ್ರದಿಂದ ಕಣಕ್ಕೆ ಇಳಿದಿದ್ದ ಸುಮಲತಾ ಎಂ. ಎಂಬ ಅಭ್ಯರ್ಥಿ ನಾಪತ್ತೆಯಾಗಿದ್ದಾರೆ.
ಗೊರವಿ ಗ್ರಾಮದವರಾದ ಇವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿ ಸಿದ್ದು, ಇವರ ಪತಿ ಇತ್ತೀಚೆಗೆ ನಾಮಪತ್ರ ವಾಪಸ್ ತೆಗೆಯುತ್ತೇನೆ ಎಂದು ಹೇಳಿದ್ದರು. ಆದರೆ, ಅಂದಿನಿಂದ ಸುಮಲತಾ ನಾಪತ್ತೆಯಾಗಿದ್ದಾರೆ.
ಕಳೆದ 3 ದಿನಗಳಿಂದ ಊರಲ್ಲಿ ಇಲ್ಲ ಎಂದು ಗ್ರಾಮಸ್ಥರು ಹೇಳಿದ್ದಾರೆ.
ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...