ಲೋಕಸಭಾ ಚುನಾವಣೆ ಪ್ರಚಾರಕ್ಕಾಗಿ ಚಿತ್ರದುರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಚಿತ್ರದುರ್ಗಕ್ಕೆ ಆಗಮಿಸಿದ್ದ ವೇಳೆ ತಂದಿದ್ದ ಬಾಕ್ಸ್ ನಲ್ಲಿ ಇದ್ದಿದ್ದೇನು ಎಂದು ಇಲ್ಲಿನ ಎಸ್ ಪಿ ಮಾಹಿತಿ ನೀಡಿದ್ದಾರೆ.
ಚಿತ್ರದುರ್ಗ: ಚಿತ್ರದುರ್ಗ ಸಮಾವೇಶದ ವೇಳೆ ಪ್ರಧಾನಿ ಮೋದಿಯೊಂದಿಗೆ ಆಗಮಿಸಿದ್ದ ಭದ್ರತಾ ಸಿಬ್ಬಂದಿ ರಹಸ್ಯ ಪೆಟ್ಟಿಗೆಯೊಂದನ್ನು ಖಾಸಗಿ ವಾಹನದಲ್ಲಿ ಕೊಂಡೊಯ್ದಿರುವ ವಿಚಾರ ವಿವಾದಕ್ಕೆ ಗುರಿಯಾದ ಬೆನ್ನಲ್ಲೇ ಚಿತ್ರದುರ್ಗ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಈ ಕುರಿತು ಸ್ಪಷ್ಟನೆ ನೀಡಿದ್ದಾರೆ.
ಆ ಪೆಟ್ಟಿಗೆಯಲ್ಲಿದ್ದುದು ‘ಭದ್ರತಾ ಸಲಕರಣೆಗಳು’ ಎಂದು ಭದ್ರತಾ ಸಂಸ್ಥೆಗಳ ಮಾಹಿತಿಯನ್ನು ಆಧರಿಸಿ ತಿಳಿಸಿದ್ದಾರೆ. ‘ಆ ಬಾಕ್ಸ್ನಲ್ಲಿ ಭದ್ರತೆಗೆ ಸಂಬಂಧಿಸಿದ ಸಲಕರಣೆಗಳಿದ್ದವು, ಈ ಪೆಟ್ಟಿಗೆಯನ್ನು ಕೊಂಡೊಯ್ಯಲಾದ ಕಾರು ಕೂಡ ಬೆಂಗಾವಲು ಪಡೆಯ ಭಾಗವಾಗಿತ್ತು ಎಂದು ಭದ್ರತಾ ಸಂಸ್ಥೆಗಳಿಂದ ಮಾಹಿತಿ ಬಂದಿದೆ.
ಹೆಚ್ಚುವರಿ ಮಾಹಿತಿಯನ್ನು ಕಲೆಹಾಕಲಾಗುತ್ತಿದೆ’’ ಎಂದು ಎಸ್ಪಿ ಭಾನುವಾರ ಹೇಳಿದ್ದಾರೆ.