
ಬೆಂಗಳೂರು(ಅ.28): ನಿರ್ದೇಶಕ ಟಿ.ಎಸ್. ನಾಗಾಭರಣ ಹೊಸ ಸಿನಿಮಾ ಶುರು ಮಾಡಿದ್ದಾರೆ. ಅದರ ಹೆಸರು ‘ಕಾನೂರಾಯಣ’. ಈ ಹಿಂದೆ ನಿರ್ದೇಶಕ ಪವನ್ಕುಮಾರ್ ಕ್ರೌಡ್ ಫಂಡಿಂಗ್ ಮೂಲಕ ‘ಲೂಸಿಯಾ’ ಸಿನಿಮಾ ನಿರ್ದೇಶಿಸಿದ್ದರು. ಅದೇ ಥರ ನಾಗಾಭರಣರ ಹೊಸ ಸಿನಿಮಾಗೆ 20 ಲಕ್ಷ ಮಂದಿ ಹಣ ಹೂಡಲಿದ್ದಾರಂತೆ.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸ್ವಸಹಾಯ ಸಂಘಗಳ ಒಕ್ಕೂಟ ಈ ಚಿತ್ರದ ನಿರ್ಮಾಣದ ಜವಾಬ್ದಾರಿ ಹೊತ್ತಿದೆ. ‘ಯೋಜನೆಯ ಸುಮಾರು 20 ಲಕ್ಷ ಸದಸ್ಯರು ತಲಾ 20 ರೂ.ನಂತೆ ಹಣ ಸಂಗ್ರಹಿಸಿ ನೀಡಿದ್ದಾರೆ. ಒಟ್ಟಾರೆ 5 ಕೋಟಿ ರೂ. ಸಂಗ್ರಹ ನಿರೀಕ್ಷೆ ಇದೆ’ ಎಂದು ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ನಟ ಸ್ಕಂದ, ಸೋನುಗೌಡ, ಜಾನ್ವಿ ಜ್ಯೋತಿ, ದೊಡ್ಡಣ್ಣ, ಸುಂದರ್ರಾಜ್, ಗಿರಿಜಾ ಲೋಕೇಶ್ ನಟಿಸಲಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.