ರಾಜಕಾರಣಕ್ಕೆ ತುಂಬಾ ಬುದ್ಧಿ ಬೇಕು: ಶಿವಣ್ಣ ಹೇಳಿಕೆ ಹಿಂದಿನ ಸತ್ಯ!

Published : Mar 24, 2019, 10:31 PM ISTUpdated : Mar 24, 2019, 11:05 PM IST
ರಾಜಕಾರಣಕ್ಕೆ ತುಂಬಾ ಬುದ್ಧಿ ಬೇಕು: ಶಿವಣ್ಣ ಹೇಳಿಕೆ ಹಿಂದಿನ ಸತ್ಯ!

ಸಾರಾಂಶ

ನಟ ಶಿವರಾಜ್ ಕುಮಾರ್ ಸುಮಲತಾ ಅವರಿಗೆ ಬೆಂಬಲ ನೀಡುವ ವಿಚಾರದ ಬಗ್ಗೆ ಮಾತನಾಡಿದ್ದಾರೆ. ನಾನು ರಾಜಕಾರಣದಿಂದ ದೂರ ಎಂದು ಹೇಳಿದ್ದಾರೆ.

ಬೆಂಗಳೂರು[ಮಾ. 24]  ನಾನು ಮಂಡ್ಯಕ್ಕೆ ಸುಮಲತಾ ಪರ ಪ್ರಚಾರಕ್ಕೆ ಹೋಗುತ್ತಿಲ್ಲ. ಸುಮಲತಾ ಕೂಡ ನನ್ನನ್ನು ಬೆಂಬಲ ಕೊರಿಲ್ಲ.  ಸದ್ಯ ಅವರು ಕರೆದರೂ ಹೋಗಲ್ಲ.  ದೇವರು ಬಡವ ನೀನು ಮಡಗಿದ ಹಾಗೆ ಹಾಗೆ ಇರು ಅಂತ ಹೇಳಿದ್ದಾನೆ.  ರಾಜಕೀಯಕ್ಕೆ ಹೋಗಲು ತುಂಬಾ ಬುದ್ಧಿ ಬೇಕು. ನಾನು ಅಷ್ಟು ಬುದ್ದಿವಂತ ಅಲ್ಲ.ಸ್ವಲ್ಪ ಬುದ್ದಿ ಬಂದಿದೆ ಅದನ್ನು ಕಾಪಾಡಿಕೊಳ್ಳುತ್ತೇನೆ ಎಂದು ಹೇಳಿದ್ದು ನಟ ಶಿವರಾಜ್ ಕುಮಾರ್.

ರಾಜಕೀಯ ದಯವಿಟ್ಟು ಬೇಡ ಸಾರ್. ಕಾವೇರಿ ಗಲಾಟೆಯಲ್ಲೂ ಜನ ನಟರು ಬರಲಿಲ್ಲ ಎಂದು ಕೇಳುತ್ತಾರೆ. ಆದರೆ ಅಲ್ಲಿ ಬಂದು ಏನು ಮಾಡೋಣ ಹೇಳಿ. ಜನಪ್ರತಿನಿಧಿಗಳು ಸಮಸ್ಯೆ ಬಗೆಹರಿಸಬೇಕು. ನಮ್ಮನ್ನೂ ಕರೆಯಿರಿ, ಬಂದು ಅವರ ಮನೆ ಮುಂದೆ ಕೂರೋಣ. ಅಲ್ಲಿ ಬಂದರೆ ಜನ ಸೆಲ್ಫಿಗೆ ಮುಗಿ ಬೀಳ್ತಾರೆ. ಕೆಲವು ಬಾರಿ ಎಷ್ಟು ಬೈದರೂ, ಕೋಪ ಮಾಡಿಕೊಂಡರೂ ಅದು ನಿಲ್ಲಲ್ಲ. ಶಿವಮೊಗ್ಗಕ್ಕೂ ಪ್ರಚಾರಕ್ಕೆ ಹೋಗುವುದಿಲ್ಲ. ಅಂದು ನನ್ನ ಪತ್ನಿಗಾಗಿ ಪ್ರಚಾರಕ್ಕೆ ಹೋಗಿದ್ದೆ ಎಂದು ಹೇಳಿದರು.

ಮಂಡ್ಯದಲ್ಲೇ ಠಿಕಾಣಿ ಹೂಡಿದ HDKಯಿಂದ ಮಾಸ್ಟರ್ ಸ್ಟ್ರೋಕ್

ಈಗ ಗೀತಾ ಅವರು ಮಧು ಪರವಾಗಿ ಪ್ರಚಾರಕ್ಕೆ ಹೋಗಬಹುದು. ನಾನು ಬರಬೇಕು ಅಂತ  ಮಧು ಬಂಗಾರಪ್ಪ ಸಹ ಭಾವಿಸುವುದಿಲ್ಲ ಎಂದು ಹೇಳಿದರು.

PREV
click me!

Recommended Stories

ಒಬ್ಬ ನಟ, ಒಂದೇ ಹೆಸರಿನ ಚಿತ್ರಗಳಲ್ಲಿ ಮೂರು ಬಾರಿ ನಟಿಸಿದ್ದಾರೆ ಯಾರು ಈ ನಟ?
ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!