ಶ್ರೀ ರೆಡ್ಡಿ ವಿರುದ್ಧ ಗರಂ ಆಗಿದ್ದ ನಟಿ ಕವಿತಾಗೆ ಜೀವ ಬೆದರಿಕೆ

Published : Apr 21, 2018, 01:08 PM ISTUpdated : Apr 21, 2018, 01:57 PM IST
ಶ್ರೀ ರೆಡ್ಡಿ ವಿರುದ್ಧ ಗರಂ ಆಗಿದ್ದ ನಟಿ ಕವಿತಾಗೆ ಜೀವ ಬೆದರಿಕೆ

ಸಾರಾಂಶ

ತೆಲುಗು ಸಿನಿಮಾ ಇಂಡಸ್ಟ್ರಿಯಲ್ಲಿ ಲೈಂಗಿಕ ಕಿರುಕುಳ ನೀಡಲಾಗುತ್ತಿದೆ ಎನ್ನುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ, ತೆಲುಗು ನಟಿ ಶ್ರೀ ರೆಡ್ಡಿ ವಿರುದ್ಧ ಗರಂ ಆಗಿದ್ದ ಸ್ಯಾಂಡಲ್​ವುಡ್ ನಟಿ ಕವಿತಾ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಬೆಂಗಳೂರು : ತೆಲುಗು ಸಿನಿಮಾ ಇಂಡಸ್ಟ್ರಿಯಲ್ಲಿ ಲೈಂಗಿಕ ಕಿರುಕುಳ ನೀಡಲಾಗುತ್ತಿದೆ ಎನ್ನುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ, ತೆಲುಗು ನಟಿ ಶ್ರೀ ರೆಡ್ಡಿ ವಿರುದ್ಧ ಗರಂ ಆಗಿದ್ದ ಸ್ಯಾಂಡಲ್​ವುಡ್ ನಟಿ ಕವಿತಾ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಇತ್ತೀಚೆಗಷ್ಟೇ ತೆಲುಗು ನಟಿ ಶ್ರೀ ರೆಡ್ಡಿ, ಟಾಲಿವುಡ್​​ನಲ್ಲಿ ಬಹಳ ಕೀಳಮಟ್ಟದಲ್ಲಿ ನಡೆಸಿಕೊಳ್ಳಲಾಗುತ್ತದೆ. ಜೊತೆಗೆ ಲೈಂಗಿಕ ಕಿರುಕುಳ ಸರ್ವೆ ಸಾಮಾನ್ಯವಾಗಿದೆ ಎಂದು ಆರೋಪಿಸಿದ್ದರು. ಅಲ್ಲದೇ ನಟಿ ಶ್ರೀ ರೆಡ್ಡಿ ಅರೆ ಬೆತ್ತಲೆಯಾಗಿ ಪ್ರತಿಭಟಿಸಿ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದರು.

ಇದರ ಬೆನ್ನಲ್ಲೇ, ಈ ಕುರಿತು ಸ್ಯಾಂಡಲ್​​ವುಡ್​ ನಟಿ ಕವಿತಾ, ಅರೆಬೆತ್ತಲೆಯಾದ ವಿಡಿಯೋ ಮಾಡಿ, ಅದರಲ್ಲಿ ಯಾವುದೇ ಇಂಡಸ್ಟ್ರಿ ಬಗ್ಗೆ ಮಾತನಾಡುವಾಗ ಎಚ್ಚರ ವಹಿಸಿ ಮಾತ ನಾಡಬೇಕು. ಇಲ್ಲವಾದಲ್ಲಿ ಆಯಾ ಸಿನಿಮಾ ಇಂಡಸ್ಟ್ರಿಗಳ ಲೆಜೆಂಡ್​ಗಳಿಗೆ ಅವಮಾನ ಮಾಡಿದಂತಾಗುತ್ತದೆ ಎಂದು ಹೇಳಿ ಶ್ರೀರೆಡ್ಡಿಗೆ ಟಾಂಗ್​ ಕೊಟ್ಟಿದ್ದರು. ಅಲ್ಲದೇ ಅದರಲ್ಲಿ ಬಟ್ಟೆ ಬಿಚ್ಚಿ ಬೋಲ್ಡ್ ಆಗಿರುವುದು ಹೇಗೆಂದು ಹೇಳಿದ್ದರು.  

ಇದರ ಬೆನ್ನಲ್ಲೇ ನಟಿ ಕವಿತಾಗೆ ಇದೀಗ ಜೀವ ಬೆದರಿಕೆ ಫೋನ್​ ಕರೆಗಳು ಬರುತ್ತಿವೆ ಎಂದು ಹೇಳಿದ್ದಾರೆ.  24 ಗಂಟೆಯೊಳಗೆ ನೀನು ಪೋಸ್ಟ್​ ಮಾಡಿರುವ ವಿಡಿಯೋ ಡಿಲೀಟ್​ ಮಾಡಬೇಕು. ಅಲ್ಲದೇ ನೀನು ಅಪ್​ಲೋಡ್​ ಮಾಡಿರುವ ವಿಡಿಯೋ ಬಗ್ಗೆ ಕ್ಷಮೆಯಾಚಿಸಿ ಮತ್ತೊಂದು ವಿಡಿಯೋ ಅಪ್​ಲೋಡ್ ​ಮಾಡಬೇಕು, ಇಲ್ಲವಾದಲ್ಲಿ ನಿನ್ನ ಕಥೆ ಮುಗಿಸಲಾಗುತ್ತದೆ ಎಂದು  ಬೆದರಿಕೆ ಒಡ್ಡಲಾಗಿದೆ ಎಂದು ಕವಿತಾ ಹೇಳಿದ್ದಾರೆ.

ಈ ಕುರಿತು ನಟಿ ಕವಿತಾ ನಿನ್ನೆ ತಡ ರಾತ್ರಿ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ತೆರಳಿದ್ದು,   ಈ ಪ್ರಕರಣ ತಮ್ಮ ವ್ಯಾಪ್ತಿಗೆ ಬಾರದ ಕಾರಣ ಸೈಬರ್ ಪೊಲೀಸರಿಗೆ ನೀಡುವಂತೆ ಉಪ್ಪಾರಪೇಟೆ ಠಾಣೆ ಪೊಲೀಸರು ಕವಿತಾಗೆ ಸಲಹೆ ನೀಡಿದ್ದಾರೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

click me!

Recommended Stories

ಇದ್ದಕ್ಕಿದ್ದಂತೆ ಹೆಸರು ಬದಲಾಯಿಸಿಕೊಂಡ ರಶ್ಮಿಕಾ ಮಂದಣ್ಣ; ದೇವರಕೊಂಡ ಫ್ಯಾಮಿಲಿ ರಿಯಾಕ್ಷನ್ ಏನ್ ಗೊತ್ತಾ?
Ram Charan: ಮದುವೆ ವಾರ್ಷಿಕೋತ್ಸವಕ್ಕೆ ಸರ್ಪ್ರೈಸ್ ಕೊಟ್ಟ ರಾಮ್ ಚರಣ್-ಉಪಾಸನಾ! ಅವಳಿ ಮಕ್ಕಳ ಫೋಟೋ ವೈರಲ್