ವಾರಾಣಸಿ ಸ್ಪರ್ಧೆ ಕುರಿತು ಕೊನೆಗೂ ಮೌನ ಮುರಿದ ಪ್ರಿಯಾಂಕಾ ಗಾಂಧಿ!

By Web DeskFirst Published Apr 22, 2019, 8:36 AM IST
Highlights

ಪ್ರಧಾನಿ ಮೋದಿ ಕ್ಷೇತ್ರ ವಾರಾಣಸಿಯಲ್ಲಿ ಕಾಂಗ್ರೆಸ್ ಅಭ್‌ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸುತ್ತಾರೆಂಬ ಸುದ್ದಿ ಸದ್ದು ಮಾಡಿತ್ತು. ಹೀಗಿದ್ದರೂ ಪ್ರಿಯಾಂಕಾ ಗಾಂಧಿಯಾಗಲಿ, ರಾಹುಲ್ ಗಾಂಧಿಯಾಗಲಿ ಅಥವಾ ಕಾಂಗ್ರೆಸ್ ಪಕ್ಷ ಈ ಮಾಹಿತಿಯನ್ನು ಖಚಿತಪಡಿಸಿರಲಿಲ್ಲ. ಆದರೀಗ ಈ ಕುರಿತಾಗಿ ಖುದ್ದು ಪ್ರಿಯಾಂಕಾ ಮೌನ ಮುರಿದಿದ್ದಾರೆ. ಹಾಗಾದ್ರೆ ಅವರು ವಾರಾಣಸಿ ಸ್ಪರ್ಧೆ ಕುರಿತಾಗಿ ಹೇಳಿದ್ದೇನು? ಇಲ್ಲಿದೆ ವಿವರ

ನವದೆಹಲಿ[ಏ.22]: ಉತ್ತರಪ್ರದೇಶದ ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತಾವು ಸ್ಪರ್ಧಿಸುವ ಕುರಿತಾದ ರಹಸ್ಯವನ್ನು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ವಾದ್ರಾ ಹಾಗೆಯೇ ಉಳಿಸಿಕೊಂಡಿದ್ದಾರೆ. ಆದರೆ ಪಕ್ಷದ ಅಧ್ಯಕ್ಷರು ಸೂಚಿಸಿದರೆ ಕಣಕ್ಕಿಳಿಯಲು ತಾವು ಸಿದ್ಧ ಎಂದು ಘೋಷಿಸಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳಿಗೂ ಮಹತ್ವದ್ದಾಗಿರುವ ಉತ್ತರಪ್ರದೇದಲ್ಲಿ ಮೋದಿ ವಿರುದ್ಧ ಪ್ರಿಯಾಂಕಾ ಸ್ಪರ್ಧಿಸಿದರೆ ಅದು ಕಾಂಗ್ರೆಸ್ಸಿಗರ ಉತ್ಸಾಹವನ್ನು ಮತ್ತಷ್ಟುಹೆಚ್ಚಿಸಲಿದೆ. ಇದೇ ಕಾರಣಕ್ಕಾಗಿ ಅವರನ್ನು ವಾರಾಣಸಿಯಿಂದ ಕಣಕ್ಕೆ ಇಳಿಸಲು ಕಾಂಗ್ರೆಸ್‌ ನಾಯಕರು ಗಂಭೀರವಾಗಿ ಚಿಂತನೆ ನಡೆಸಿದ್ದಾರೆ ಎಂದು ವರದಿಯಾಗಿತ್ತು.

ಅದರ ಬೆನ್ನಲ್ಲೇ ಭಾನುವಾರ ಸುದ್ದಿಗಾರರು, ವಾರಾಣಸಿಯಲ್ಲಿ ಸ್ಪರ್ಧಿಸುವ ಕುರಿತು ಕೇಳಿದ ಪ್ರಶ್ನೆಗೆ ‘ಒಂದು ವೇಳೆ ಕಾಂಗ್ರೆಸ್‌ ಅಧ್ಯಕ್ಷರು ಸೂಚಿಸಿದರೆ, ಖಂಡಿತವಾಗಿಯೂ ಸಂತೋಷದಿಂದ ಸ್ಪರ್ಧಿಸುವೆ’ ಎಂದು ಹೇಳಿದ್ದಾರೆ.

ಇತ್ತೀಚೆಗೆ ಇದೇ ಪ್ರಶ್ನೆಯನ್ನು ರಾಹುಲ್‌ಗೆ ಕೇಳಿದಾಗ, ಅವರೂ ನೇರವಾದ ಉತ್ತರ ನೀಡದೇ ಜಾರಿಕೊಂಡಿದ್ದರು.

click me!