ನಿಖಿಲ್ ಬೆಂಬಲಿಸಿ ಟ್ವೀಟ್ ಮಾಡಿದ ತೇಜಸ್ವಿನಿ ಅನಂತ್ ಕುಮಾರ್

By Web DeskFirst Published Apr 7, 2019, 1:43 PM IST
Highlights

ಮಂಡ್ಯದ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಇದೇ ವೇಳೆ ತೇಜಸ್ವಿನಿ ಅನಂತ್ ಕುಮಾರ್ ನಿಖಿಲ್ ಕುಮಾರಸ್ವಾಮಿ ಕಾರ್ಯ ಮೆಚ್ಚಿ ಟ್ವೀಟ್ ಮಾಡಿದ್ದಾರೆ. 

ಬೆಂಗಳೂರು : ಮಂಡ್ಯ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಚುನಾವಣಾ ಪ್ರಚಾರದಲ್ಲಿ ಬ್ಯಸಿಯಾಗಿದ್ದಾರೆ. 

ಮತದಾರರ ಮನವೊಲಿಕೆಯಲ್ಲಿ ತೊಡಗಿರುವ ನಿಖಿಲ್ ಇತ್ತೀಚೆಗಷ್ಟೇ ಪ್ರಚಾರದ ವೇಳೆ ನಿಖಿಲ್ ಸ್ಟ್ರಾ ಇಲ್ಲದೇ ಎಳನೀರು ಕುಡಿದಿದ್ದು ಸಖತ್ ಸುದ್ದಿಯಾಗಿತ್ತು. 

ಈ ಬಗ್ಗೆ ಇದೀಗ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ತೇಜಸ್ವಿನಿ ಅನಂತ್ ಕುಮಾರ್ ಈ ಬಗ್ಗೆ ಟ್ವೀಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ನಿಖಿಲ್ ಗೌಡ ಸ್ಟ್ರಾ ಇಲ್ಲದೇ ಎಳನೀರು ಕುಡಿತಾನಂತೆ, ಕಾರಣ ಏನೇ ಇರಲಿ. ಇದನ್ನು ನಾವೆಲ್ಲಾ ಕಲಿಲೇಬೇಕು. 

ಯಾಕೆ ಗೊತ್ತಾ ? 

ಬೆಂಗಳೂರಿನಲ್ಲಿ ಪ್ರತಿದಿನ ಲಕ್ಷಾಂತರ ಸ್ಟ್ರಾ ಎಳನೀರು ಕುಡಿದು ಬಿಸಾಕ್ತಿವಿ. ಈ ಸ್ಟ್ರಾಗಳನ್ನು ಮರು ಸಂಸ್ಕರಣೆ ಮಾಡಲಾಗುವುದಿಲ್ಲ. ನೀರಿಗೋ, ಕಾಡಿಗೋ, ಭೂಮಿಗೋ ಸೇರಿ ಮೂಕಪ್ರಾಣಿಗಳಿಗೆ ತೊಂದರೆ, ಸ್ಟ್ರಾ ಉಪಯೋಗ ಬಿಡೋಣ ಎಂದು ಟ್ವೀಟ್ ಮಾಡಿದ್ದಾರೆ. 

 

ನಿಖಿಲ್ ಗೌಡ ಸ್ಟ್ರಾ ಇಲ್ಲದೆ ಎಳನೀರು ಕುಡಿತಾನಂತೆ, ಕಾರಣ ಏನೇ ಇರಲಿ😇,
ಇದನ್ನು ನಾವೆಲ್ಲ ಕಲಿಲೇಬೇಕು.
ಯಾಕೆ ಗೊತ್ತಾ ?
ಬೆಂಗಳೂರಿನಲ್ಲಿ ಪ್ರತಿದಿನ ಲಕ್ಷಾಂತರ ಸ್ಟ್ರಾ ಎಳನೀರು ಕುಡಿದು ಬಿಸಾಕ್ತಿವಿ. ಈ ಸ್ಟ್ರಾಗಳು ಮರುಸಂಸ್ಕರಣೆ ಮಾಡಲಾಗುವದಿಲ್ಲ. ನೀರಿಗೊ, ಕಾಡಿಗೊ, ಭೂಮಿಗೊ ಸೇರಿ ಮೂಕಪ್ರಾಣಿಗಳಿಗೆ ತೊಂದರೆ
ಸ್ಟ್ರಾ ಉಪಯೋಗ ಬಿಟ್ಹಾಕೋಣ.

— Chowkidar Tejaswini AnanthKumar (@Tej_AnanthKumar)
click me!