ಚುನಾವಣಾ ಭಾಷಣಗಳಿಂದ ಅಭ್ಯರ್ಥಿ ಗೆಲುವು ಸಾಧ್ಯವಿಲ್ಲ ಎಂದ ಪ್ರಧಾನಿ| 'ಮತದಾನ ಮಾಡಿದಾಗ ಮಾತ್ರ ಅಭ್ಯರ್ಥಿಯ ಗೆಲುವು ಸಾಧ್ಯ'| ತಪ್ಪದೇ ಮತದಾನ ಮಾಡುವಂತೆ ಮತದಾರರಿಗೆ ಕರೆ ಕೊಟ್ಟ ಪ್ರಧಾನಿ| ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮೋದಿ ನಾಮಪತ್ರ| ಪರಜಾಪ್ರಭುತ್ವದ ಗೆಲುವಿಗೆ ಮತದಾನ ಮಾಡುವಂತೆ ಕರೆ|
ವಾರಾಣಸಿ(ಏ.26): ಚುನಾವಣಾ ಪ್ರಚಾರ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ಮಾತ್ರಕ್ಕೆ ಗೆಲುವು ಸಾಧ್ಯವಿಲ್ಲ. ಮತದಾನದ ದಿನ ಹೋಗಿ ಮತದಾನ ಮಾಡಿದರೆ ಮಾತ್ರ ಗೆಲುವು ಸಾಧ್ಯ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ವಾರಣಾಸಿ ಲೋಕಸಭಾ ಕ್ಷೇತ್ರದಿಂದ ನಾಪಪತ್ರ ಸಲ್ಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರಧಾನಿ ಮೋದಿ, ಕೇವಲ ಚುನಾವಣಾ ಭಾಷಣ, ಪ್ರಚಾರಗಳಿಂದ ಯಾವುದೇ ಅಭ್ಯರ್ಥಿ ಗೆಲುವು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.
ಮೋದಿ ಗೆಲ್ಲುತ್ತಾರೆ ಎಂಬ ಅಸಡ್ಡೆ ಭಾವನೆ ಬೇಡ ಎಂದ ಪ್ರಧಾನಿ, ಮತದಾನ ದಿನದಂದು ತಪ್ಪದೇ ಮತ ಹಾಕಿದಾಗ ಮಾತ್ರ ನಿಮ್ಮ ಅಭ್ಯರ್ಥಿ ಗೆಲ್ಲಲು ಸಾಧ್ಯ ಎಂದು ನುಡಿದರು.
: Prime Minister Narendra Modi speaks to media after filing nomination from Varanasi. pic.twitter.com/ObH3fbwUss
— ANI UP (@ANINewsUP)ಮತದಾನ ಮಾಡಿ ಪ್ರಜಾಪ್ರಭುತ್ವವನ್ನು ಬಲಪಡಿಸಿ ಎಂದು ಮತದಾರರಿಗೆ ಕರೆ ನೀಡಿದ ಪ್ರಧಾನಿ, ಯಾರು ಗೆಲ್ಲುತ್ತಾರೆ ಎಂಬುದು ಮುಖ್ಯವಲ್ಲ ಪ್ರಜಾಪ್ರಭುತ್ವ ಗೆಲ್ಲುವುದು ಮುಖ್ಯ ಎಂದು ಮಾರ್ಮಿಕವಾಗಿ ನುಡಿದರು.
ಇನ್ನು ಮುಂಬರುವ ಮೇ 19ರಂದು ವಾರಣಾಸಿಯಲ್ಲಿ ಮತದಾನ ನಡೆಯಲಿದ್ದು, ಮೇ 23ರಂದು ಫಲಿತಾಂಶ ಪ್ರಕಟವಾಗಲಿದೆ.