ತೆಲುಗು ಕಿರುತೆರೆಗೆ ಹಾರಿದ ಕನ್ನಡದ ನಟ!

Published : Feb 03, 2019, 09:28 AM IST
ತೆಲುಗು ಕಿರುತೆರೆಗೆ ಹಾರಿದ ಕನ್ನಡದ ನಟ!

ಸಾರಾಂಶ

ಸ್ಯಾಂಡಲ್‌ವುಡ್ ನಟ ಚಂದನ್ ಕುಮಾರ್ ಇದೀಗ ತೆಲುಗು ಕಿರುತೆರೆಗೆ ’ಸಾವಿತ್ರಮ್ಮಗಾರೂ ಅಬ್ಬಿ’ ಧಾರಾವಾಹಿ ಮೂಲಕ ಪಾದಾರ್ಪಣೆ ಮಾಡಿದ್ದಾರೆ.

ಬಿಗ್‌ಬಾಸ್ ಖ್ಯಾತಿಯ ಚಂದನ್ ಬೆಳ್ಳಿತೆರೆ ಹಾಗೂ ಕಿರುತೆರೆಯಲ್ಲಿ ಬ್ಯುಸಿಯಾಗಿದ್ದರು. ಬಿಗ್ ಬಾಸ್ ಮನೆಯಿಂದ ಹೊರಬಂದ ನಂತರ ಮೊದಲು ಮಾಡಿದ ಚಿತ್ರ 'ಲವ್ ಯು ಆಲಿಯಾ' , ಇದರಲ್ಲಿ ಮಾದಕ ತಾರೆ ಸನ್ನಿ ಲಿಯೋನ್ ನೊಂದಿಗೆ ಕಾಣಿಸಿಕೊಂಡು ಸಿಕ್ಕಾಪಟ್ಟೆ ಸುದ್ದಿಯಲ್ಲಿದ್ರು.

ಇನ್ನು ಕಿರುತೆರೆ ವಿಚಾರದಲ್ಲಿ ಚಂದನ್ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ’ಲಕ್ಷ್ಮೀ ಬಾರಮ್ಮ’ ಸೀರಿಯಲ್ ಮಾಡಿದ್ದು ಇದಾದ ನಂತರ ಸದ್ಯಕ್ಕೆ ’ಸರ್ವಮಂಗಳ ಮಾಂಗಲ್ಯ’ ಧಾರವಾಹಿಯಲ್ಲಿ ಮಾಡುತ್ತಿದ್ದಾರೆ.

ಈಗ ತಮಿಳು ಕಿರುತೆರೆಯಲ್ಲಿ ಮೂಡಿ ಬರಲಿರುವ ’ಸಾವಿತ್ರಮ್ಮಗಾರೂ ಅಬ್ಬಿ’ ಸೀರಿಯಲ್‌ನಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪಾತ್ರದ ಹೆಸರು ಬಾಲ್ರಾಜ್. ಬಲಶಾಲಿ ಕುಸ್ತಿಪಟೂ ಆದರೂ ಹುಡುಗಿಯರನ್ನು ಕಂಡರೆ ಮಾರು ದೂರ ಓಡುವ ಹುಡುಗನ ಪಾತ್ರ. ಇದರ ಬಗ್ಗೆ ಚಂದನ್ ತನ್ನ ಇನ್‌ಸ್ಟಾಗ್ರಾಂ ಖಾತೆಯಲ್ಲಿ ವಿಡಿಯೋ ಅಪ್ಲೋಡ್ ಮಾಡಿದ್ದಾರೆ.

 

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

BBK 12: ಪದೇ ಪದೇ ಕಿಚ್ಚ ಸುದೀಪ್‌ ಹೇಳ್ತಿರುವಂತೆ ರಜತ್‌ ವೈರಲ್ ವಿಡಿಯೋ ಅಸಲಿ ವಿಷಯ ಏನು? ಅಂಥದ್ದೇನಿದೆ?
ಏನೂ ಮಾಡದೆ ಸ್ಪಂದನಾ ಸೋಮಣ್ಣ Bigg Boss ಮನೇಲಿ ಇರೋದು ಹೇಗೆ? ಕಿಚ್ಚ ಸುದೀಪ್‌ ಬಿಚ್ಚಿಟ್ಟ ಸತ್ಯ ಏನು?