'ಫ್ರೆಂಡ್, ಫಿಲಾಸಫರ್, ಗೈಡ್, ಅಲ್ಟಿಮೇಟ್ ಗುರು'ವಿಗೆ ಟಿಕೆಟ್ ಇಲ್ಲ: ಶತ್ರುಘ್ನ ಯಾರನ್ನೂ ಬಿಡಲಿಲ್ಲ!

By Web DeskFirst Published Mar 24, 2019, 12:34 PM IST
Highlights

ಬಿಜೆಪಿ ನಾಯಕತ್ವದ ಮೇಲೆ ಹರಿಹಾಯ್ದ ಶತ್ರುಘ್ನ ಸಿನ್ಹಾ| ಬಂಡಾಯ ನಾಯಕರಾಗಿ ಮಾರ್ಪಟ್ಟ ಶತ್ರುಘ್ನ ಸಿನ್ಹಾ| ಎಲ್‌ಕೆ ಅಡ್ವಾಣಿಗೆ ಟಿಕೆಟ್ ನಿರಾಕರಿಸಿದ್ದಕ್ಕೆ ಶತ್ರುಘ್ನ ಕೆಂಡಾಮಂಟಲ| 'ಅಡ್ವಾಣಿ ಅವರನ್ನು ಉದ್ದೇಶಪೂರ್ವಕವಾಗಿಯೇ ಅಭ್ಯರ್ಥಿಗಳ ಪಟ್ಟಿಯಿಂದ ತೆಗೆದು ಹಾಕಲಾಗಿದೆ'| ಬಿಜೆಪಿ ನಡೆ ಅತ್ಯಂತ ಕಳವಳಕಾರಿ ಎಂದ ಶತ್ರುಘ್ನ ಸಿನ್ಹಾ|

ನವದೆಹಲಿ(ಮಾ.24): ಪಾಟ್ನಾ ಸಾಹೀಬ್ ಕ್ಷೇತ್ರಕ್ಕೆ ರವಿಶಂಕರ್ ಪ್ರಸಾದ್ ಬಿಜೆಪಿ ಅಭ್ಯರ್ಥಿ ಎಂದು ಘೋಷಣೆಯಾಗುತ್ತಿದ್ದಂತೇ ಶತ್ರುಘ್ನ ಸಿನ್ಹಾ ಪಕ್ಷದ ವಿರುದ್ಧ ತಿರುಗಿ ಬಿದ್ದಿದ್ದಾರೆ.

ಬಿಜೆಪಿ ನಾಯಕತ್ವದ ವಿರುದ್ಧ ಕಿಡಿಕಾರುತ್ತಿದ್ದ ಶತೃಘ್ನ ಸಿನ್ಹಾ ಇದೀಗ ಟಿಕೆಟ್ ನಿರಾಕರಿಸಿದ ಬೆನ್ನಲ್ಲೇ ಬಿಜೆಪಿ ವಿರುದ್ಧ ಅಕ್ಷರಶಃ ಬಂಡಾಯ ನಾಯಕರಾಗಿ ಮಾರ್ಪಟ್ಟಿದ್ದು, ನೇರವಾಗಿಯೇ ಮೋದಿ ಮತ್ತು ಅಮಿತ್ ಶಾ ನಾಯಕತ್ವವನ್ನು ತೀವ್ರವಾಗಿ ಟೀಕಿಸಲು ಪ್ರಾರಂಭಿಸಿದ್ದಾರೆ.

ಬಿಜೆಪಿ ಭೀಷ್ಮ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಉದ್ದೇಶಪೂರ್ವಕವಾಗಿಯೇ ಅಭ್ಯರ್ಥಿಗಳ ಪಟ್ಟಿಯಿಂದ ತೆಗೆದು ಹಾಕಲಾಗಿದ್ದು, ನಿಜಕ್ಕೂ ಇದು ಅತ್ಯಂತ ಕಳವಳಕಾರಿ ಮತ್ತು ನೋವಿನ ಸಂಗತಿ ಎಂದು ಶತೃಘ್ನ ಸಿನ್ಹಾ ಹೇಳಿದ್ದಾರೆ.

Sirji, instead of playing Rafale Baba & Chalis Chokiwdar, which has already fallen flat on its face, it's high time & right time to take some corrective measures (if you still can) & go for damage control soon, sooner the better. Meanwhile it's worrisome, painful and according to

— Shatrughan Sinha (@ShatruganSinha)

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿನ್ಹಾ, ಯಾವುದೇ ಕಾರಣಕ್ಕೂ ಅಮಿತ್ ಶಾ ಹಿರಿಯ ನಾಯಕ ಅಡ್ವಾಣಿ ಅವರಿಗೆ ಸರಿಸಮಾನರಾಗಲು ಸಾಧ್ಯವೇ ಇಲ್ಲ. ಅಡ್ವಾಣಿ ಅವರನ್ನು ಉದ್ದೇಶ ಪೂರ್ವಕವಾಗಿ ತೆಗೆದು ಹಾಕಲಾಗಿದ್ದು, ಇದು ಬಿಜೆಪಿಯ ನಾಚಿಕೆ ಇಲ್ಲದ ನಡೆಯಾಗಿದೆ ಎಂದು ಟೀಕಿಸಿದ್ದಾರೆ.

click me!