ಮಂಡ್ಯದಲ್ಲಿ ನಿಷೇಧಾಜ್ಞೆ : ಮದ್ಯ ಮಾರಾಟಕ್ಕೂ ಬ್ರೇಕ್

By Web DeskFirst Published May 18, 2019, 10:49 AM IST
Highlights

ಮಂಡ್ಯದಲ್ಲಿ ನಿಷೇಧಾಜ್ಞೇ ಜಾರಿಗೆ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ. ಮದ್ಯ ಮಾರಾಟಕ್ಕೂ ಕೂಡ ಬ್ರೇಕ್ ಹಾಕಲಾಗುತ್ತಿದೆ. 

ಮಂಡ್ಯ : ಲೋಕಸಭಾ ಚುನಾವಣೆ ಫಲಿತಾಂಶ ಮೇ 23 ರಂದು ಪ್ರಕಟವಾಗಲಿದ್ದು, ಈ ನಿಟ್ಟಿನಲ್ಲಿ 2 ದಿನಗಳ ಕಾಲ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. 

"

ಫಲಿತಾಂಶದ ವೇಳೆ ಘರ್ಷಣೆ ಸಂಭವಿಸುವ ಸಾಧ್ಯತೆ ಇದ್ದು, ಈ ನಿಟ್ಟಿನಲ್ಲಿ ಮೇ 23 ಹಾಗೂ 24 ರಂದು ನಿಷೇಧಾಜ್ಞೆ ಜಾರಿಯಾಗಲಿದೆ. ಜಿಲ್ಲೆಯಲ್ಲಿ ಯಾವುದೇ ರೀತಿಯಾದ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಧಿಕಾರಿ ಪಿ.ಸಿ ಜಾಫರ್ ನಿಷೇಧಾಜ್ಞೆ ಜಾರಿಗೆ ಆದೇಶ ನೀಡಿದ್ದಾರೆ. 

ಮೇ 23ರ ಮುಂಜಾನೆ 6 ಗಂಟೆಯಿಂದ  ಮೇ 24ರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಮಂಡ್ಯ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಈ ವೇಳೆ ಸ್ಫೋಟಕ ಬಳಕೆ, ಗುಂಪಾಗಿ ಸೇರುವುದು. ಸಭೆ ಸೇರುವುದು, ವಿಜಯೋತ್ಸವ ಆಚರಣೆಗೆ ನಿಷೇಧ ಹೇರಲಾಗಿದೆ. ಅಲ್ಲದೇ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸುವಂತೆ ಆದೇಶ ನೀಡಲಾಗಿದೆ. 

ಅಲ್ಲದೇ ನಿಷೇಧಾಜ್ಞೇ ವೇಳೆ ಮಂಡ್ಯ ಜಿಲ್ಲಾಧಿಕಾರಿ ಮದ್ಯ ಮಾರಾಟಕ್ಕೂ ಬ್ರೇಕ್ ಹಾಕಿದ್ದಾರೆ.

ಗೆದ್ದವರಾರು? ಬಿದ್ದವರಾರು ? ಮಹಾಸಂಗ್ರಾಮದ ಮಹಾಫಲಿತಾಂಶ. ಗುರುವಾರ 23 ಮೇ.

click me!