ವಾರಾಣಸಿ: ಮೋದಿ ನಾಮಪತ್ರ ಅನರ್ಹಗೊಳ್ಳುತ್ತಾ?

By Web DeskFirst Published Apr 30, 2019, 5:18 PM IST
Highlights

ಪ್ರಧಾನಿ ಮೋದಿ ನಾಮಪತ್ರಕ್ಕೆ ತಿರಸ್ಕಾರಕ್ಕೆ ಟಿಎಂಸಿ ಆಗ್ರಹ| ಪ್ರಧಾನಿ ವಿರುದ್ಧ ಕುದುರೆ ವ್ಯಾಪಾರದ ಆರೋಪ| 40 ಟಿಎಂಸಿ ಶಾಸಕರು ತಮ್ಮ ಸಂಪರ್ಕದಲ್ಲಿರುವುದಾಗಿ ಹೇಳಿದ್ದ ಪ್ರಧಾನಿ| ನಾಮಪತ್ರ ತಿರಸ್ಕಾರಕ್ಕೆ ಆಗ್ರಹಿಸಿ ಚುನಾವಣಾ ಆಯೋಗಕ್ಕೆ ಟಿಎಂಸಿ ಪತ್ರ| 

ನವದೆಹಲಿ(ಏ.30): ತಮ್ಮ ಜೊತೆ 40 ಟಿಎಂಸಿ ಶಾಸಕರು ಸಂಪರ್ಕದಲ್ಲಿರುವುದಾಗಿ ಹೇಳಿಕೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ನಾಮಪತ್ರ ತಿರಸ್ಕಾರಕ್ಕೆ ಟಿಎಂಸಿ ಆಗ್ರಹಿಸಿದೆ.

ಖುದ್ದು ಪ್ರಧಾನಿಯೇ ಶಾಸಕರ ಕುದುರೆ ವ್ಯಾಪರಕ್ಕೆ ಮುಂದಾಗಿರುವುದು ನಾಚಿಕೆಗೇಡಿನ ಸಂಗತಿ ಎಂದಿರುವ ಟಿಎಂಸಿ, ಇಂತಹ ಪ್ರಚೋದನಕಾರಿ ಮತ್ತು ಪ್ರಜಾಪ್ರಭುತ್ವ ವಿರೋಧಿ ಹೇಳಿಕೆ ನೀಡಿದ ಪ್ರಧಾನಿ ಮೋದಿ ಅವರ ನಾಮಪತ್ರವನ್ನು ರದ್ದುಗೊಳಿಸಬೇಕು ಎಂದು ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ.

TMC writes a letter to EC alleging violation of the Model Code of Conduct by PM Narendra Modi, "encouraging horse trading, by hinting that the members of the AITC will cross over to the BJP, and using this lie to influence the voters and using this lie to persuade the voters."

— ANI (@ANI)

ಈ ಕುರಿತು ಚುನಾವಣಾ ಆಯೋಗಕ್ಕೆ ಪತ್ರ ಬರೆದಿರುವ ಟಿಎಂಸಿ, ಅಕ್ರಮ ಪ್ರಚಾರದಲ್ಲಿ ತೊಡಗಿರುವ ಪ್ರಧಾನಿ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದೆ.

ನಿನ್ನೆ(ಏ.29) ಕೋಲ್ಕತ್ತಾದಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿ, ಟಿಎಂಸಿಯ 40 ಶಾಸಕರು ತಮ್ಮ ಸಂಪರ್ಕದಲ್ಲಿದ್ದು, ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡ ನಂತರ ಅವರೆಲ್ಲರೂ ಬಿಜೆಪಿ ಸೇರಲಿದ್ದಾರೆ ಎಂದು ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

ಲೋಕಸಭೆ ಚುನಾವಣೆಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

click me!