ಸಹೋದರನ ಆರೋಗ್ಯ ವಿಚಾರಿಸಿಲು ಬೆಂಗಳೂರಿಗೆ ಬಂದ ಸೂಪರ್ ಸ್ಟಾರ್

Published : Aug 29, 2019, 12:09 PM IST
ಸಹೋದರನ ಆರೋಗ್ಯ ವಿಚಾರಿಸಿಲು ಬೆಂಗಳೂರಿಗೆ ಬಂದ ಸೂಪರ್ ಸ್ಟಾರ್

ಸಾರಾಂಶ

ತಮಿಳು ಸೂಪರ್ ಸ್ಟಾರ್ ರಜಿನಿಕಾಂತ್ ಬೆಂಗಳೂರಿಗೆ ಆಗಮಿಸಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಅವರ ಸಹೋದರ ಸತ್ಯನಾರಾಯಣ ರಾವ್ ಆರೋಗ್ಯ ವಿಚಾರಿಸಿದ್ದಾರೆ.

ಬೆಂಗಳೂರು [ಆ.29]: ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಬೆಂಗಳೂರಿಗೆ ಆಗಮಿಸಿ, ಅನಾರೋಗ್ಯ ನಿಮಿತ್ತ ಆಸ್ಪತ್ರೆಗೆ ದಾಖಲಾದ ಸಹೋದರನ ಆರೋಗ್ಯ ವಿಚಾರಿಸಿದರು.

ಸಹೋದರ ಸತ್ಯನಾರಾಯಣ ರಾವ್ ಅವರು ಅನಾರೋಗ್ಯ ನಿಮಿತ್ತ ಬೆಂಗಳೂರಿನ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಯೋಗಕ್ಷೇಮ ವಿಚಾರಿಸುವ ಸಲುವಾಗಿ ರಜನಿ ಬೆಂಗಳೂರಿಗೆ ಬುಧವಾರ ಭೇಟಿ ನೀಡಿದ್ದರು. 

ಅವರ ಸಹೋದರ ಸತ್ಯನಾರಾಯಣ ರಾವ್ ಅವರಿಗೆ ಶಸ್ತ್ರ ಚಿಕಿತ್ಸೆ ನಡೆಸಿದ್ದು, ಅವರ ಆರೋಗ್ಯ ವಿಚಾರಿಸಿದರು.  

ಈ ವೇಳೆ ರಜಿನಿಕಾಂತ್ ಅವರ ಸಹೋದರ ಸತ್ಯನಾರಾಯಣ ರಾವ್ ಅವರ ಆರೋಗ್ಯ ಸ್ಥಿತಿ ಬಗ್ಗೆ ಪ್ರತಿಕ್ರಿಯಿಸಿದ ಇಲ್ಲಿನ ವೈದ್ಯರಾದ ಕಿರಣ್ ಚೌಕ, ಸದ್ಯ ಸತ್ಯನಾರಾಯಣ ರಾವ್ ಅವರು ಚೇತರಿಸಿಕೊಳ್ಳುತ್ತಿದ್ದು, ಸರ್ಜರಿ ನಡೆಸಿದ ದಿನವೇ ನಡೆದಾಡುವಷ್ಟು ಶಕ್ತರಾಗಿದ್ದಾರೆ ಎಂದರು.  

ಸೂಪರ್ ಸ್ಟಾರ್ ಬೆಂಗಳೂರಿಗೆ ಆಗಮಿಸುವ ಸುದ್ದಿ ತಿಳಿಯುತ್ತಿದ್ದಂತೆ ಹೆಚ್ಚಿನ ಸಂಖ್ಯೆಯ ಅಭಿಮಾನಿಗಳು ಆಸ್ಪತ್ರೆಯ ಬಳಿ ಜಮಾಯಿಸಿ, ಸಂಚಾರ ದಟ್ಟಣೆ ಉಂಟಾಗಿತ್ತು.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

Bigg Boss ಬಗ್ಗೆ ನಂಬಲಸಾಧ್ಯ, ಯಾರೂ ಹೇಳದ ಗುಟ್ಟುಗಳನ್ನು ರಿವೀಲ್​ ಮಾಡಿದ ಅಭಿಷೇಕ್​ ಶ್ರೀಕಾಂತ್​
ಶಿರಸಿ ಸಾಯಿಬಾಬಾಗೆ ಬಲು ದುಬಾರಿಯ ಚಿನ್ನದ ಕಿರೀಟ ಅರ್ಪಿಸಿದ ನಟಿ ಮಾಲಾಶ್ರೀ: ಕಾರಣವೂ ರಿವೀಲ್​!