
ಬೆಂಗಳೂರು (ಆ. 17): ವರುಣನ ಆರ್ಭಟಕ್ಕೆ ಕೇರಳ ಅಕ್ಷರಶಃ ತತ್ತರಿಸಿದೆ. ಹೆಚ್ಚಿನ ಜನರು ಮನೆಯನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ.
ಪವರ್ ಸ್ಟಾರ್ ಪುನೀತ್ ಇವರಿಗೆ ನೆರವಿನ ಹಸ್ತಚಾಚಿದ್ದಾರೆ. ನೆರೆ ಸಂತ್ರಸ್ತರಿಗೆ ಕೇರಳ ಸಿಎಂ ನಿಧಿಗೆ 5 ಲಕ್ಷ ರೂ ನೀಡಿದ್ದಾರೆ.
ಪುನೀತ್ ರಂತೆ ಈಗಾಗಲೇ ಅನೇಕ ನಟರು ಧನ ಸಹಾಯ ಮಾಡಿದ್ದಾರೆ. ಅಲ್ಲು ಅರ್ಜುನ್ 25 ಲಕ್ಷ, ವಿಜಯ್ ದೇವರಕೊಂಡ 5 ಲಕ್ಷ, ಕಮಲ್ ಹಾಸನ್ 25 ಲಕ್ಷ, ಸೂರ್ಯ ಮತ್ತು ಕಾರ್ತಿ 25 ಲಕ್ಷ ನೀಡಿದ್ದಾರೆ.
ಕೇರಳದಲ್ಲಿ ವರುಣನ ಆರ್ಭಟ ಇನ್ನು ಮುಂದುವರೆದಿದೆ. ಪ್ರವಾಹದಲ್ಲಿ 167 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ನಾಳೆವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ವರದಿ ಹೇಳಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.