
ಹೇಳಿಕೇಳಿ ಈ ಚಿತ್ರದ ನಿರ್ಮಾಪಕ, ನಾಯಕ ಮತ್ತು ಕಥೆ ಚಿತ್ರಕಥೆ, ಸಭಾಷಣೆಕಾರ ದೇವ್ ಅವರು ರಂಗಭೂಮಿಯಿಂದಲೇ ಬಂದವರು. ತಾವೊಂದು ಚಿತ್ರ ಮಾಡಿದರೆ ರಂಗಭೂಮಿ ಕಲಾವಿದರಿಗೆ ಹೆಚ್ಚಿನ ಆಧ್ಯತೆ ಕೊಡಬೇಕೆಂಬ ಮಹದಾಸೆ ಅವರಿಗಿತ್ತು. ಅದನ್ನು ಈ ಸಿನಿಮಾ ಮೂಲಕ ಅಕ್ಷರಶಃ ಮಾಡಿ ತೋರಿಸಿದ್ದಾರೆ.
ಧ್ರುವ ಮೆಚ್ಚಿದ ಗಿಣಿ ಹೇಳಿದ ಕತೆ ಜ.11ಕ್ಕೆ
ಅದಕ್ಕೆ ಈ ಚಿತ್ರದ ತಾರಾಗಣವೇ ಸಾಕ್ಷಿಯಾಗುತ್ತೆ. ಯಾಕೆಂದರೆ, ಇದರಲ್ಲಿ ಬಹುಪಾಲು ರಂಗಭೂಮಿ ಕಲಾವಿದರೇ ನಟಿಸಿದ್ದಾರೆ. ಗಿಣಿ ಹೇಳಿದ ಕಥೆಯಲ್ಲಿ ಒಟ್ಟು ಎಂಬತ್ತೇಳು ಪಾತ್ರಗಳಿವೆ. ಅದರಲ್ಲಿ ಎಂಬತ್ನಾಲಕ್ಕು ಪಾರತ್ರಗಳಿಗೆ ರಂಗಭೂಮಿ ಕಲಾವಿದರೇ ಜೀವ ತುಂಬಿದ್ದಾರೆ. ಸಾಮಾನ್ಯವಾಗಿ ಚಿತ್ರಗಳಲ್ಲಿ ರಂಗಭೂಮಿ ಕಲಾವಿದರಿಗೆ ಅವಕಾಶ ಸಿಗೋದೇ ಅಪರೂಪ. ಆದರೆ ಈ ಚಿತ್ರದಲ್ಲಿ ಕರ್ನಾಟಕದ ಮೂಲೆ ಮೂಲೆಯ ಕಲಾವಿದರೂ ನಟಿಸಿದ್ದಾರೆ.
ದೇಸಿ ಕಥೆಗೆ ಕ್ರಿಯೇಟಿವ್ ಝಲಕ್ ನೀಡಿದ ’ಗಿಣಿ ಹೇಳಿದ ಕಥೆ’
ಈ ಸಿನಿಮಾ ಸಂಗೀತ ನಿರ್ದೇಶನ ಮಾಡಿರುವವರು ಹಿತನ್ ಹಾಸನ್. ಅವರ ಮೂರನೇ ಚಿತ್ರವಿದು. ಸ್ಯಾಂಡಲ್ವುಡ್ನ ಪ್ರತಿಭಾನ್ವಿತ ಸಂಗೀತ ನಿರ್ದೇಶಕ ಎನ್ನುವುದರಲ್ಲಿ ಅನುಮಾನವೇ ಇಲ್ಲ. ಈ ಚಿತ್ರದ ಭಿನ್ನವಾದ ಕಥೆಗೆ ಪೂರಕವಾದ ಸಂಗೀತ ಸಂಯೋಜನೆ ಮಾಡುವುದೇ ಸವಾಲಾಗಿತ್ತು. ಅದನ್ನು ಹಿತನ್ ಸಮರ್ಥವಾಗಿ ನಿಭಾಯಿಸಿದ್ದಾರೆ. ಈ ಬಗ್ಗೆ ಎಲ್ಲೆಡೆಯಿಂದ ಮೆಚ್ಚುಗೆಯೂ ಕೇಳಿ ಬರುತ್ತಿದೆ. ಸೀಮಿತ ಬಜೆಟ್ಟಿನಲ್ಲಿ, ಸೀಮಿತವಾದ ಪರಿಕರಗಳೊಂದಿಗೆ ಹಿತನ್ ಹಾಡುಗಳನ್ನು ರೂಪಿಸಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.