ನಿಖಿಲ್ ಬೆಂಬಲಿಸಿ ಟ್ವೀಟ್ ಮಾಡಿದ ತೇಜಸ್ವಿನಿ ಅನಂತ್ ಕುಮಾರ್

Published : Apr 07, 2019, 01:43 PM IST
ನಿಖಿಲ್ ಬೆಂಬಲಿಸಿ ಟ್ವೀಟ್ ಮಾಡಿದ ತೇಜಸ್ವಿನಿ ಅನಂತ್ ಕುಮಾರ್

ಸಾರಾಂಶ

ಮಂಡ್ಯದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಇದೇ ವೇಳೆ ತೇಜಸ್ವಿನಿ ಅನಂತ್ ಕುಮಾರ್ ನಿಖಿಲ್ ಕುಮಾರಸ್ವಾಮಿ ಕಾರ್ಯ ಮೆಚ್ಚಿ ಟ್ವೀಟ್ ಮಾಡಿದ್ದಾರೆ. 

ಬೆಂಗಳೂರು : ಮಂಡ್ಯ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಚುನಾವಣಾ ಪ್ರಚಾರದಲ್ಲಿ ಬ್ಯಸಿಯಾಗಿದ್ದಾರೆ. 

ಮತದಾರರ ಮನವೊಲಿಕೆಯಲ್ಲಿ ತೊಡಗಿರುವ ನಿಖಿಲ್ ಇತ್ತೀಚೆಗಷ್ಟೇ ಪ್ರಚಾರದ ವೇಳೆ ನಿಖಿಲ್ ಸ್ಟ್ರಾ ಇಲ್ಲದೇ ಎಳನೀರು ಕುಡಿದಿದ್ದು ಸಖತ್ ಸುದ್ದಿಯಾಗಿತ್ತು. 

ಈ ಬಗ್ಗೆ ಇದೀಗ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ತೇಜಸ್ವಿನಿ ಅನಂತ್ ಕುಮಾರ್ ಈ ಬಗ್ಗೆ ಟ್ವೀಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ನಿಖಿಲ್ ಗೌಡ ಸ್ಟ್ರಾ ಇಲ್ಲದೇ ಎಳನೀರು ಕುಡಿತಾನಂತೆ, ಕಾರಣ ಏನೇ ಇರಲಿ. ಇದನ್ನು ನಾವೆಲ್ಲಾ ಕಲಿಲೇಬೇಕು. 

ಯಾಕೆ ಗೊತ್ತಾ ? 

ಬೆಂಗಳೂರಿನಲ್ಲಿ ಪ್ರತಿದಿನ ಲಕ್ಷಾಂತರ ಸ್ಟ್ರಾ ಎಳನೀರು ಕುಡಿದು ಬಿಸಾಕ್ತಿವಿ. ಈ ಸ್ಟ್ರಾಗಳನ್ನು ಮರು ಸಂಸ್ಕರಣೆ ಮಾಡಲಾಗುವುದಿಲ್ಲ. ನೀರಿಗೋ, ಕಾಡಿಗೋ, ಭೂಮಿಗೋ ಸೇರಿ ಮೂಕಪ್ರಾಣಿಗಳಿಗೆ ತೊಂದರೆ, ಸ್ಟ್ರಾ ಉಪಯೋಗ ಬಿಡೋಣ ಎಂದು ಟ್ವೀಟ್ ಮಾಡಿದ್ದಾರೆ. 

 

PREV
click me!

Recommended Stories

ಒಬ್ಬ ನಟ, ಒಂದೇ ಹೆಸರಿನ ಚಿತ್ರಗಳಲ್ಲಿ ಮೂರು ಬಾರಿ ನಟಿಸಿದ್ದಾರೆ ಯಾರು ಈ ನಟ?
ಬಿಗ್ಗೆಸ್ಟ್‌ ಸ್ಟಾರ್‌ ವಾರ್‌ ಇದು! ದಳಪತಿ ವಿಜಯ್‌ ಎದುರು ಕದನಕ್ಕಿಳಿದ ಪ್ರಶಾಂತ್‌ ನೀಲ್-ಎನ್‌ಟಿಆರ್!